Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟಾಚಾರ ಪ್ರಕರಣ: ಪರಮ್‌ ಬೀರ್‌...

ಭ್ರಷ್ಟಾಚಾರ ಪ್ರಕರಣ: ಪರಮ್‌ ಬೀರ್‌ ಸಿಂಗ್‌ ವಿರುದ್ಧ ಸದ್ಯ ಯಾವ ಕ್ರಮ ಬೇಡ; ಮಹಾರಾಷ್ಟ್ರ ಪೊಲೀಸರಿಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Feb 2022 12:03 AM IST
share
ಭ್ರಷ್ಟಾಚಾರ ಪ್ರಕರಣ: ಪರಮ್‌ ಬೀರ್‌ ಸಿಂಗ್‌ ವಿರುದ್ಧ ಸದ್ಯ ಯಾವ ಕ್ರಮ ಬೇಡ; ಮಹಾರಾಷ್ಟ್ರ ಪೊಲೀಸರಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ,ಫೆ.21: ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿರುವ ಮಾಜಿ ಮುಂಬೈ ಪೊಲೀಸ್ ಆಯುಕ್ತ ಪರಮ್‌ ಬೀರ್‌ ಸಿಂಗ್‌ ವಿರುದ್ಧ ಸದ್ಯ ಯಾವುದೇ ಕ್ರಮವನ್ನು ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಂಗಳವಾರ ಮಹಾರಾಷ್ಟ್ರ ಪೊಲೀಸರಿಗೆ ಆದೇಶಿಸಿದೆ. 

ಪರಮ್‌ ಬೀರ್‌ ಸಿಂಗ್‌ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರು ಶಾಮೀಲಾಗಿದ್ದಾರೆ ಎನ್ನಲಾದ ಭ್ರಷ್ಟಾಚಾರ ಹಗರಣದ ತನಿಖೆಯು ಗೊಂದಲಮಯವಾಗಿದೆ ಹಾಗೂ ಅತ್ಯಂತ ದುರದೃಷ್ಟಕರವಾದ ವ್ಯವಸ್ಥೆಯಾಗಿರುವುದರಿಂದ ತಾನು ಈ ರೀತಿ ಆದೇಶಿಸಿರುವುದಾಗಿ ಅದು ಹೇಳಿದೆ.
 ಪರಮ್‌ ಬೀರ್‌ ಸಿಂಗ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಗೆ ವರ್ಗಾಯಿಸಲಾಗುವುದೇ ಎಂಬುದನ್ನು ತಾನು ಶೀಘ್ರದಲ್ಲೇ ನಿರ್ಧರಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲವೆಂದು ಮಹಾರಾಷ್ಟ್ರ ಸರಕಾರವು ಸುಪ್ರೀಂಕೋರ್ಟ್ ಗೆ ಸ್ಪಷ್ಟಪಡಿಸಿದೆ.


  ಖ್ಯಾತ ಉದ್ಯಮಿ, ರಿಲಾಯನ್ಸ್ ವರಿಷ್ಠ ಮುಖೇಶ್ ಅಂಬಾನಿ ಅವರ ನಿವಾಸದ ಹೊರಗಡೆ ಸ್ಫೋಟಕವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಪರಮ್‌ ಬೀರ್‌ ಸಿಂಗ್‌ ಅವರನ್ನು ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಆನಂತರ ಅವರನ್ನು ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಅಮಾನತಿನಲ್ಲಿರಿಸಲಾಗಿತ್ತು.
 ತನ್ನ ವಿರುದ್ಧ ರಾಜ್ಯ ಸರಕಾರ ಶಿಸ್ತುಕ್ರಮ ಕೈಗೊಂಡ ಬಳಿಕ ಪರಮ್‌ ಬೀರ್‌ ಸಿಂಗ್‌ ಅವರು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದರು ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದರೆಂದು ಆರೋಪಿಸಿದ್ದಾರೆ.


 ಅನಿಲ್ ದೇಶಮುಖ್ ಅವರು ರೆಸ್ಟಾರೆಂಟ್, ಪಬ್, ಬಾರುಗಳು ಮತ್ತು ಹುಕ್ಕಾ ಪಾರ್ಲರುಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ಸಂಗ್ರಹಿಸಿಕೊಡುವಂತೆ   ಹಲವಾರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರೆಂದು ಪರಮ್‌ ಬೀರ್‌ ಸಿಂಗ್‌ ಆಪಾದಿಸಿದ್ದರು. ಈ ಆರೋಪಗಳನ್ನು ಅನಿಲ್ ದೇಶಮುಖ್ ನಿರಾಕರಿಸಿದ್ದರು. ಆದರೆ ಈ ಬಗ್ಗೆ ಭಾರೀ ವಿವಾದ ತಲೆದೋರಿದ ಹಿನ್ನೆಲೆಯಲ್ಲಿ ಅವರು ತನ್ನ ಹುದ್ದೆಯನ್ನು ತ್ಯಜಿಸಿದ್ದರು.

   ಪ್ರಕರಣದ ಆಲಿಕೆಯನ್ನು ನಡೆಸಿದ ನ್ಯಾಯಾಧೀಶ ಸಂಜಯ್ ಕಿಶನ್ ಕೌಲ್ ಅವರು, ‘‘ಇದೊಂದು ಗೊಂದಲಕರವಾದ ಪರಿಸ್ಥಿತಿಯಾಗಿದೆಯೆಂದು ನಾವು ಮತ್ತೊಮ್ಮೆ ಹೇಳಲಿಚ್ಛಿಸುತ್ತೇವೆ. ಇಲ್ಲಿ ಯಾರೂ ಕೂಡಾ ಕಳಂಕಮುಕ್ತರಾಗಿ ಹೊರಬಂದಿಲ್ಲ. ರಾಜ್ಯದ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆಯ ಮೇಲೆ ಜನರು ಇಟ್ಟಿದ್ದ ನಂಬಿಕೆಯನ್ನು ಅಲುಗಾಡಿಸುವಂತಹ ಪ್ರವೃತ್ತಿ ಇದಾಗಿದೆ. ಆದರೆ ಕಾನೂನುಪ್ರಕ್ರಿಯೆ ಮುಂದೆ ಸಾಗಲೇ ಬೇಕಾಗುತ್ತದೆ’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X