Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆ ಹಾಡುವಂತೆ ಬಲವಂತಪಡಿಸಿ...

ರಾಷ್ಟ್ರಗೀತೆ ಹಾಡುವಂತೆ ಬಲವಂತಪಡಿಸಿ ಯುವಕನ ಕೊಲೆ ಪ್ರಕರಣ: ಪೊಲೀಸ್‌ ತನಿಖಾ ವಿಧಾನದ ಕುರಿತು ಹೈಕೋರ್ಟ್‌ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ23 Feb 2022 2:12 PM IST
share
ರಾಷ್ಟ್ರಗೀತೆ ಹಾಡುವಂತೆ ಬಲವಂತಪಡಿಸಿ ಯುವಕನ ಕೊಲೆ ಪ್ರಕರಣ: ಪೊಲೀಸ್‌ ತನಿಖಾ ವಿಧಾನದ ಕುರಿತು ಹೈಕೋರ್ಟ್‌ ಅಸಮಾಧಾನ

ಹೊಸದಿಲ್ಲಿ,ಫೆ.23: ಈಶಾನ್ಯ ದಿಲ್ಲಿಯಲ್ಲಿ 2020ರಲ್ಲಿ ನಡೆದಿದ್ದ ಕೋಮು ಹಿಂಸಾಚಾರದ ಸಂದರ್ಭದಲ್ಲಿ 23 ಹರೆಯದ ಮುಸ್ಲಿಂ ಯುವಕನ ಸಾವಿನ ಕುರಿತು ನಡೆಸಲಾದ ತನಿಖೆ ವಿವರಗಳಿರುವ ದಿಲ್ಲಿ ಪೊಲೀಸರ ಸ್ಥಿತಿಗತಿ ವರದಿಯಲ್ಲಿ ಗಣನೀಯವಾಗಿರುವುದು ಏನೂ ಇಲ್ಲ ಎಂದು ಅಭಿಪ್ರಾಯಿಸಿರುವ ದಿಲ್ಲಿ ಉಚ್ಚ ನ್ಯಾಯಾಲಯವು,ಈ ಸಂಬಂಧ ಪೊಲೀಸರನ್ನು ಕಟುವಾಗಿ ಟೀಕಿಸಿದೆ.

ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ಧ ಹಿಂಸಾಚಾರದ ಬಳಿಕ 2020,ಫೆ.23 ಮತ್ತು 26 ನಡುವೆ ಸಂಭವಿಸಿದ್ದ ದಂಗೆಗಳಲ್ಲಿ 53 ಜನರು ಕೊಲ್ಲಲ್ಪಟ್ಟು, ನೂರಾರು ಜನರು ಗಾಯಗೊಂಡಿದ್ದರು. ಮೃತರಲ್ಲಿ ಕನಿಷ್ಠ 38 ಜನರು ಮುಸ್ಲಿಮರಾಗಿದ್ದರು. ಫೈಝಾನ್ ಮತ್ತು ಇತರ ನಾಲ್ವರನ್ನು ರಾಷ್ಟ್ರಗೀತೆಯನ್ನು ಹಾಡುವಂತೆ ಮತ್ತು ‘ವಂದೇ ಮಾತರಂ’ ಹೇಳುವಂತೆ ಆದೇಶಿಸಿದ್ದ ಪೊಲೀಸರು ಅವರನ್ನು ಥಳಿಸುತ್ತಿದ್ದನ್ನು 2020,ಫೆ.24ರಂದು ಚಿತ್ರೀಕರಿಸಲಾಗಿದ್ದ ವೀಡಿಯೊ ತೋರಿಸಿತ್ತು. ಬಳಿಕ ಫೈಝಾನ್ನನ್ನು ಜ್ಯೋತಿನಗರ ಠಾಣೆಯಲ್ಲಿ ಕೂಡಿಹಾಕಿದ್ದು,ಬಿಡುಗಡೆಗೊಂಡ ಬೆನ್ನಿಗೇ ಆತ ಮೃತಪಟ್ಟಿದ್ದ.

ಮಂಗಳವಾರ ಪೊಲೀಸರು ತಮ್ಮ ತನಿಖೆಯ ಕುರಿತು ಸ್ಥಿತಿಗತಿ ವರದಿಯನ್ನು ಮೊಹರ್ಬಂದ್ ಲಕೋಟೆಯಲ್ಲಿ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಶೇಷ ತನಿಖಾ ತಂಡದಿಂದ ವಿಚಾರಣೆಯನ್ನು ಕೋರಿ ಫೈಝಾನ್ ತಾಯಿ ಕಿಸ್ಮತುನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪೊಲೀಸರು ತನ್ನ ಮಗನನ್ನು ಅಕ್ರಮವಾಗಿ ಬಂಧಿಸಿದ್ದರು ಮತ್ತು ಆತನಿಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಆತ ಮೃತಪಟ್ಟಿದ್ದ ಎಂದು ಕಿಸ್ಮತುನ್ ಪ್ರತಿಪಾದಿಸಿದ್ದಾರೆ.
ಪೊಲೀಸರು ಸಲ್ಲಿಸಿರುವ ಸ್ಥಿತಿಗತಿಯಲ್ಲಿ ವರದಿಯಲ್ಲಿ ಏನೂ ಇಲ್ಲ ಎಂದು ಮಂಗಳವಾರ ವಿಚಾರಣೆ ಸಂದರ್ಭದಲ್ಲಿ ನ್ಯಾ.ಮುಕ್ತಾ ಗುಪ್ತಾ ಟೀಕಿಸಿದರು.

ಆದೇಶವಿಲ್ಲದಿದ್ದರೂ ಪೊಲೀಸರು ಮೊಹರ್ಬಂದ್ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿದ್ದಾರೆ ಎಂದು ಅರ್ಜಿದಾರರ ಪರ ನ್ಯಾಯವಾದಿ ವೃಂದಾ ಗ್ರೋವರ್ ಆಕ್ಷೇಪಿಸಿದ ಬಳಿಕ ವರದಿಯನ್ನು ಅವರೊಂದಿಗೆ ಹಂಚಿಕೊಳ್ಳುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿತು.

ವರದಿಯಲ್ಲಿ ಪ್ರಕರಣದ ತನಿಖೆ ಮತ್ತು ಆರೋಪಿಗಳ ವಿವರಗಳಿರುವುದರಿಂದ ಅದನ್ನು ಮೊಹರ್ಬಂದ್ ಲಕೋಟೆಯಲ್ಲಿ ಸಲ್ಲಿಸಲಾಗಿದೆ ಎಂದು ಪೊಲೀಸರು ಸಮಜಾಯಿಷಿ ನೀಡಿದರು. ಫೈಝಾನ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುವ ಮೊದಲಿನ ವೈದ್ಯಕೀಯ ವರದಿಯಲ್ಲಿ ಆತನ ಶರೀರದಲ್ಲಿ ಕೇವಲ ಮೂರು ಗಾಯಗಳನ್ನು ಉಲ್ಲೇಖಿಸಲಾಗಿತ್ತು, ಆತನ ಮರಣೋತ್ತರ ಪರೀಕ್ಷಾ ವರದಿಯಲ್ಲಿ 20 ಗಾಯಗಳನ್ನು ಏಕೆ ತೋರಿಸಲಾಗಿದೆ ಎನ್ನುವುದನ್ನು ವಿವರಿಸುವಂತೆ ನ್ಯಾ.ಗುಪ್ತಾ ಪೊಲೀಸರಿಗೆ ಸೂಚಿಸಿದರು.
ಫೈಝಾನ್ ಜೊತೆಗೆ ಥಳಿಸಲ್ಪಟ್ಟಿದ್ದ ಮತ್ತು ಸಾಕ್ಷಿಗಳಾಗಿರುವ ಇತರ ನಾಲ್ವರ ಹೇಳಿಕೆಗಳನ್ನು ಏಕೆ ದಾಖಲಿಸಿಕೊಂಡಿರಲಿಲ್ಲ ಎಂದು ಪೊಲೀಸರನ್ನು ಪ್ರಶ್ನಿಸಿದ ನ್ಯಾಯಾಲಯವು,ಈ ಪ್ರಕರಣದಲ್ಲಿ ನೀವು ಪ್ರತ್ಯಕ್ಷದರ್ಶಿಗಳ ನೆರವನ್ನು ಪಡೆದಿಲ್ಲ,ಬೇಕಾಬಿಟ್ಟಿಯಾಗಿ ನಡೆದುಕೊಂಡಿದ್ದೀರಿ ಎಂದು ಕುಟುಕಿತು.

ಥಳಿತದ ನಂತರ ಸಾಯುವ ಸ್ಥಿತಿಯಲ್ಲಿದ್ದ ಫೈಝಾನ್ನನ್ನು ರಾತ್ರಿಯಿಡೀ ಅಕ್ರಮ ಬಂಧನದಲ್ಲಿ ಇರಿಸಲಾಗಿತ್ತು ಎಂದು ಹೇಳಿದ ಗ್ರೋವರ್,ಜ್ಯೋತಿನಗರ ಪೊಲೀಸ್ ಠಾಣೆಯ ಡ್ಯೂಟಿ ರೋಸ್ಟರ್ನಂತಹ ದಾಖಲೆಗಳನ್ನು ಪೊಲೀಸರು ಸೀಲ್ ಮಾಡಿರಲಿಲ್ಲ ಮತ್ತು ಅಂದು ರಾತ್ರಿ ಕರ್ತವ್ಯದಲ್ಲಿದ್ದವರನ್ನು ಪ್ರಶ್ನಿಸಿಲ್ಲ ಎಂದು ಆರೋಪಿಸಿದರು.
 
ವೀಡಿಯೊದ ಮೂಲವನ್ನು ಏಕೆ ಪತ್ತೆ ಹಚ್ಚಲಿಲ್ಲ ಎಂದೂ ನ್ಯಾ.ಗುಪ್ತಾ ಪೊಲೀಸರನ್ನು ಪ್ರಶ್ನಿಸಿದರು. ಇದಕ್ಕೆ ತನಿಖಾಧಿಕಾರಿ ಪಂಕಜ್ ಅರೋರಾ ಅವರು,ಹೆಡ್ ಕಾನ್ಸ್ಟೇಬಲ್ ಫೋನ್ನಿಂದ ವೀಡಿಯೊವನ್ನು ಚಿತ್ರೀಕರಿಸಲಾಗಿತ್ತು ಎನ್ನುವುದು ಗೊತ್ತಾಗಿದೆ,ಆದರೆ ವಿಚಾರಣೆ ಸಂದರ್ಭ ವೀಡಿಯೊವನ್ನು ಚಿತ್ರೀಕರಿಸಿದ್ದನ್ನು ಅವರು ನಿರಾಕರಿಸಿದ್ದಾರೆ ಎಂದು ಉತ್ತರಿಸಿದರು. ಪ್ರಕರಣದ ಮುಂದಿನ ವಿಚಾರಣೆಯು ಮಾ.15ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X