Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಭವಿಷ್ಯನಿಧಿ ಕಚೇರಿ ಮುಂದೆ...

ಮಂಗಳೂರು: ಭವಿಷ್ಯನಿಧಿ ಕಚೇರಿ ಮುಂದೆ ಎಐಟಿಯುಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Feb 2022 6:33 PM IST
share
ಮಂಗಳೂರು: ಭವಿಷ್ಯನಿಧಿ ಕಚೇರಿ ಮುಂದೆ ಎಐಟಿಯುಸಿ ಪ್ರತಿಭಟನೆ

ಮಂಗಳೂರು: ಕಾರ್ಮಿಕ ಭವಿಷ್ಯನಿಧಿ ಇಲಾಖೆಯ ಅವ್ಯವಸ್ಥೆಗಳನ್ನು ವಿರೋಧಿಸಿ ಎಐಟಿಯುಸಿ ನೇತೃತ್ವದ ಎಸ್.ಕೆ ಬೀಡಿ ವರ್ಕರ್ಸ್‌ ಫೆಡರೇಶನ್ ವತಿಯಿಂದ ಮಂಗಳವಾರ ನಗರದ ಕಾರ್ಮಿಕ ಭವಿಷ್ಯನಿಧಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಇಲಾಖೆಯ ಅವ್ಯವಸ್ಥೆಯಿಂದಾಗಿ ಚಂದಾದಾರ ಕಾರ್ಮಿಕರಿಗೆ, ಪಿಂಚಣಿದಾರರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಸಲ್ಲಿಸುವ ಮನವಿಯನ್ನು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಪ್ರತಿಭಟನಾ ನಿರತರ ಬಳಿ ಆಗಮಿಸಿ ಸ್ವಿಕರಿಸಬೇಕೆಂದು ಪಟ್ಟು ಹಿಡಿದರು. ಆದರೆ ಆಯುಕ್ತರು ಅದಕ್ಕೆ ಒಪ್ಪದಿದ್ದಾಗ ಕಾರ್ಮಿಕರು ಆಕ್ರೋಶಿತರಾಗಿ ಕಚೇರಿಯ ಆವರಣದೊಳಗೆ ನುಗ್ಗಿದರು. ಅಷ್ಟರಲ್ಲಿ ಆಯುಕ್ತರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಅಲ್ಲದೆ ಆನ್‌ಲೈನ್ ಸಹಾಯ ಡೆಸ್ಕ್ ಸ್ಥಾಪಿಸಿ ಉಚಿತ ಸೇವೆ ನೀಡಲು ಅಧೀನ ಅಧಿಕಾರಿಗಳಿಗೆ ಸೂಚಿಸಿದರು.

ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ವಿ. ರಾವ್ ಮಾತನಾಡಿ ಭವಿಷ್ಯನಿಧಿ ವಿಶ್ವಸ್ಥ ಮಂಡಳಿಯಡಿ ಭವಿಷ್ಯನಿಧಿ ಸಂಘಟನೆ ಕಾರ್ಯನಿವರ್ಹಿಸುತ್ತಿದ್ದರೂ ಇಲಾಖೆಯು ಕಾರ್ಮಿಕರಲ್ಲಿ ವಿಶ್ವಾಸ ಕಳೆದುಕೊಂಡು ಸತಾಯಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ವಿ.ಎಸ್. ಬೇರಿಂಜ ಮಾತನಾಡಿ ಡಿಜಿಟಲ್ ಇಂಡಿಯಾದಂತೆ ಭವಿಷ್ಯನಿಧಿ ಇಲಾಖೆ ಕೂಡಾ ತನ್ನ ವ್ಯವಹಾರಗಳನ್ನು ಅಂತರ್ಜಾಲದ ಮೂಲಕ ನಿರ್ವಹಿಸಲು ಶುರು ಮಾಡಿತು. ಆದರೆ ಇಂಟರ್‌ನೆಟ್, ಸರ್ವರ್ ಮತ್ತಿತರ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸದ ಕಾರಣ ಸಮಸ್ಯೆ ಸೃಷ್ಟಿಯಾಗಿದೆ. ಇಲಾಖೆಯ ಸರಕಾರವೇ ಆಧಾರ್ ಗುರುತನ್ನು ಅಂತಿಮಗೊಳಿಸಿದೆ. ಆದರೆ ಭವಿಷ್ಯನಿಧಿ ಇಲಾಖೆಯು ಇದನ್ನು ಪರಿಪೂರ್ಣವಾಗಿ ಒಪ್ಪದಿರುವುದು ವಿಪರ್ಯಾಸ. ಆಧಾರ್ ನೀಡಲಿಲ್ಲ ಅಥವಾ ವಿವರಗಳು ಸರಿಯಿಲ್ಲ ಎಂಬ ಕಾರಣಕ್ಕೆ ಚಂದಾದಾರ ಕಾರ್ಮಿಕರ ಹೆಸರನ್ನೇ ತೆಗೆದು ಹಾಕಿರುವುದು ವಿಶ್ವಾಸದ್ರೋಹವಾಗಿದೆ ಎಂದರು.

ಬಂಟ್ವಾಳ ತಾಲೂಕು ಬೀಡಿ ಆ್ಯಂಡ್ ಜನರಲ್ ಲೇಬರ್ ಯೂನಿಯನ್ (ಎಐಟಿಯುಸಿ) ಕಾರ್ಯದರ್ಶಿ ಬಿ.ಶೇಖರ್ ಮಾತನಾಡಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಕರಾವಳಿ ಬೀಡಿ ಗುತ್ತಿಗೆದಾರರ ಸಂಘಟನೆಯ ಮುಖಂಡ ಅಬ್ದುಲ್ ಖಾದರ್ ಕಿನ್ನಿಗೋಳಿ, ಎಐಟಿಯುಸಿ ಜಿಲ್ಲಾ ಜೊತೆ ಕಾರ್ಯದರ್ಶಿ ಎಂ. ಕರುಣಾಕರ್, ಎಐಟಿಯುಸಿ ನಾಯಕರಾದ ಬಾಬು ಭಂಡಾರಿ ಬಂಟ್ವಾಳ, ಬಿ.ಎಂ.ಹಸೈನಾರ್ ವಿಟ್ಲ, ಶಶಿಕಲಾ ಗಿರೀಶ್ ಉಡುಪಿ, ಸುಚಿತ್ರಾ ಉಡುಪಿ, ಸರಸ್ವತೀ ಕೆ., ಸುಲೋಚನಾ ಕವತ್ತಾರು, ಸರೋಜಿನಿ ಕೂರಿಯಾಳ, ಹರ್ಷಿತ್ ಬಂಟ್ವಾಳ, ಮಮತಾ ಬಿಸಿರೋಡ್, ಕೇಶವತಿ ಬಂಟ್ವಾಳ, ಫಾತಿಮಾ ಪಂಜಿಮೊಗರು, ಇಂದಿರಾ ಪಂಜಿಮೊಗರು, ಸಂಜೀವಿ ಹಳೆಯಂಗಡಿ, ಬೀಡಿ ಗುತ್ತಿಗೆದಾರರಾದ ಕೆ.ಎಚ್. ಶರೀಫ್ ಬಜ್ಪೆ, ರಾಷ್ಟ್ರೀಯ ಮಹಿಳಾ ಒಕ್ಕೂಟದ ಭಾರತಿ ಪ್ರಶಾಂತ್, ಎಐವೈಎಫ್ ಸಂಘಟನೆಯ ಜಗತ್ಪಾಲ್ ಕೋಡಿಕಲ್, ಕೃಷ್ಣಪ್ಪವಾಮಂಜೂರು, ಸುಧಾಕರ್ ಕಲ್ಲೂರು, ದಿನೇಶ್ ಅಮ್ಟಾಡಿ, ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X