Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಂಟುತ್ತಾ ಸಾಗಿದ ಆರ್ಥಿಕತೆ,...

ಕುಂಟುತ್ತಾ ಸಾಗಿದ ಆರ್ಥಿಕತೆ, ರಾಜ್ಯದಲ್ಲಿ 83 ಸಾವಿರ ಉದ್ಯೋಗ ನಷ್ಟ!

ವಾರ್ತಾಭಾರತಿವಾರ್ತಾಭಾರತಿ22 Feb 2022 7:54 AM IST
share
ಕುಂಟುತ್ತಾ ಸಾಗಿದ ಆರ್ಥಿಕತೆ, ರಾಜ್ಯದಲ್ಲಿ 83 ಸಾವಿರ ಉದ್ಯೋಗ ನಷ್ಟ!

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 1258 ಉದ್ಯಮಗಳು ಮುಚ್ಚಿದ್ದು, ಸುಮಾರು 83 ಸಾವಿರ ಉದ್ಯೋಗ ನಷ್ಟ ಸಂಭವಿಸಿದೆ ಎನ್ನುವುದು ಸರ್ಕಾರಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಸಣ್ಣ ಉದ್ದಿಮೆಗಳು ಕೋವಿಡ್-19 ಸಾಂಕ್ರಾಮಿಕದ ಆರ್ಥಿಕ ಪರಿಣಾಮಕ್ಕೆ ಮುನ್ನವೇ ಸಮಸ್ಯೆ ಎದುರಿಸುತ್ತಿದ್ದವು ಹಾಗೂ ಸಾಂಕ್ರಾಮಿಕ ಸ್ಥಿತಿ ಸಮಸ್ಯೆ ಉಲ್ಬಣಕ್ಕೆ ಪೂರಕವಾಯಿತು ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ವಿಧಾನಸಭೆಯಲ್ಲಿ ನೀಡಲಾದ ಅಂಕಿ ಅಂಶಗಳ ಪ್ರಕಾರ 2020, ರಾಜ್ಯದ ಕೈಗಾರಿಕೆಗಳ ಪಾಲಿಗೆ ಅತ್ಯಂತ ಕೆಟ್ಟ ವರ್ಷವಾಗಿತ್ತು. 16 ದೊಡ್ಡ ಕೈಗಾರಿಕೆಗಳು ಕೂಡಾ ಈ ಅವಧಿಯಲ್ಲಿ ಹಣಕಾಸು ಸಮಸ್ಯೆಯಿಂದಾಗಿ ಮುಚ್ಚಲ್ಪಟ್ಟಿವೆ. 2020ರಲ್ಲಿ 562 ಸಣ್ಣ ಕೈಗಾರಿಕೆಗಳು ಮುಚ್ಚಿದ್ದು, 31722 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಸಾಂಕ್ರಾಮಿಕ ಬರುವ ಮುನ್ನ 2019ರಲ್ಲಿ 504 ಸಣ್ಣ ಘಟಕಗಳು ಮುಚ್ಚಿದ್ದು, 36605 ಮಂದಿಗೆ ಉದ್ಯೋಗ ನಷ್ಟವಾಗಿದೆ.

ಸಾಂಕ್ರಾಮಿಕದಿಂದ ಜರ್ಜರಿತವಾದ ಕೈಗಾರಿಕೆಗಳ ಸ್ಥಿತಿ ಆರ್ಥಿಕತೆಯ ಪುನಶ್ಚೇತನ ಪ್ರಯತ್ನಗಳ ಹೊರತಾಗಿಯೂ ಸುಧಾರಿಸಿಲ್ಲ. 2021ರಲ್ಲಿ ಒಟ್ಟು 192 ಸಣ್ಣ ಕೈಗಾರಿಕೆಗಳು ಮುಚ್ಚಿದ್ದು, 14863 ಮಂದಿಯ ಉದ್ಯೋಗಕ್ಕೆ ಸಂಚಕಾರ ತಂದಿದೆ. ಮೂರು ವರ್ಷಗಳ ಅವಧಿಯಲ್ಲಿ 49946 ಮಂದಿ ಪುರುಷರು ಮತ್ತು 33244 ಮಂದಿ ಮಹಿಳೆಯರು ಉದ್ಯೋಗ ಕಳೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗೆ ಉತ್ತರವಾಗಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಅಂಕಿ ಅಂಶಗಳನ್ನು ನೀಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಮುಚ್ಚಿದ 17 ದೊಡ್ಡ ಕೈಗಾರಿಕೆಗಳ ಪೈಕಿ 7 ಬೆಂಗಳೂರು ಗ್ರಾಮೀಣ ಜಿಲ್ಲೆಗೆ ಸೇರಿವೆ. ಬಾಗಲಕೋಟೆಯಲ್ಲಿ 3, ಗದಗದಲ್ಲಿ 2, ರಾಮನಗರ, ಕೋಲಾರ, ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ತಲಾ ಒಂದು ಕೈಗಾರಿಕೆಗಳು ಮುಚ್ಚಿವೆ. ಹಣಕಾಸು ಸಮಸ್ಯೆ ಮತ್ತು ಕಚ್ಚಾ ವಸ್ತುಗಳ ಪೂರೈಕೆ ಕೊರತೆ ಉದ್ಯಮಗಳು ಮುಚ್ಚಲು ಪ್ರಮುಖ ಕಾರಣ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X