Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಾವು ಶಾಲೆ ಬಿಡಲು ಶೌಚಾಲಯ ಇಲ್ಲದಿರುವುದೇ...

ನಾವು ಶಾಲೆ ಬಿಡಲು ಶೌಚಾಲಯ ಇಲ್ಲದಿರುವುದೇ ಕಾರಣ

► ಸರಕಾರಿ ಶಾಲೆಯ 150ಕ್ಕೂ ಅಧಿಕ ವಿದ್ಯಾರ್ಥಿನಿಯರಿಂದ ಸಿಎಂಗೆ ಪತ್ರ ► ಕೂಡಿಟ್ಟ 25 ರೂ. ಕೊಡುತ್ತೇವೆ, ಶೌಚಾಲಯ ಕಟ್ಟಿಸಿ: ಬಾಲಕಿಯರ ಮನವಿ

ಜಿ.ಮಹಾಂತೇಶ್ಜಿ.ಮಹಾಂತೇಶ್24 Feb 2022 9:34 AM IST
share
ನಾವು ಶಾಲೆ ಬಿಡಲು ಶೌಚಾಲಯ ಇಲ್ಲದಿರುವುದೇ ಕಾರಣ

ಬೆಂಗಳೂರು: ‘‘ನಮ್ಮ ಶಾಲೆಯಲ್ಲಿ ಒಟ್ಟು 132 ವಿದ್ಯಾರ್ಥಿಗಳಿದ್ದೇವೆ. ಆದರೆ ನಮಗಿರುವುದು ಒಂದೇ ಒಂದು ಶೌಚಾಲಯ. ಶೌಚಾಲಯಕ್ಕೆ ಸರದಿಯಲ್ಲಿ ಹೋಗಬೇಕು. ಕನಿಷ್ಠ 30 ನಿಮಿಷ ಸರದಿಯಲ್ಲಿ ನಿಲ್ಲಬೇಕು. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ತಾವು ನನ್ನನ್ನು ಮಗಳು ಎಂದು ಭಾವಿಸಿ ಶೌಚಾಲಯ ಕಟ್ಟಿಸಿಕೊಡಿ, ನಾನು ಕೂಡಿಟ್ಟ ಹಣ 25 ರೂ. ಕೊಡಲು ಸಿದ್ಧಳಿದ್ದೇನೆ.’’

‘‘ಎಲ್ಲಿದೆ ಬಯಲು ಶೌಚಮುಕ್ತ ಭಾರತ? ನಾನು ಶಾಲೆ ಬಿಡಲು ಶೌಚಾಲಯವೇ ಕಾರಣ. ಇಲ್ಲಿ ಶೌಚಾಲಯ ಇಲ್ಲದಿರುವುದರಿಂದಲೇ ನಾನು ಶಾಲೆ ಬಿಡಲು ತೀರ್ಮಾನಿಸಿದ್ದೇನೆ. ನನ್ನ ಜಾಗದಲ್ಲಿ ನಿಮ್ಮ ಮಗನೋ...ಮಗಳೋ ಇದ್ದರೆ ಏನು ಮಾಡುತ್ತಿದ್ದಿರಿ?’’

ಹೀಗೆ ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಪತ್ರ ಚಳವಳಿ ಆರಂಭಿಸಿರುವುದು ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯ ತಾಲೂಕಿನ ಅಣ್ಣೂರು ಕೇರಿಯಲ್ಲಿರುವ ಸರಕಾರಿ ಪ್ರೌಢಶಾಲೆಯ ಮಕ್ಕಳು.

ಪತ್ರ ಚಳವಳಿ ಆರಂಭಿಸಿರುವ ಅಣ್ಣೂರು ಕೇರಿಯ ಸರಕಾರಿ ಪ್ರೌಢಶಾಲೆಯ ಮಕ್ಕಳು ಶೌಚಾಲಯ ನಿರ್ಮಾಣ ಮಾಡಿಕೊಡದಿದ್ದರೆ ಶಾಲೆಯನ್ನೇ ಬಿಡಬೇಕಾದ ಸ್ಥಿತಿ ಇದೆ ಎಂದು ಬರೆದಿರುವ ಸಾಲು ಸಾಲು ಪತ್ರಗಳತ್ತ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿರುಗಿಯೂ ನೋಡಿಲ್ಲ ಎಂದು ತಿಳಿದು ಬಂದಿದೆ. ಅಣ್ಣೂರು ಕೇರಿಯ ಸರಕಾರಿ ಪ್ರೌಢಶಾಲೆಯ ಮಕ್ಕಳು ಪತ್ರ ಬರೆದಿರುವುದನ್ನು ‘the-file.in’ ಖಚಿತಪಡಿಸಿಕೊಂಡಿದೆ.

 ‘‘ಶೌಚಾಲಯ ಕಟ್ಟಿಕೊಡಲು ಕೂಡಿಟ್ಟ ಹಣವನ್ನು ನೀಡುತ್ತೇವೆ’’ ಎಂದು ಹಲವು ಮಕ್ಕಳು ಪತ್ರದಲ್ಲಿ ವಿವರಿಸಿದ್ದಾರೆ. 2ರಿಂದ 50 ರೂ.ವರೆಗೆ ಕೂಡಿಟ್ಟ ಹಣವನ್ನು ಕೊಡಲು ಸಿದ್ಧರಿದ್ದೇವೆ ಎಂದು ಪತ್ರದಲ್ಲಿ ಮಕ್ಕಳು ಹೇಳಿದ್ದಾರೆ. ದಯಾಮಯಿಗಳಾದ ತಾವು ನನ್ನನ್ನು ನಿಮ್ಮ ಮಗ ಎಂದು ಭಾವಿಸಿ ಒಂದು ಶೌಚಾಲಯವನ್ನು ಕಟ್ಟಿಸಿಕೊಡಬೇಕು. ಶೌಚಾಲಯ ಇಲ್ಲದಿರುವುದು ನನಗೆ ತುಂಬಾ ದುಃಖದ ವಿಷಯ. ಎಲ್ಲಿದೆ ಸ್ವಚ್ಛ ಭಾರತ,’ ಎಂದೂ ಪತ್ರದಲ್ಲಿ ಪ್ರಶ್ನಿಸಿರುವುದು ತಿಳಿದು ಬಂದಿದೆ.

    ಮತ್ತೊಂದು ಸಂಗತಿ ಎಂದರೆ 2021-22ನೇ ಸಾಲಿನ ಆಯವ್ಯಯದಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಅಡಿಯ ಶಾಲೆಗಳಿಗೆ ಮೂಲಭೂತ ಸೌಲಭ್ಯ ಯೋಜನೆಗೆ (ಲೆಕ್ಕ ಶೀರ್ಷಿಕೆ; 4202-01-202-1-05-133) ಘೋಷಿಸಿದ್ದ ಅನುದಾನದ ಪೈಕಿ 15 ಕೋಟಿ ರೂ. ಕ್ರಿಯಾಯೋಜನೆಗೆ 2022ರ ಫೆಬ್ರವರಿ 23ರಂದು ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆದೇಶ ಹೊರಡಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ 12 ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 42 ತರಗತಿ ಕೊಠಡಿ, 6 ಪ್ರಯೋಗಾಲಯ ಕೊಠಡಿ, 34 ಶೌಚಾಲಯ ಬ್ಲಾಕ್ ನಿರ್ಮಾಣಕ್ಕೆ 15.00 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಲ್ಲಿಸಿತ್ತು. ಅಲ್ಲದೆ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣ, ಸಿಡಬ್ಲ್ಯೂಎಸ್‌ಎನ್ ಶೌಚಾಲಯ ನಿರ್ಮಾಣಕ್ಕೆ ಸಮಗ್ರ ಶಿಕ್ಷಣ ಯೋಜನೆಯಡಿ 2018-19, 2019-20ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಅನುದಾನವೇ ಮಂಜೂರಾಗಿಲ್ಲ. ಹಾಗೆಯೇ 2020-21 ಮತ್ತು 2021-22ನೇ ಸಾಲಿನ ಪಿಎಬಿ ಸಭಾ ನಡವಳಿಯಂತೆ ಶೌಚಾಲಯವೂ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳಿಗೆ ಅನುದಾನ ಅನುಮೋದನೆಯಾಗಿದ್ದರೂ ಕೇಂದ್ರ ಸರಕಾರದಿಂದಲೇ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದ ಹೊಂದಾಣಿಕೆ ಪಾಲು ಕೂಡ ಬಿಡುಗಡೆಯಾಗಿಲ್ಲ. ಹೀಗಾಗಿ ಶಾಲೆಗಳಲ್ಲಿ ಕಾಮಗಾರಿಗಳು ಅನುಷ್ಠಾನಗೊಂಡಿಲ್ಲ ಎಂಬುದು ಬಿ.ಸಿ. ನಾಗೇಶ್ ಅವರು 2022ರ ಫೆಬ್ರವರಿ 21ರಂದು ಕೆ.ಎ. ತಿಪ್ಪೇಸ್ವಾಮಿ ಅವರಿಗೆ ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

   ದೊಡ್ಡ ಪ್ರಮಾಣದ ದುರಸ್ತಿ ಸಂಬಂಧ 60 ಕಾಮಗಾರಿಗಳಿಗೆ 2020-21ರಲ್ಲಿ ರೂ. 2.87 ಕೋಟಿ, ಹೆಣ್ಣು ಮಕ್ಕಳ ವಸತಿ ನಿಲಯಕ್ಕೆ ರೂ.9 ಕೋಟಿ, ಹೆಣ್ಣು ಮಕ್ಕಳ ಶೌಚಾಲಯ ಮತ್ತು ಸಿಡಬ್ಲ್ಯೂಎಸ್‌ಎನ್ ಶೌಚಾಲಯ ನಿರ್ಮಾಣಕ್ಕೆ ಬಿಡಿಗಾಸೂ ನೀಡಿಲ್ಲ. 2021-22ರಲ್ಲಿ ದೊಡ್ಡ ಪ್ರಮಾಣದ ದುರಸ್ತಿಗೆ 7 ಕಾಮಗಾರಿಗಳಿಗೆ 32.00 ಲಕ್ಷ ರೂ. 91 ಸಿಡಬ್ಲೂಎಸ್‌ಎನ್ ಶೌಚಾಲಯ ನಿರ್ಮಾಣಕ್ಕೆ 2.41 ಕೋಟಿ ರೂ., ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣಕ್ಕೆ 6.50 ಲಕ್ಷ ರೂ. ಅನುಮೋದನೆಯಾಗಿದ್ದರೂ ಕೇಂದ್ರ ಸರಕಾರವು ತನ್ನ ಪಾಲನ್ನು ಬಿಡುಗಡೆ ಮಾಡಿಲ್ಲ ಎಂಬುದು ಉತ್ತರದಿಂದ ಗೊತ್ತಾಗಿದೆ.

 ರಾಜ್ಯ ವಲಯ, ನರೇಗಾ ಅನುದಾನ ಒಗ್ಗೂಡಿಸುವಿಕೆ ಮೂಲಕ ಶೌಚಾಲಯ ನಿರ್ಮಾಣ ಮತ್ತು ದುರಸ್ತಿಗೆ ಕೋಟ್ಯಂತರ ರೂ. ಅನುದಾನ ಒದಗಿಸಲಾಗಿದೆ ಎಂಬುದು ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿನ ಒಟ್ಟು ಶಾಲೆಗಳ ಪೈಕಿ 179 ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯಗಳಿಲ್ಲ. ಈ ಪೈಕಿ 85 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ 2022ರ ಫೆ.21ರಂದು ಸುನೀಲ್ ಗೌಡ ಬಿ. ಪಾಟೀಲ್ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ದಾರೆ.

  ವಿಶೇಷವೆಂದರೆ ಸಚಿವ ಬಿ.ಸಿ. ನಾಗೇಶ್ ಮತ್ತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ತವರು ಜಿಲ್ಲೆ ತುಮಕೂರಿನ ಚಿಕ್ಕನಾಯಕನಹಳ್ಳಿ, ಕುಣಿಗಲ್, ಶಿರಾ, ಮಧುಗಿರಿಯಲ್ಲಿ, 6 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳೇ ಇಲ್ಲ. 2021-22ನೇ ಸಾಲಿನಲ್ಲಿ ರಾಜ್ಯದ ಶಾಲೆಗಳಿಗೆ ಕುಡಿಯುವ ನೀರು ಮತ್ತು ಶೌಚಾ ಲಯಗಳ ನಿರ್ವಹಣೆಗೆ 25 ಕೋಟಿ ರೂ. ಅನುದಾನ ಒದಗಿಸಿದ್ದರೂ ಶಾಲೆಗಳಲ್ಲಿ ಶೌಚಾಲಯ ಹೊಂದಿಲ್ಲ ಎಂಬ ಸಂಗತಿ ನಾಗೇಶ್ ಅವರು ನೀಡಿರುವ ಉತ್ತರ ದಿಂದ ತಿಳಿದು ಬಂದಿದೆ.

ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಬಲವರ್ಧನೆಗೊಳಿಸಲು 2018-19ನೇ ಆಯವ್ಯಯದಲ್ಲಿ ಘೋಷಿಸಿದ್ದ ವಿಶೇಷ ಪ್ಯಾಕೇಜ್ ಯೋಜನೆಯಡಿ 31.46 ಕೋಟಿ ರೂ. ಮತ್ತು 2020-21ನೇ ಸಾಲಿನ ವಿಶೇಷ ಪ್ಯಾಕೇಜ್‌ನ ಅಡಿಯಲ್ಲಿ 50 ಕೋಟಿ ರೂ. ಸೇರಿ ಒಟ್ಟಾರೆ 81.46 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದು ತಿಳಿದು ಬಂದಿದೆ. ಬಾಕಿ ಉಳಿದಿರುವ ಅನುದಾನವನ್ನು ಬಿಡುಗಡೆ ಮಾಡದ ಸರಕಾರವು ಇದೀಗ 2022-23ನೇ ಸಾಲಿಗೆ ಸರಕಾರಿ ಪದವಿಪೂರ್ವ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕಾಗಿ 60 ಕೋಟಿ ರೂ. ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ಕಟ್ಟಡ/ತರಗತಿ ಕೊಠಡಿಗಳ ದುರಸ್ತಿ, ನವೀಕರಣಕ್ಕಾಗಿ 35 ಕೋಟಿ ರೂ. ಒಳಗೊಂಡಂತೆ 424.46 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಇನ್ನು ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ರಾಜ್ಯಾದ್ಯಂತ 750 ಸರಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂ.ಗಳಂತೆ 7,500.00 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದರೂ ರಾಜ್ಯದ ಹಲವು ಸರಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೌಚಾಲಯಗಳ ನಿರ್ಮಾಣಕ್ಕೆ ಆಸಕ್ತಿ ವಹಿಸಿಲ್ಲ.

 2021-22ನೇ ಸಾಲಿನಲ್ಲಿ ರಾಜ್ಯ ವಲಯ ಹಾಗೂ ನರೇಗಾ ಅನುದಾನ ಒಗ್ಗೂಡಿಸುವಿಕೆ ಮೂಲಕ ಶೌಚಾಲಯ ನಿರ್ಮಾಣ ಹಾಗೂ ದುರಸ್ತಿಗೆ 3,500.00 ಲಕ್ಷ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಸರಕಾರ ಪ್ರಚಾರ ಗಿಟ್ಟಿಸಿಕೊಂಡಿದೆಯಾದರೂ ಇದುವರೆಗೂ ಬಹುತೇಕ ಸರಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೌಚಾಲಯಗಳೇ ಇಲ್ಲ ಎಂದು ತಿಳಿದು ಬಂದಿದೆ.

 2021-22ನೇ ಸಾಲಿನ ರಾಜ್ಯ ಸರಕಾರದ ಬಂಡವಾಳ ವೆಚ್ಚ ಯೋಜನೆಯಡಿ ವಿವಿಧ ವಿಧಾನಸಭೆ ಕ್ಷೇತ್ರದ ಸರಕಾರಿ ಶಾಲಾ ಕಟ್ಟಡಗಳ ತುರ್ತು ದುರಸ್ತಿಗೆ 6.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಅನುದಾನವನ್ನು ಗರಿಷ್ಠ ಶಾಲೆಗಳಲ್ಲಿ ದುರಸ್ತಿ ಕಾರ್ಯ ವಿಸ್ತರಿಸಲು ಸ್ಥಳೀಯವಾಗಿ ಜಾರಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವಿಕೆ ಮೂಲಕ ಅನುಷ್ಠಾನಗೊಳಿಸಲಾಗಿದೆ ಎಂದು ಸರಕಾರ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಂಡಿತ್ತು. 2021-22ನೇ ಸಾಲಿನಲ್ಲಿ ಕೊಠಡಿಗಳ ದುರಸ್ತಿ, ನೂತನ ಶಾಲಾ ಕಟ್ಟಡಗಳ ನಿರ್ಮಾಣ, ಶಾಲಾ ಕೊಠಡಿಗಳ ನಿರ್ಮಾಣ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಗಾಗಿ ಇಡೀ ರಾಜ್ಯಕ್ಕೆ ಇಲ್ಲಿಯವರೆಗೆ 33243.64 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X