Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಎನ್‌ಜಿಒ ಹೆಸರಿನಲ್ಲಿ ಬಂದ ಪತ್ರಕರ್ತರು...

"ಎನ್‌ಜಿಒ ಹೆಸರಿನಲ್ಲಿ ಬಂದ ಪತ್ರಕರ್ತರು ಹಿಡನ್‌ ಕ್ಯಾಮರಾದಲ್ಲಿ ನನ್ನ ಅಜ್ಜಿ, ಅಣ್ಣನ ವೀಡಿಯೋ ಮಾಡಿದ್ದಾರೆ"

ಉಡುಪಿ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Feb 2022 10:38 PM IST
share
ಎನ್‌ಜಿಒ ಹೆಸರಿನಲ್ಲಿ ಬಂದ ಪತ್ರಕರ್ತರು ಹಿಡನ್‌ ಕ್ಯಾಮರಾದಲ್ಲಿ ನನ್ನ ಅಜ್ಜಿ, ಅಣ್ಣನ ವೀಡಿಯೋ ಮಾಡಿದ್ದಾರೆ

ಉಡುಪಿ, ಫೆ.20: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯ ರಲ್ಲಿ ಒಬ್ಬರಾದ ಆಲಿಯಾ ಅಸ್ಸಾದಿ, ಮಾಧ್ಯಮಗಳು ತಮ್ಮ ಮಿತಿಯನ್ನು ದಾಟಿ ಬಲವಂತವಾಗಿ ನಮ್ಮ ಮನೆಯೊಳಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.

‘ಖಾಸಗಿತನ ಪದದ ಅರ್ಥವನ್ನು ಮಾಧ್ಯಮದವರು ನೆನಪಿಡಬೇಕು. ಆದರೆ ಅವರು ಮಾಧ್ಯಮದ ಧರ್ಮವನ್ನೇ ಮರೆತಿದ್ದಾರೆ. ಹಿಡನ್ ಕ್ಯಾಮೆರಾಗಳನ್ನು ಹಿಡಿದುಕೊಂಡು ನನ್ನ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಈ ಮೂಲಕ ಏಶ್ಯನೆಟ್‌ ಸುವರ್ಣ ನ್ಯೂಸ್ ಮಾಧ್ಯಮ ತಮ್ಮ ಮಿತಿಯನ್ನು ಮೀರಿದೆ’ ಎಂದು ಆಲಿಯಾ ಅಸ್ಸಾದಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ವಾರ್ತಾಭಾರತಿ ಜೊತೆ ಮಾತನಾಡಿದ ಆಲಿಯಾ ಅಸ್ಸಾದಿ, "ಮೂರು ನಾಲ್ಕು ದಿನಗಳ ಹಿಂದೆ ಎನ್‌ಜಿಓ ಎಂದು ಹೇಳಿಕೊಂಡು ಕೆಲವರು ನಮ್ಮ ಮನೆಗೆ ಬಂದಿದ್ದರು. ಯಾವುದೇ ಅನುಮತಿ ಕೇಳದೆ ನೇರವಾಗಿ ಮನೆಯೊಳಗೆ ಬಂದು, ತಮ್ಮಲ್ಲಿದ್ದ ಹಿಡನ್ ಕ್ಯಾಮೆರಾದಿಂದ ನನ್ನ ಅಜ್ಜಿ ಮತ್ತು ಸಹೋದರನ ವಿಡಿಯೋ ಮಾಡಿದ್ದಾರೆ ಎಂದು ದೂರಿದರು.ಇವರ ಬಳಿ ಹಿಡನ್ ಕ್ಯಾಮೆರಾ ಇರುವುದು ನಮಗೆ ಯಾರಿಗೂ ಗೊತ್ತೆ ಇರಲಿಲ್ಲ. ಇವರು ಬರುವಾಗ ನಾನು ಮನೆಯಲ್ಲಿ ಇರಲಿಲ್ಲ. ನನ್ನ ಅಣ್ಣ, ಅವರಿಗೆ ಮನೆಯೊಳಗೆ ಬರಬೇಡಿ ಎಂದು ಹೇಳಿದರೂ ಬಲವಂತವಾಗಿ ಒಳಗೆ ಪ್ರವೇಶಿಸಿದ್ದಾರೆ. ಒಳಗೆ ಬಂದು ನಮಗೆ ಆಲಿಯಾ ಅಸ್ಸಾದಿ ದೊತೆ ಮಾತನಾಡ ಬೇಕು ಎಂದು ಹೇಳಿದ್ದಾರೆ. ನಾನು ಮನೆಯಲ್ಲಿ ಇರದಕ್ಕೆ ನನಗೆ ಕಾಲ್ ಮಾಡಿ ಮಾತನಾಡಿದ್ದಾರೆ. ಆದರೆ ನಾನು ಹೊರಗಡೆ ಇದ್ದೇನೆ ಮಾತನಾಡುವುದಿಲ್ಲ ಎಂದು ಹೇಳಿದ್ದೆ ಎಂದು ಅವರು ವಿವರಿಸಿದರು.

ಇವರೆಲ್ಲ ಮಾಧ್ಯಮದವರು ಎಂದು ನಮಗೆ ಗೊತ್ತೆ ಇರಲಿಲ್ಲ. ಹೀಗೆ ವಿಡಿಯೋ ಮಾಡಿಕೊಂಡು ಹೋಗಿ ಇವತ್ತು ಟಿವಿಯಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಡದ ನನ್ನ ಅಜ್ಜಿ ಮತ್ತು ಅಣ್ಣನನ್ನು ಇವರು ಯಾಕೆ ವಿಡಿಯೋ ಮಾಡಿ ಹಾಕುತ್ತಾರೆ. ಇವರಿಗೆ ಖಾಸಗಿತನ, ಗೌಪ್ಯತೆ ಎಂಬುದರ ಅರ್ಥಗೊತ್ತಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಈ ರೀತಿ ತಮ್ಮ ಮಿತಿಯನ್ನು ಮೀರಿರುವ ಮಾಧ್ಯಮದ ವಿರುದ್ಧ ದೂರು ನೀಡಲಾಗುವುದು. ಈ ಬಗ್ಗೆ ನನ್ನ ಹೆತ್ತವರ ಜೊತೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು. ‘ನನ್ನ ಕಾಲೇಜಿನ ದಾಖಲೆಗಳನ್ನು ಸೋರಿಕೆ ಮಾಡಿದ ಬಳಿಕ ನನಗೆ ಹಲವು ಬೆದರಿಕೆ ಕರೆಗಳು ಬಂದಿವೆ. ಅದಕ್ಕಾಗಿ ನಾನು ನನ್ನ ಹಳೆಯ ಸಿಮ್ ತೆಗೆದು ಬೇರೆ ಸಿಮ್ ಹಾಕಿಕೊಂಡಿದ್ದೇನೆ’ ಎಂದರು.

ಹಿಜಾಬ್ ಸಂಬಂಧಿಸಿ ಹೈಕೋರ್ಟ್ ಅಂತಿಮ ಆದೇಶ ಬರುವವರೆಗೆ ನಾವು ಕಾಲೇಜಿಗೆ ಬರುವುದಿಲ್ಲ. ಕಾಲೇಜು ಪುನಾರಂಭಗೊಂಡ ಬಳಿಕ ನಾವು ಆರು ಮಂದಿ ಯಾರು ಕೂಡ ಕಾಲೇಜಿಗೆ ಹೋಗಿಲ್ಲ. ಸದ್ಯ ಪರೀಕ್ಷೆ ಹಿನ್ನೆಲೆಯಲ್ಲಿ ನಾವು ಮನೆಯಲ್ಲಿಯೇ ಕುಳಿತು ಓದುತ್ತಿದ್ದೇವೆ. ಯೂಟ್ಯೂಬ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದೇವೆ ಎಂದು ಆಲಿಯಾ ಅಸ್ಸಾದಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X