Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಹಿಳಾ ಸಬಲೀಕರಣ ಯೋಜನೆಗಳ ಲಾಭ...

ಮಂಗಳೂರು: ಮಹಿಳಾ ಸಬಲೀಕರಣ ಯೋಜನೆಗಳ ಲಾಭ ಪಡೆಯಲು ದ.ಕ. ಜಿಪಂ. ಸಿಇಒ ಕರೆ

ವಾರ್ತಾಭಾರತಿವಾರ್ತಾಭಾರತಿ23 Feb 2022 11:10 PM IST
share

ಮಂಗಳೂರು: ಮಹಿಳೆಯರ ಸಬಲೀಕರಣಕ್ಕಾಗಿ ಸರಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ತ್ರೀಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ದ.ಕ. ಜಿಪಂ ಸಿಇಒ ಡಾ. ಕುಮಾರ್ ಕರೆ ನೀಡಿದರು.

ಸ್ವಚ್ಚ ಭಾರತ್ ಮಿಷನ್ ವತಿಯಿಂದ ಬೆಂಗಳೂರಿನ ಸಾಹಸ್ ಸಂಸ್ಥೆ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಸಂಸ್ಥೆಯ ಸಹಯೋಗದಲ್ಲಿ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಜೀವಿನಿ ಒಕ್ಕೂಟವನ್ನು ಬಳಸಿಕೊಳ್ಳುವ ಮೂಲಕ ಮಹಿಳೆಯರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದಾಗಿದೆ. ಅದಕ್ಕಾಗಿ ಭಿನ್ನವಾಗಿ, ಕ್ರಿಯಾತ್ಮಕವಾಗಿ ಆಲೋಚಿಸಿ ಅವುಗಳನ್ನು ಅನುಷ್ಠಾನಗೊಳಿಸಬೇಕು. ಆ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಡಾ.ಕುಮಾರ್ ಹೇಳಿದರು.

ಜಿಲ್ಲೆಯಲ್ಲಿರುವ ಸುಮಾರು 5 ಸಾವಿರ ಸ್ವಸಹಾಯ ಗುಂಪುಗಳ 55 ಸಾವಿರ ಮಹಿಳಾ ಸದಸ್ಯರು ಈ ಎಲ್ಲ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ತ್ಯಾಜ್ಯವನ್ನು ಆದಾಯದ ಮೂಲಗಳಾಗಿ ನೋಡಬೇಕು. ಕಸದಿಂದ ರಸ ಎಂಬ ಪರಿಕಲ್ಪನೆಯನ್ನು ಮೈಗೂಡಿಸಿಕೊಂಡು ವಿವಿಧ ರೀತಿಯ ಉತ್ಪನ್ನ ತಯಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಜಿಪಂನಲ್ಲಿ ಮಹಿಳಾ ಸಬಲೀಕರಣದ ಉದ್ದೇಶಕ್ಕಾಗಿ ನೂತನವಾಗಿ ಕೌಶಲಾಭಿವೃದ್ದಿ ಉದ್ಯಮಶೀಲತೆ ಎಂಬ ಘಟಕ ತೆರೆಯಲಾಗಿದೆ. ಅದರ ಪ್ರಯೋಜನ ಪಡೆದುಕೊಳ್ಳುವಂತೆ ಡಾ. ಕುಮಾರ್ ತಿಳಿಸಿದರು.

ತ್ಯಾಜ್ಯದಿಂದ ಜೈವಿಕ ಗೊಬ್ಬರ ತಯಾರಿಕೆ, ಕೈತೋಟ ನಿರ್ಮಾಣ, ಸಾವಯವ ತರಕಾರಿ ಬೆಳೆ, ಅಣಬೆ ಬೇಸಾಯ, ತ್ಯಾಜ್ಯದಿಂದ ಜೈವಿಕ ಕಿಣ್ವ, ಸಾಬೂನು ತಯಾರಿಕೆ, ಬಟ್ಟೆಚೀಲ, ಬಟ್ಟೆ ಪ್ಯಾಡ್ ತಯಾರಿಕೆಗಳ ಬಗ್ಗೆ ತೋಟಗಾರಿಕಾ ಇಲಾಖೆಯ ಹಿರಿಯ ಸಹಯಕ ನಿರ್ದೇಶಕ ಪ್ರವೀಣ್ ಮತ್ತು ಸ್ವಚ್ಚ ಭಾರತ್ ಮಿಷನ್‌ನ ಸಂಯೋಜಕ ನವೀನ್ ಮಾಹಿತಿ ನೀಡಿದರು.

ಸ್ವಚ್ಚ ಭಾರತ್ ಮಿಷನ್‌ನ ನೋಡಲ್ ಅಧಿಕಾರಿ ಆನಂದ ಕುಮಾರ್, ಸಹಾಯಕ ಯೋಜನಾಧಿಕಾರಿ ಫೆಲಿಕ್ಸ್ ಡಿಮೆಲ್ಲೊ, ಉಪ ಸಹಾಯಕ ಯೋಜನಾಧಿಕಾರಿ ಸರೋಜಿನಿ, ಸಾಹಸ್ ಸಂಸ್ಥೆಯ ಯೋಜನಾ ನಿರ್ವಾಹಕ ಸುದೇಶ್ ಕುಮಾರ್, ಸ್ವಚ್ಚ ಭಾರತ್‌ಮಿಷನ್‌ನ ಯೋಜನಾಧಿಕಾರಿಗಳಾದ ಪವನ್ ಕೆ, ದೊಂಬಯ್ಯ, ಮಂಗಳೂರು ತಾಪಂ ಇಒ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X