Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರಾಗೃಹಗಳಲ್ಲಿ ಮಾದಕವಸ್ತುಗಳ ಬಳಕೆ...

ಕಾರಾಗೃಹಗಳಲ್ಲಿ ಮಾದಕವಸ್ತುಗಳ ಬಳಕೆ ಆರೋಪ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ23 Feb 2022 6:58 PM IST
share
ಕಾರಾಗೃಹಗಳಲ್ಲಿ ಮಾದಕವಸ್ತುಗಳ ಬಳಕೆ ಆರೋಪ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಫೆ.23: ರಾಜ್ಯದ ಕಾರಾಗೃಹಗಳಿಗೆ ಧೂಮಪಾನ, ಗಾಂಜಾ ಇನ್ನಿತರೆ ಮಾದಕವಸ್ತುಗಳು ಸರಬರಾಜಾಗುತ್ತಿರುವ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ನಗರದ ವಕೀಲ ಧರ್ಮಪಾಲ್ ಹಾಗೂ ಕೆ. ನಾರಾಯಣಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ವಕೀಲ ಧರ್ಮಪಾಲ್ ವಾದ ಮಂಡಿಸಿ, ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಖುದ್ದು ಜೈಲು ಸಿಬ್ಬಂದಿಯೇ ಮಾದಕವಸ್ತು ಪೂರೈಕೆ ಮಾಡುತ್ತಿರುವ ಆರೋಪವಿದೆ. ಜೈಲುಗಳ ಒಳಗೆ ಸಿಸಿಟಿವಿ ಇಲ್ಲ. ಸೂಕ್ತ ಮೇಲ್ವಿಚಾರಣೆಯೂ ಇಲ್ಲ ಎಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಸರಕಾರದ ಪರ ವಕೀಲರು, ಮಾಧ್ಯಮ ವರದಿ ಆಧರಿಸಿ ಪಿಐಎಲ್ ಸಲ್ಲಿಸಲಾಗಿದೆ. ಜೈಲುಗಳ ಒಳಗೆ ಸಿಸಿಟಿವಿಗಳಿವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜೈಲುಗಳ ಒಳಗಿನ ವಸ್ತು ಸ್ಥಿತಿ ಏನು, ಸಿಸಿಟಿವಿ ವ್ಯವಸ್ಥೆ ಹೇಗಿದೆ ಎಂಬುದು ನಮಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಬಳಿಕ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ, ಗೃಹ ಸಚಿವರು, ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಬಂದೀಖಾನೆ ಡಿಜಿಪಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ: ರಾಜ್ಯದ ಬಂದೀಖಾನೆಗಳಲ್ಲಿ ಇರುವ ಪ್ರಭಾವಿ ಕೈದಿಗಳಿಗೆ ಸಿಬ್ಬಂದಿಯೇ ಧೂಮಪಾನ, ಗಾಂಜಾ ಸೇರಿ ಇನ್ನಿತರೆ ಮಾದಕವಸ್ತು ಪೂರೈಸುತ್ತಿದ್ದಾರೆ. ಜೈಲಿನಲ್ಲಿ ಸೂಕ್ತ ಸಿಸಿಟಿವಿ ವ್ಯವಸ್ಥೆ ಇಲ್ಲ. ಮೇಲ್ವಿಚಾರಣಾ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಈ ಲೋಪಗಳನ್ನು ಬಳಸಿಕೊಂಡು ಕೆಲವು ಕೈದಿಗಳು ತಮಗೆ ಬೇಕಾದಂತೆ ರಾಜಾತಿಥ್ಯ ಪಡೆಯುತ್ತಿದ್ದಾರೆ. ಕೈದಿಯೊಬ್ಬ ತನ್ನ ಒಳಉಡುಪಿನಲ್ಲಿ ಮಾಕದವಸ್ತು ಇರಿಸಿಕೊಂಡಿದ್ದು ಪತ್ತೆಯಾಗಿದೆ. ಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾದ ಕೈದಿಗಳನ್ನು ತ್ವರಿತವಾಗಿ ಬಿಡುಗಡೆ ಮಾಡಲು ಜೈಲು ಸಿಬ್ಬಂದಿ ಹಣ ಕೇಳುತ್ತಿರುವ ಆರೋಪವೂ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಜೈಲುಗಳಲ್ಲಿನ ವ್ಯವಸ್ಥೆ ಸುಧಾರಣೆ ಮಾಡಲು ಸಿಸಿಟಿವಿ ಅಳವಡಿಸಬೇಕು. ಪೂರ್ಣಾವಧಿ ಮೇಲುಸ್ತುವಾರಿ ನಡೆಸಲು ಪ್ರತ್ಯೇಕ ವಿಚಕ್ಷಣಾ ದಳ ಸ್ಥಾಪಿಸಬೇಕು. ಮಾದಕವಸ್ತು ಪೂರೈಕೆ ಪ್ರಕರಣಗಳನ್ನು ನ್ಯಾಯಾಂಗ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X