Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಉಮಾ ಭಾರತಿ ದತ್ತು ಪಡೆದ...

ಉತ್ತರಪ್ರದೇಶ: ಉಮಾ ಭಾರತಿ ದತ್ತು ಪಡೆದ ಬಳಿಕ ಇನ್ನಷ್ಟು ಹದಗೆಟ್ಟಿರುವ ಪಹುಜ್ ನದಿಯ ಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ20 Feb 2022 9:53 PM IST
share
ಉತ್ತರಪ್ರದೇಶ: ಉಮಾ ಭಾರತಿ ದತ್ತು ಪಡೆದ ಬಳಿಕ ಇನ್ನಷ್ಟು ಹದಗೆಟ್ಟಿರುವ ಪಹುಜ್ ನದಿಯ ಸ್ಥಿತಿ

ಝಾನ್ಸಿ,ಫೆ.20: ಬಿಜೆಪಿ ನಾಯಕಿ ಉಮಾ ಭಾರತಿಯವರು ದತ್ತು ಪಡೆದುಕೊಂಡ ಬಳಿಕ ಇಲ್ಲಿಯ ಪಹುಜ್ ನದಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

2014ರಲ್ಲಿ ಆಗ ಝಾನ್ಸಿಯ ಸಂಸದೆ ಹಾಗೂ ನರೇಂದ್ರ ಮೋದಿ ಸರಕಾರದಲ್ಲಿ ಜಲ ಸಂಪನ್ಮೂಲ ಮತ್ತು ಗಂಗಾ ಪುನರುಜ್ಜೀವನ ಸಚಿವೆಯಾಗಿದ್ದ ಭಾರತಿ ತನ್ನ ಲೋಕಸಭಾ ಕ್ಷೇತ್ರದಲ್ಲಿ ಭಾಷಣದ ಸಂದರ್ಭದಲ್ಲಿ ‘ಪ್ರಧಾನಿ ಮೋದಿಯವರ ಸಂಸದ್ ಗ್ರಾಮ ಯೋಜನೆಯಡಿ ಗ್ರಾಮವನ್ನು ದತ್ತು ಪಡೆದುಕೊಳ್ಳುವ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೇವೆ,ಆದರೆ ನದಿಗಳ ಸ್ಥಿತಿ ಸುಧಾರಿಸಲು ಪ್ರತಿಯೊಬ್ಬ ಸಂಸದರು ತಮ್ಮ ಕ್ಷೇತ್ರದಲ್ಲಿಯ ನದಿಯೊಂದನ್ನೂ ದತ್ತು ಪಡೆದುಕೊಳ್ಳಬೇಕು ’ಎಂದು ಹೇಳಿದ್ದರು.

ಇದಕ್ಕೆ ನಾಂದಿ ಹಾಡಿದ್ದ ಭಾರತಿ ತನ್ನ ಕ್ಷೇತ್ರದಲ್ಲಿ ಹರಿಯುತ್ತಿರುವ ಪಹುಜ್ ನದಿಯನ್ನು ದತ್ತು ಪಡೆದುಕೊಂಡಿದ್ದರು. ಅದನ್ನು ಸ್ವಚ್ಛಗೊಳಿಸಿ ಮೂಲರೂಪಕ್ಕೆ ತಂದು ಸಂರಕ್ಷಿಸುವುದಾಗಿ ಅವರು ಶಪಥವನ್ನೂ ಮಾಡಿದ್ದರು. ಜೊತೆಗೆ ನದಿ ಸ್ವಚ್ಛತೆಗೆ ವಿಶೇಷ ಯೋಜನೆಯನ್ನು ರೂಪಿಸುವುದಾಗಿಯೂ ಅವರು ಹೇಳಿದ್ದರು.

ಪ್ರಾಚೀನ ಕಾಲದಲ್ಲಿ ಪಹುಜ್ ನದಿಯನ್ನು ಪುಷ್ಪಾವತಿ ಎಂದು ಕರೆಯಲಾಗುತ್ತಿತ್ತು ಎನ್ನಲಾಗಿದೆ. ಪಹುಜ್ ನದಿ ಝಾನ್ಸಿ ಸಮೀಪದ ಬೈದೋರಾ ಗ್ರಾಮದಿಂದ 200 ಕಿ.ಮೀ.ದೂರ ಸಾಗಿದ ಬಳಿಕ ಜಲಾಯುನ್ ಜಿಲ್ಲೆಯಲ್ಲಿನ ಕಾಲಿ ಸಿಂಧ್‌ನೊಂದಿಗೆ ಸೇರುತ್ತದೆ. ನದಿಯನ್ನು ಪುಷ್ಪಾವತಿಯ ಮೂಲರೂಪಕ್ಕೆ ಮರಳಿಸುವ ತನ್ನ ಬಯಕೆಯನ್ನು ಭಾರತಿ ಆಗ ವ್ಯಕ್ತಪಡಿಸಿದ್ದರು.

ಆದರೆ ಈಗ ತನ್ನ ದುರದೃಷ್ಟಕ್ಕಾಗಿ ಕಂಬನಿ ಸುರಿಸಲೂ ಈ ನದಿಯಲ್ಲಿ ಸಾಕಷ್ಟು ನೀರಿಲ್ಲ. ನದಿಯ ಮೇಲ್ಮೈ ಗಿಡಬಳ್ಳಿಗಳಿಂದ ಮುಚ್ಚಿಹೋಗಿದ್ದು, ಒಂದು ಹನಿ ನೀರೂ ಕಾಣುತ್ತಿಲ್ಲ. ವಿವಿಧ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯು ಎಲ್ಲ ಕಡೆಗಳಲ್ಲಿಯೂ ನದಿಯು ಇದೇ ದಯನೀಯ ಸ್ಥಿತಿಯಲ್ಲಿದೆ ಎನ್ನುವುದನ್ನು ಬೆಳಕಿಗೆ ತಂದಿದೆ. ಅದು ನದಿಯ ಬದಲು ಹುಲ್ಲುಗಾವಲಿನಂತೆ ಕಾಣುತ್ತಿದೆ.

ನದಿ ಪಾತ್ರದಲ್ಲಿ ಹಲವಾರು ಮನೆಗಳು ಮತ್ತು ಬಡಾವಣೆಗಳು ತಲೆಯೆತ್ತಿದ್ದು,ಆಡಳಿತದ ಕುಮ್ಮಕ್ಕಿನಿಂದ ಈ ಅತಿಕ್ರಮಣ ನಡೆದಿದೆ ಎಂದು ಸ್ಥಳೀಯ ಪತ್ರಕರ್ತರು ಮತ್ತು ನಿವಾಸಿಗಳು ಆರೋಪಿಸಿದ್ದಾರೆ. ಹಲವಾರು ಕಡೆಗಳಲ್ಲಿ ನದಿಯು ಚರಂಡಿಯಾಗಿಬಿಟ್ಟಿದೆ. ನದಿಯ ದಂಡೆಯಲ್ಲಿ ಎಲ್ಲ ಕಡೆ ತ್ಯಾಜ್ಯಗಳ ರಾಶಿಗಳೇ ಬಿದ್ದಿವೆ.

ಭಾರತಿ ಅವರು ನದಿಯನ್ನು ದತ್ತು ಪಡೆದುಕೊಂಡಾಗ ಅವರು ಗಂಗಾ ಪುನರುಜ್ಜೀವನದ ಹೊಣೆಯನ್ನು ಹೊತ್ತುಕೊಂಡಿದ್ದರಿಂದ ಪಹುಜ್‌ನ ಸ್ಥಿತಿ ಸುಧಾರಿಸಬಹುದು ಎಂದು ಜನರು ಆಶಿಸಿದ್ದರು. ಭಾರತಿ ನದಿಯನ್ನು ದತ್ತು ಪಡೆದುಕೊಂಡಾಗ ಅದರ ಸ್ಥಿತಿ ಇಷ್ಟೊಂದು ಕೆಟ್ಟಿರಲಿಲ್ಲ ಎಂದು ಬುಂದೇಲಖಂಡ್ ನಿರ್ಮಾಣ ಮೋರ್ಚಾದ ಅಧ್ಯಕ್ಷ ಭಾನು ಸಹಾಯ್ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X