Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರಗರ ಕಂದಾಯ ಸಮಸ್ಯೆಗಳಿಗೆ ತಿಂಗಳೊಳಗೆ...

ಕೊರಗರ ಕಂದಾಯ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹಾರ: ಸಚಿವ ಆರ್.ಅಶೋಕ್‌

ಕೆಂಜೂರು ಕುಮಾರ ಕೊರಗರ ಮನೆಯಲ್ಲಿ ಉಪಹಾರ ಸೇವಿಸಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ20 Feb 2022 8:18 PM IST
share
ಕೊರಗರ ಕಂದಾಯ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹಾರ: ಸಚಿವ ಆರ್.ಅಶೋಕ್‌

ಉಡುಪಿ, ಫೆ.20: ಕಂದಾಯ ಇಲಾಖೆಗೆ ಸಂಬಂಧಿಸಿದ ಕೊರಗ ಸಮುದಾಯದ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಮಾಡಿದ್ದ ಸಚಿವರು, ಕೆಂಜೂರು ಗ್ರಾಮದ ಕೊರಗ ಸಮುದಾಯದ ಕುಮಾರ ಎಂಬವರ ಮನೆಯಲ್ಲಿ ರವಿವಾರ ಉಪಹಾರ ಸೇವಿಸಿ, ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡುತಿದ್ದರು.

ತಮ್ಮ ಹಿರಿಯರಿಂದ ಪಡೆದುಕೊಂಡು ಬಂದಿರುವ ಜಮೀನು ಇನ್ನು ಕೂಡ ಕೊರಗ ಸಮುದಾಯದವರ ಹೆಸರಿಗೆ ಆಗಿಲ್ಲ. ಈ ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸಿಕೊಡಲಾಗುವುದು. ಗ್ರಾಮ ವಾಸ್ತವ್ಯದಲ್ಲಿ ಕಂಡುಕೊಂಡ ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಮೊದಲ ಆದ್ಯತೆ ಪರಿಹರಿಸಿಕೊಡಲಾಗುವುದು. ಮುಂದೆ ಅದರ ಬಗ್ಗೆ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಜೊತೆ ಸಂಪರ್ಕ ಇಟ್ಟುಕೊಳ್ಳಲಾಗುವುದು ಎಂದರು.

ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಕೂಡ ಬಗೆಹರಿಸುವ ನಿಟ್ಟಿನಲ್ಲಿ ಅವುಗಳನ್ನು ಕಂದಾಯ ಇಲಾಖೆಗೆ ಬದಲಾಯಿಸಿಕೊಳ್ಳಲಾಗುವುದು. ರಾಜ್ಯದಲ್ಲಿ 15ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ಜಾಗವನ್ನು ಬಡವರಿಗೆ ಉಳುಮೆ ಮಾಡಲು ಒದಗಿಸಿಕೊಡಲಾಗುವುದು ಎಂದು ಅವರು ಹೇಳಿದರು.

ಕೊರಗ ಸಮುದಾಯಕ್ಕೆ ವ್ಯವಸಾಯ ಮಾಡಲು ಸರಕಾರದಿಂದ ಸಣ್ಣಪುಟ್ಟ ಪರಿಕರಗಳನ್ನು ಒದಗಿಸಿ ಕೊಡುವ ಕಾರ್ಯ ಮಾಡಲಾಗುವುದು. ಜಿಲ್ಲಾ ಮಟ್ಟದ ಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಕೊರಗ ಜನಾಂಗ ಪಾಶಸ್ತ್ಯ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಂದಾಯ ಇಲಾಖೆಗೆ ಸಂಬಂಧಪಟ್ಟ ಬಹುತೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ., ಕುಂದಾಪುರ ವಿಭಾಗದ ಸಹಾಯಕ ಆಯುಕ್ತ ರಾಜು ಕೆ., ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಕಳ್ತೂರು ಗ್ರಾಪಂ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಾವು ಇನ್ನೂ ಹಿಂದುಳಿದಿದ್ದೇವೆ: ಆರ್.ಅಶೋಕ್

ಗ್ರಾಮ ವಾಸ್ತವ್ಯದಿಂದ ಹೊಸ ಅನುಭವ ಹಾಗೂ ವಿಚಾರಗಳು ದೊರೆತಿವೆ. ಪರಿಶಿಷ್ಟ ಪಂಗಡಗಳಲ್ಲಿ ಅತ್ಯಂತ ಹಿಂದುಳಿದ ಸಮುದಾಯ ಅಂದರೆ ಕೊರಗ ಸಮುದಾಯ. ಪರಿಶಿಷ್ಟ ಜಾತಿಯವರು ಕೂಡ ಇವರನ್ನು ಹತ್ತಿರ ಸೇರಿಸುವುದಿಲ್ಲ. ಯಾವುದೇ ಸಮಾರಂಭ ನಡೆದರೂ ಊರಿನಿಂದ ಹೊರಗಡೆ ಇರುವ ಕೊರಗರ ಮನೆಯಲ್ಲಿ ಭೋಜನ, ಉಪಹಾರ ಸೇವಿಸಿ ಸಂವಾದ ಮಾಡಿದ್ದೇನೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಮಹಾನಗರಗಳನ್ನು ನೋಡಿದಾಗ ನಮ್ಮ ರಾಜ್ಯದಲ್ಲಿ ಎಲ್ಲವೂ ಅಭಿವೃದ್ಧಿಯಾಗಿದೆ ಎಂದು ಅನಿಸುತ್ತದೆ. ಆದರೆ ವಾಸ್ತವದಲ್ಲಿ ನಾವು ಇನ್ನು ಹಿಂದುಳಿದಿದ್ದೇವೆ ಎಂದು ತಿಳಿಯುತ್ತದೆ. ಇನ್ನು ಕೂಡ ಮುಖ್ಯವಾಹಿನಿಗೆ ಬಾರದ ನೂರಾರು ಸಮುದಾಯಗಳು ನಮ್ಮಲ್ಲಿವೆ. ಇದೆಲ್ಲ ಕಂಡರೂ ಕುರುಡರಂತೆ ಇರುವ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಈ ಗ್ರಾಮ ವಾಸ್ತವ್ಯ ನನ್ನ ಕಣ್ಣು ತೆರೆಸಿದೆ. ಕೊರಗರಂತಹ ಸಮುದಾಯ ನಮ್ಮ ರಾಜ್ಯದಲ್ಲಿದೆ ಎಂಬ ಕಲ್ಪನೆಯೇ ನನಗೆ ಇರಲಿಲ್ಲ. ಇದೀಗ ಕಣ್ಣಾರೆ ನೋಡಿದ್ದೇನೆ. ಇವರ ಸಾಕಷ್ಟು ಸಮಸ್ಯೆಗಳು ನನ್ನ ಗಮನಕ್ಕೆ ಬಂದಿದೆ ಎಂದರು.

ಗ್ರಾಮ ಸಹಾಯಕ ಹುದ್ದೆ ನೀಡಿ ಆದೇಶ!

ಮೊದಲ ಬಾರಿಗೆ ಎಂಬಂತೆ ಗ್ರಾಮ ಸಹಾಯಕ ಹುದ್ದೆಗೆ ಇಲ್ಲಿನ ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿ ಸರಕಾರದ ಆದೇಶ ಕೂಡ ನೀಡಿದ್ದೇನೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X