Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆ ಸಂದರ್ಭದಲ್ಲಿ ನಾನು ವಿರಾಟ್‌...

ಆ ಸಂದರ್ಭದಲ್ಲಿ ನಾನು ವಿರಾಟ್‌ ಭಯ್ಯಾರನ್ನು ಓಡಿ ಹೋಗಿ ಆಲಂಗಿಸಿದ್ದೆ: ಅದ್ಭುತ ಕ್ಷಣವನ್ನು ನೆನಪಿಸಿದ ಸಿರಾಜ್

ವಾರ್ತಾಭಾರತಿವಾರ್ತಾಭಾರತಿ19 Feb 2022 2:40 PM IST
share
ಆ ಸಂದರ್ಭದಲ್ಲಿ ನಾನು ವಿರಾಟ್‌ ಭಯ್ಯಾರನ್ನು ಓಡಿ ಹೋಗಿ ಆಲಂಗಿಸಿದ್ದೆ: ಅದ್ಭುತ ಕ್ಷಣವನ್ನು ನೆನಪಿಸಿದ ಸಿರಾಜ್

ಹೊಸದಿಲ್ಲಿ: ಯುವ, ಪ್ರತಿಭಾನ್ವಿತ ಬೌಲರ್ ಮೊಹಮ್ಮದ್ ಸಿರಾಜ್  ತಮಗೆ ಕ್ರಿಕೆಟಿಗ ಹಾಗೂ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ನೀಡಿರುವ ಪ್ರೋತ್ಸಾಹವನ್ನು ನೆನಪಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಮೇಲೆ ಅಪಾರ ಗೌರವ ಹೊಂದಿರುವ 27 ವರ್ಷದ ಸಿರಾಜ್, 2018ರಲ್ಲಿ ಐಪಿಎಲ್ ವೇಳೆಯ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರಲ್ಲದೆ ವಿರಾಟ್ ಅವರು ತೋರಿದ ಔದಾರ್ಯವನ್ನು ಕೊಂಡಾಡಿದ್ದಾರೆ. ಅದು ತಮ್ಮ ಜೀವನದ ಅತ್ಯಪೂರ್ವ ಕ್ಷಣವೆಂದು ಆರ್‌ಸಿಬಿ ಪಾಡ್‍ಕಾಸ್ಟ್ ನಲ್ಲಿ ಅವರು ಹೇಳಿಕೊಂಡಿದ್ದಾರೆ.

"ಆಗ ನಾನು ಆರ್‍ಸಿಬಿ ತಂಡದ ಎಲ್ಲರನ್ನೂ ನನ್ನ ಮನೆಗೆ ಊಟಕ್ಕೆ  ಆಹ್ವಾನಿಸಿದ್ದೆ. ಹೋಟೆಲ್‍ನಿಂದ ನೇರ ಮನೆಗೆ ತೆರಳಿದ. ನಾನು ಅವರಿಗೆ (ವಿರಾಟ್) ಕರೆ ಮಾಡಿದಾಗ "ಬೆನ್ನಿನ ಸಮಸ್ಯೆಯಿದೆ, ಬರಲು ಸಾಧ್ಯವಿಲ್ಲ" ಎಂದರು. ನಾನು ಅವರಿಗೆ "ನೀವು ವಿಶ್ರಾಂತಿ ತೆಗೆದುಕೊಳ್ಳಿ" ಎಂದು ಹೇಳಿದೆ. ಅದಕ್ಕಿಂತ ಹೆಚ್ಚೇನು ಹೇಳಬಲ್ಲೆ ಎಂದು ಪಾಡ್‍ಕಾಸ್ಟ್ ನಲ್ಲಿ ಸಿರಾಜ್ ಹೇಳಿದ್ದಾರೆ.

"ಆದರೆ ನಂತರ ಎಲ್ಲರೂ ಬಂದಾಗ, ಅವರು ಕೂಡ ಕಾರಿನಿಂದ ಇಳಿಯುತ್ತಿರುವುದನ್ನು ಕಂಡೆ. ಪಿಪಿ(ಪಾರ್ಥಿವ್ ಪಟೇಲ್) ಭಾಯಿ, ಚಾಹಲ್ ಭಾಯಿ ಎಲ್ಲರೂ ಇದ್ದರು. ನಾನು ಭೈಯ್ಯಾ(ವಿರಾಟ್) ಅವರತ್ತ ಓಡಿ ಅವರನ್ನು ಆಲಂಗಿಸಿದೆ. ಅದು ನನ್ನ ಜೀವನದ ಅತ್ಯಂತ ದೊಡ್ಡ ಸರ್‍ಪ್ರೈಸ್. ಏಕೆಂದರೆ ಭೈಯ್ಯಾ (ವಿರಾಟ್) ಅವರು ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಅವರು ಬಂದಾಗ, ವಿರಾಟ್ ಕೊಹ್ಲಿ ಟೋಲಿ ಚೌಕಿಗೆ ಬಂದರು ಎಂದು ಸುದ್ದಿಯಾಯಿತು" ಎಂದು ಸಿರಾಜ್ ಹೇಳಿದರು.

ಆರ್‌ಸಿಬಿ ತಂಡದ ಇತರರೊಂದಿಗೆ ಕೊಹ್ಲಿ ಅವರು ಸಿರಾಜ್ ಅವರ ಹೈದರಾಬಾದ್ ನಿವಾಸದಲ್ಲಿ ಬಿರಿಯಾನಿ ಸವಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಸಿರಾಜ್ ಈ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ `ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಮತ್ತು ನನ್ನ ಕುಟುಂಬಕ್ಕೆ ಗೌರವ. ನಿಮ್ಮ ಅಮೂಲ್ಯ ಸಮಯವನ್ನು ನಮ್ಮ ಮನೆಯಲ್ಲಿ ಔತಣದಲ್ಲಿ ಭಾಗವಹಿಸಲು ವ್ಯಯಿಸಿದ್ದಕ್ಕೆ ಧನ್ಯವಾದಗಳು" ಎಂದು ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X