Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಜಾಬ್‌ ಧರಿಸಿ ಮತಗಟ್ಟೆಗೆ ಆಗಮಿಸಿದ...

ಹಿಜಾಬ್‌ ಧರಿಸಿ ಮತಗಟ್ಟೆಗೆ ಆಗಮಿಸಿದ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಪೋಲಿಂಗ್‌ ಏಜೆಂಟ್‌ !

ವಿವಾದವೆಬ್ಬಿಸಿದ ವ್ಯಕ್ತಿಯನ್ನು ಮತಗಟ್ಟೆಯಿಂದ ಹೊರಕಳಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ19 Feb 2022 3:50 PM IST
share
ಹಿಜಾಬ್‌ ಧರಿಸಿ ಮತಗಟ್ಟೆಗೆ ಆಗಮಿಸಿದ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಪೋಲಿಂಗ್‌ ಏಜೆಂಟ್‌ !

ಮಧುರೈ: ಕರ್ನಾಟಕದಲ್ಲಿ ಕೋಲಾಹಲವೆಬ್ಬಿಸಿರುವ ಹಿಜಾಬ್ ವಿವಾದ ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲುರು ಮುನಿಸಿಪಾಲಿಟಿಯ ಸ್ಥಳೀಯಾಡಳಿತ ಚುನಾವಣೆಗಳ ವೇಳೆಯೂ ಇಂದು ಪ್ರತಿಧ್ವನಿಸಿದೆ. ಅಲ್ಲಿನ ಮತಗಟ್ಟೆಯೊಂದರಲ್ಲಿ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸಿ ಮತದಾನಕ್ಕೆ ಆಗಮಿಸಿದ್ದನ್ನು ಬಿಜೆಪಿ ಪೋಲಿಂಗ್ ಏಜಂಟ್ ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

ಆದರೆ ಬಿಜೆಪಿ ಪೋಲಿಂಗ್ ಏಜೆಂಟ್ ಗಿರಿರಾಜನ್ ಎತ್ತಿದ ಆಕ್ಷೇಪಕ್ಕೆ ಮತಗಟ್ಟೆ ಅಧಿಕಾರಿಗಳು ಹಾಗೂ ಅಲ್ಲಿದ್ದ ಇತರ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಪಕ್ಷದ ಪೋಲಿಂಗ್ ಏಜಂಟರು ಒಪ್ಪಿಲ್ಲ. ಇದರಿಂದ ಮತದಾನ ಪ್ರಕ್ರಿಯೆಗೆ ಸುಮಾರು 30 ನಿಮಿಷಗಳ ತಡೆಯುಂಟಾಯಿತು.

ಹಿಜಾಬ್ ಧರಿಸಿದ ಮಹಿಳೆಯೊಬ್ಬರು ಮತಗಟ್ಟೆಗೆ ಆಗಮಿಸಿದಾಗ ಬಿಜೆಪಿ ಏಜಂಟ್ ತಗಾದೆ ತೆಗೆದಿದ್ದರು. ಅಂತಿಮವಾಗಿ ಪೊಲೀಸರ ಹಸ್ತಕ್ಷೇಪದ ನಂತರ ಗಿರಿರಾಜನ್ ಅವರನ್ನು ಮತಗಟ್ಟೆಯಿಂದ ಹೊರಕಳುಹಿಸಿ ಅವರ ಸ್ಥಾನಕ್ಕೆ ಅವರ ಪಕ್ಷದ ಇನ್ನೊಬ್ಬರನ್ನು ಕರೆಸಲಾಯಿತು.

ಗಿರಿರಾಜನ್ ತನ್ನ ಕೈಯ್ಯಲ್ಲಿ ಮತದಾರರ ಪಟ್ಟಿಯನ್ನು ಹಿಡಿದುಕೊಂಡು  ಹಿಜಾಬ್ ಧರಿಸಿದ ಮಹಿಳೆಯರಿಗೆ ಮತದಾನಕ್ಕೆ ಅವಕಾಶ ನೀಡಿದ ಕುರಿತು ಮತಗಟ್ಟೆ ಅಧಿಕಾರಿಗಳ ಜತೆ ಜೋರು ಸ್ವರದಲ್ಲಿ ಮಾತನಾಡುವ ವೀಡಿಯೋವೊಂದು ಹರಿದಾಡುತ್ತಿದೆ.

"ಅವರ ಮುಖವನ್ನು ಹೇಗೆ ಗುರುತು ಹಚ್ಚುವುದು, ಮತದಾರ ಪಟ್ಟಿಯಲ್ಲಿರುವ ಫೋಟೋದಲ್ಲಿರುವವರೇ ಮತದಾನಕ್ಕೆ ಆಗಮಿಸಿದ ಜನರು (ಮಹಿಳೆಯರನ್ನು) ಎಂದು ಹೇಗೆ ತಿಳಿಯುವುದು?" ಎಂದು ಗಿರಿರಾಜನ್ ಹೇಳುವುದು ಕೇಳಿಸುತ್ತದೆ.

ಅಲ್ಲಿದ್ದ ಅಧಿಕಾರಿಗಳು ಮತ್ತು ಇತರ ಏಜಂಟ್‍ಗಳು ಅವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ವಿಫಲರಾದಾಗ ಪೊಲೀಸರು ಅವರಿಗೆ ಅಲ್ಲಿಂದ ತೆರಳುವಂತೆ ಸೂಚಿಸಿದರು. ನಂತರ ಮತದಾನ ಮುಂದುವರಿದಿದೆ.

ಈ ನಿರ್ದಿಷ್ಟ ವಾರ್ಡ್ ಸಂಖ್ಯೆ 8ರ ಮತಗಟ್ಟೆಯ ಹೊರಗೆ ಹಿಜಾಬ್ ಧರಿಸಿ ಮತದಾನಕ್ಕೆ ಹಲವಾರು ಮುಸ್ಲಿಂ ಮಹಿಳೆಯರು ಕಾದಿದ್ದ ಸಂದರ್ಭ ಈ ಘಟನೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಚುನಾವಣಾ ಆಯುಕ್ತ ವಿ ಪಳನಿಕುಮಾರ್, ಹಿಜಾಬ್ ಧರಿಸಿದ ಮಹಿಳೆಯರಿಗೆ ಮತದಾನಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

A #BJP booth agent allegedly raised objection for allowing a women to vote with hijab during the #UrbanLocalBodyElection in Madurai.

He continued to raise objection even after the polling officials informing the booth agent that they have verified the voter and her identity. pic.twitter.com/cFiXAmrpWZ

— Mugilan Chandrakumar (@Mugilan__C) February 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X