Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ...

ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ

ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆ ಕಾರಣ

ಜಿ. ಮಹಾಂತೇಶ್ಜಿ. ಮಹಾಂತೇಶ್21 Feb 2022 8:54 AM IST
share
ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ

ಬೆಂಗಳೂರು,ಫೆ.20: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕಳೆದ ಒಂದು ವರ್ಷದಿಂದಲೂ ರಾಜ್ಯ ಸರಕಾರವು ಬಾಕಿ ಉಳಿಸಿಕೊಂಡಿದೆ. ನೇರ ನಗದು ಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದರೂ ವಿದ್ಯಾರ್ಥಿ ವೇತನ ಬಾಕಿ ಉಳಿಸಿಕೊಳ್ಳಲಾಗಿದೆ. ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆಯ ಮಧ್ಯೆ ಸಮನ್ವಯತೆ ಇಲ್ಲದ ಕಾರಣ ಕಳೆದೊಂದು ವರ್ಷದಿಂದ ವಿದ್ಯಾರ್ಥಿ ವೇತನವು ಬಾಕಿ ಇದೆ ಎಂಬುದನ್ನು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೇ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿ ವೇತನ ಬಾಕಿ ಇರುವ ಕುರಿತು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು 2022ರ ಜನವರಿ 18ರಂದು ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ. ಕಳೆದ ಒಂದು ವರ್ಷದಿಂದಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾಕಿ ಉಳಿಸಿಕೊಂಡಿರುವ ಕುರಿತು ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ಮತ್ತು ಸದಸ್ಯ ಈಶ್ವರ್ ಬಿ ಖಂಡ್ರೆ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯ ನಡಾವಳಿ ಪ್ರತಿ ‘ದಿ ಫೈಲ್’ಗೆ ಲಭ್ಯವಾಗಿದೆ.

ಅದೇ ರೀತಿ ಶುಲ್ಕ ಮರು ಪಾವತಿ ಯೋಜನೆ ಅರ್ಜಿ ಸಲ್ಲಿಸಿದ ಕೆಲವೊಂದು ವಿದ್ಯಾರ್ಥಿಗಳ ಫಲಾನುಭವಿಗಳ ದತ್ತಾಂಶಗಳು ವಿಶ್ವವಿದ್ಯಾಲಯಗಳಿಂದಲೇ ಸ್ವೀಕೃತವಾಗಿಲ್ಲ. ಕೌನ್ಸಲಿಂಗ್ ಮುಖಾಂತರ ಆಯ್ಕೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ಸಮಯದಲ್ಲಿ ಕೌನ್ಸಲಿಂಗ್ ಸಂಖ್ಯೆಯನ್ನು ನಮೂದಿಸಿಲ್ಲ. ಪ್ರವೇಶ ಪಡೆದ ಕೆಲವೊಂದು ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಪ್ರವೇಶ ನೋಂದಣಿ ಸಂಖ್ಯೆಯನ್ನು ನೀಡದೇ ಇರುವುದು ಸಹ ಶುಲ್ಕ ಮರುಪಾವತಿ ಯೋಜನೆ ಹಿಂದೆ ಬೀಳಲು ಕಾರಣ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾಕಿ ಇರುವುದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೇ ಮಾಹಿತಿ ಇಲ್ಲ ಎಂಬ ಸಂಗತಿ ಸಭೆ ನಡಾವಳಿಯಿಂದ ಗೊತ್ತಾಗಿದೆ. ಈ ಕುರಿತು ವಿಷಯವನ್ನು ಪ್ರಸ್ತಾಪಿಸಿದ್ದ ಈಶ್ವರ್ ಬಿ ಖಂಡ್ರೆ ಅವರು ‘ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ನಿಮಗೂ ಮಾಹಿತಿ ಇಲ್ಲವೆಂದರೆ ಹೇಗೆ,’ ಎಂದು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು ಪ್ರಶ್ನಿಸಿರುವುದು ನಡಾವಳಿಯಲ್ಲಿ ದಾಖಲಾಗಿದೆ.

 ವಿದ್ಯಾರ್ಥಿ ವೇತನ ಪಾವತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನೇರ ನಗದು (ಡಿಬಿಟಿ) ವ್ಯವಸ್ಥೆ ಜಾರಿಗೊಳಿಸಿದ್ದರೂ ಪಾವತಿಯಾಗಿಲ್ಲ. ‘ಡಿಬಿಟಿ ಮಾಡಿರುವ ಉದ್ದೇಶ ಪಾರದರ್ಶಕತೆ ಆಗಿರಬೇಕು ಎಂದು. ಇದನ್ನು ಒಬ್ಬರ ಕೈಯಲ್ಲಿ ಇಟ್ಟುಕೊಂಡರೆ ಹೇಗೆ, ನಿಮ್ಮ ಅಧಿಕಾರಿಗಳ ಹತ್ತಿರ ಮಾಹಿತಿ ಇಲ್ಲವೆಂದರೆ ಏನರ್ಥ,’ ಎಂದು ಈಶ್ವರ ಬಿ ಖಂಡ್ರೆ ಅವರು ತರಾಟೆಗೆ ತೆಗೆದುಕೊಂಡಿರುವುದು ಗೊತ್ತಾಗಿದೆ.

ಅದೇ ರೀತಿ ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ಅವರು ‘ಇಷ್ಟಾದರೂ ಸರಕಾರ ಸುಮ್ಮನೆ ಏಕೆ ಇದೆ ಎಂದು ನನಗೆ ಗೊತ್ತಾಗುತ್ತಿಲ್ಲ. ಎಸ್ಸಿ, ಎಸ್ಟಿ ಬಡ ಮಕ್ಕಳ ಒಂದು ವರ್ಷದ ಸ್ಕಾಲರ್‌ಶಿಪ್ ಇನ್ನ್ನೂ ಬಾಕಿ ಇದೆ,’ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ನಡಾವಳಿಯಿಂದ ತಿಳಿದು ಬಂದಿದೆ.

ಇದಕ್ಕೆ ಉತ್ತರಿಸಿರುವ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ‘ನಾವು ಬರೀ ಏಜೆನ್ಸಿ ನೀವು ಇನ್ಫಾರ್ಮೇಷನ್ ಕೊಟ್ಟರೆ ಮಾಡುತ್ತೇವೆಂದು ಹೇಳುತ್ತಾರೆ. ನಮ್ಮ ಇನ್ಫಾರ್ಮೇಷನ್ ನಾವು ಕೊಟ್ಟಿರುತ್ತೇವೆ. ಹೈಯರ್ ಎಜುಕೇಷನ್ ಇನ್ಫಾರ್ಮೇಷನ್ ಇನ್ನು ಬಂದಿಲ್ಲ. ಅದಕ್ಕಾಗಿ ನಾವು ಕೊಟ್ಟಿಲ್ಲವೆಂದು ಹೇಳುತ್ತಾರೆ. ನಮಗೆ ಟ್ರಾನ್ಸ್ಫರ್ ಮಾಡಿದರೆ ನಾವು ಮಾಡುತ್ತೇವೆ’ ಎಂದು ಉತ್ತರಿಸಿರುವುದು ಸಮಾಜ ಕಲ್ಯಾಣ ಮತ್ತು ಉನ್ನತ ಶಿಕ್ಷಣ ಇಲಾಖೆ ನಡುವೆ ಸಮನ್ವಯ ಕೊರತೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

 ‘ನೀವು ತೀರ್ಮಾನ ಮಾಡಿ. We are getting lost in the details and it is very easy to make us get lost in the details. ಸಮಸ್ಯೆ ಪರಿಹಾರವಾಗಬೇಕು. ಬಡಮಕ್ಕಳಿಗೆ ಶಿಷ್ಯ ವೇತನ ಸಿಗಬೇಕು,’ ಎಂದು ಕೃಷ್ಣಬೈರೇಗೌಡ ಅವರು ಸೂಚಿಸಿರುವುದಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 'It is not possible to intervene in each single case' ಎಂದು ಉತ್ತರಿಸಿರುವುದು ಗೊತ್ತಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡುವಲ್ಲಿ ಹಿನ್ನಡೆ ಸಾಧಿಸಿರುವುದನ್ನು ಸಮಿತಿ ಮತ್ತೊಬ್ಬ ಸದಸ್ಯ ಅರವಿಂದ್ ಬೆಲ್ಲದ್ ಅವರು ಗಮನ ಸೆಳೆದಿದ್ದಾರೆ. ‘ಮೆಟ್ರಿಕ್ ನಂತರದಲ್ಲಿಯೂ ತೊಂದರೆಗಳಿವೆ. ಮೆಟ್ರಿಕ್ ಪೂರ್ವ ತರಹ ಇಲ್ಲಿ ಪರಿಹಾರ ಕೊಡಿ’ ಎಂದು ಹೇಳಿದಕ್ಕೆ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ’ ಅಲ್ಲಿ ರಿಸಲ್ಟ್, ಫೀ ಒಂದೇ ಕಡೆ ಇರುವುದರಿಂದ ಪ್ರಿ-ಮೆಟ್ರಕ್‌ನಲ್ಲಿ ಪ್ರಾಬ್ಲಮ್ ಇಲ್ಲ. ಪೋಸ್ಟ್ ಮೆಟ್ರಿಕ್‌ನಲ್ಲಿ ಬೇರೆ ಬೇರೆ ಕಾಲೇಜು, ಬೇರೆ ಬೇರೆ ಕೋರ್ಸ್, ಬೇರೆ ಬೇರೆ ರೀತಿಯ ಫೀಸ್ ಇರುತ್ತದೆ. ಅವರು ಅಂಡರ್‌ಸ್ಟಾಂಡಿಂಗ್ ಮಾಡಿಕೊಳ್ಳುತ್ತಿಲ್ಲ’ ಎಂದು ಸಮಸ್ಯೆಯನ್ನು ತೆರೆದಿಟ್ಟಿದ್ದಾರೆ.

 ಇದಕ್ಕೆ 'Techonology should help us. ನಡೆಯುತ್ತಿರುವ ಸಿಸ್ಟಮ್ ಅನ್ನು ಟೆಕ್ನಾಲಜಿ breakdown ಮಾಡುತ್ತದೆಂದರೆ ಹೇಗೆ’ ಎಂದು ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಇದಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ 'The key is with us to avoid manipulation. ಇಷ್ಟು ಮಕ್ಕಳಿಗೆ ಬಂದಿಲ್ಲ. ಬಂದಿಲ್ಲದಿರುವುದಕ್ಕೆ ಕಾರಣವೇನು ಎಂದು ಅವರು public domainನಲ್ಲಿ ಹಾಕಿದರೆ ಗೊತ್ತಾಗುತ್ತದೆ. ಸರಳವಾದದ್ದನ್ನು ಕಾಂಪ್ಲಿಕೇಟೆಡ್ ಮಾಡಿಕೊಂಡು ಕುಳಿತಿರುತ್ತೇವೆ. ‘I am sorry sir' ಎಂದು ಉತ್ತರಿಸುವ ಮೂಲಕ ಅಸಹಾಯಕತೆ ಪ್ರದರ್ಶಿಸಿರುವುದು ನಡವಳಿಯಿಂದ ಗೊತ್ತಾಗಿದೆ.

ಅಧಿಕಾರಿಗಳು ತೋರಿಸಿರುವ ಅಸಹಾಯಕತೆಗೆ ಪ್ರತಿಕ್ರಿಯಿಸಿರುವ ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ಅವರು ‘ತಾವು ಇಲಾಖೆಗೆ ತೆಗೆದುಕೊಳ್ಳುತ್ತೀರಾ, ತೆಗೆದುಕೊಂಡು transition period ಗೆ hybrid ಮಾಡಿ rigid ಮಾಡಬೇಡಿ stop cap arrangement ಮಾಡಿ ನಿಮ್ಮದು (perfect) ಆಗಿ ವರ್ಕ್ ಆಗುತ್ತದೆ. ಎಲ್ಲಾ ರೆಡಿ ಆದ ಮೇಲೆ ಸ್ಮೂತ್ ಆಗುತ್ತದೆ. ಅಲ್ಲಿಯವರೆಗೆ ಸಮಸ್ಯೆಗೆ ಪರಿಹಾರ ಹುಡಕಬೇಕು. ಇಷ್ಟು ತಡವಾದರೆ ಮಕ್ಕಳ ಪರಿಸ್ಥಿತಿ ಕಷ್ಟ ಇದೆ. ತುಂಬಾ ಮಕ್ಕಳು ಇದರ ಮೇಲೆ ಡಿಪೆಂಡ್ ಆಗಿದ್ದಾರೆ. ಇವತ್ತು ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಬಡಮಕ್ಕಳಿಗೆ ಬಹಳ ಅವಶ್ಯಕತೆ ಇದೆ. ಇದಕ್ಕೆ ಪರಿಹಾರ ಮಾಡಿ,’ ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ತಿಳಿದು ಬಂದಿದೆ.

 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ 2020-21ನೇ ಸಾಲಿನಲ್ಲಿ 7,62,517 ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಮಂಜೂರಾತಿ ಮಾಡಲಾಗಿರುತ್ತದೆ. 3,336 ಅರ್ಜಿಗಳು ತಿರಸ್ಕೃತವಾಗಿದ್ದರೆ 10,376 ಅರ್ಜಿಗಳು ಬಾಕಿ ಇದೆ.

‘2021-22ನೇ ಸಾಲಿನಲ್ಲಿ ಕೋವಿಡ್-19 ಕಾರಣದಿಂದ ಪದವಿ ಮತ್ತು ವೃತ್ತಿಪರ ಕಾಲೇಜುಗಳು ತಡವಾಗಿ ಆರಂಭವಾಗಿವೆ. ಆದ ಕಾರಣದಿಂದ ಶುಲ್ಕ ಮರುಪಾವತಿ ಕಾರ್ಯಕ್ರಮವನ್ನು ಸೇರಿದಂತೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮತ್ತು ವಿದ್ಯಾಸಿರಿ ಯೋಜನೆಗಳಿಗೆ ಅರ್ಜಿಗಳನ್ನು 2021ರ ಸೆ.30ರಿಂದ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು 2022ರ ಫೆ.16ರಂದು ಈಶ್ವರ ಖಂಡ್ರೆ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

 2020-21 ಮತ್ತು 2021-22ನೇ ಸಾಲಿನಲ್ಲಿಯೂ ಶುಲ್ಕ ಮರುಪಾವತಿ ಕಾರ್ಯಕ್ರಮವು ವಿಳಂಬವಾಗಿದೆ. ಶುಲ್ಕ ಮರು ಪಾವತಿ ಕಾರ್ಯಕ್ರಮಕ್ಕೆ 136 ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆಯಾದರೂ ವಿವಿಧ ಕೋರ್ಸ್‌ಗಳ ಪ್ರವೇಶ ದಿನಾಂಕ ಬೇರೆ ಬೇರೆ ತಿಂಗಳು ಆಗಿರುವ ಕಾರಣ ವಿಳಂಬವಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮರ್ಥನೆ ಒದಗಿಸಿದ್ದಾರೆ.

‘ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 50 ವಿಶ್ವವಿದ್ಯಾಲಯಗಳ ಕೋರ್ಸ್‌ಗಳಿಗೆ ಪ್ರವೇಶದ ದಿನಾಂಕವು ವಿಶ್ವವಿದ್ಯಾಲಯದಿಂದ ವಿಶ್ವವಿದ್ಯಾಲಯಕ್ಕೆ ಶೈಕ್ಷಣಿಕ ಅವಧಿ ಬೇರೆಯಾಗಿರುತ್ತದೆ. ಪ್ರತಿ ವಿಶ್ವವಿದ್ಯಾಲಯಕ್ಕೆ ಪರೀಕ್ಷಾ ವೇಳೆ ಬೇರೆಯದಾಗಿರುತ್ತದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಶುಲ್ಕ ಮರುಪಾವತಿ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಆಯವ್ಯಯದಲ್ಲಿ ಮಿತಿ ಇರುವುದರಿಂದ ಹಂತಹಂತವಾಗಿ ಮಂಜೂರು ಮಾಡಲು ಸಾಧ್ಯವಾಗುವುದಿಲ್ಲ,’ ಎಂದು ಸದನಕ್ಕೆ ಪ್ರತಿಕ್ರಿಯಿಸಿದ್ದಾರೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X