Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಕ್ರೇನ್ ನಲ್ಲಿ ಉಡುಪಿ ಜಿಲ್ಲೆಯ ನಾಲ್ವರು...

ಉಕ್ರೇನ್ ನಲ್ಲಿ ಉಡುಪಿ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಸುರಕ್ಷಿತ

"ವೈದ್ಯಕೀಯ ವಿದ್ಯಾರ್ಥಿ ಮೃಣಾಲ್ ಹಾಸ್ಟೆಲ್‌ನಲ್ಲಿ ಸುರಕ್ಷಿತ"

ವಾರ್ತಾಭಾರತಿವಾರ್ತಾಭಾರತಿ25 Feb 2022 3:07 PM IST
share

ಉಡುಪಿ, ಫೆ.25: ಯುದ್ಧ ಬಾಧಿತ ಉಕ್ರೇನ್ ನಲ್ಲಿ ಉಡುಪಿ ಜಿಲ್ಲೆಯ ನಾಲ್ವರು ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಎಂಬಿಬಿಎಸ್ ಕಲಿಯುತ್ತಿರುವುದಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ರೋಹನ್, ಮೃಣಾಲ್, ಮೂಡುತೋನ್ಸೆಯ ಮೆಲ್ವಿನ್ ಫೆರ್ನಾಂಡಿಸ್ ಎಂಬವರ ಪುತ್ರ ಗ್ಲೆನ್‌ವಿಲ್ ಫೆರ್ನಾಂಡಿಸ್ ಹಾಗೂ ವಿಲಿಯಮ್ ಡಿಸೋಜರ ಪುತ್ರಿ ಆ್ಯನಿಫ್ರೆಡ್ ಡಿಸೋಜ ಸಹ ಯುದ್ಧ ಬಾಧಿತ ಉಕ್ರೇನಿನಲ್ಲಿ ಸಿಲುಕಿಕೊಂಡಿಕೊಂಡಿದ್ದಾರೆ.

ಮೃಣಾಲ್ ಸುರಕ್ಷಿತ

ಕಳೆದ ಡಿಸೆಂಬರ್ ತಿಂಗಳಲ್ಲಷ್ಟೇ ಎಂಬಿಬಿಎಸ್ ಕಲಿಯಲೆಂದು ಉಕ್ರೇನಿನ ಖಾರ್ಕೀವ್‌ನಲ್ಲಿರುವ ನೇಶನಲ್ ಮೆಡಿಕಲ್ ಯುನಿವರ್ಸಿಟಿಗೆ ಸೇರ್ಪಡೆಗೊಂಡಿರುವ ತನ್ನ ಮಗ ಮೃಣಾಲ್ ತಾನಿರುವ ಹಾಸ್ಟೆಲ್‌ನಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ಆತನ ತಂದೆ ರಾಜೇಶ್ ತಿಳಿಸಿದ್ದಾರೆ.

ಉದ್ಯಾವರ ಕುತ್ಪಾಡಿಯ ಎಸ್‌ಡಿಎಂ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿರುವ ರಾಜೇಶ್ ಅವರನ್ನು ‘ವಾರ್ತಾಭಾರತಿ’ ಸಂಪರ್ಕಿಸಿದಾಗ ಹೆಚ್ಚುತ್ತಿರುವ ಆತಂಕದ ನಡುವೆಯೂ ಮಗನ ಸುರಕ್ಷತೆಯ ಕುರಿತು ಸಮಾಧಾನ ವ್ಯಕ್ತಪಡಿಸಿದರು.

ಉಡುಪಿ ಕುಕ್ಕಿಕಟ್ಟೆಯ ಓರ್ವ ವಿದ್ಯಾರ್ಥಿ ಸಹಿತ ತಮಿಳುನಾಡು, ಪಂಜಾಬ್ ಸೇರಿದಂತೆ 10-12 ಮಂದಿ ಭಾರತೀಯ ವಿದ್ಯಾರ್ಥಿಗಳು ಈ ಹಾಸ್ಟೆಲ್‌ನಲ್ಲಿದ್ದಾರೆ. ಎಲ್ಲರೂ ಈಗ ಹಾಸ್ಟೆಲ್‌ನಲ್ಲಿದ್ದಾರೆ. ಹೊರಗೆ ಮಿಲಿಟರಿ ಪಡೆ ಇದೆ ಎಂದು ಆತ ತಿಳಿಸಿದ್ದಾನೆ ಎಂದರು.

 ಕಳೆದ ರಾತ್ರಿ ಉಕ್ರೇನ್-ಪೊಲಂಡ್ ಗಡಿ ತೆರೆದು ಅಲ್ಲಿರುವವರನ್ನು ಪೊಲಂಡ್‌ಗೆ ಕಳುಹಿಸುವ ಮಾಹಿತಿ ಸಿಕ್ಕಿತಾದರೂ, ಅದು ಯಶಸ್ವಿಯಾಗಲಿಲ್ಲ. ಈಗಲೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸುವ ಪ್ರಯತ್ನ ನಡೆಯುತ್ತಿದೆ. ಎರಡು ದಿನಗಳ ಹಿಂದೆ ಇಲ್ಲಿನ ಕೆಲವರನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯುವ ವೇಳೆ ವಿಮಾನ ನಿಲ್ದಾಣವನ್ನೇ ಮುಚ್ಚಿದ್ದರಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗಿದೆ ಎಂಬ ಮಾಹಿತಿ ಇದೆ ಎಂದು ಮೃಣಾಲ್ ತಿಳಿಸಿದ್ದಾನೆ ಎಂದರು.

ಡಿಸೆಂಬರ್‌ನಲ್ಲಿ ಮೃಣಾಲ್ ಉಕ್ರೇನಿಗೆ ತೆರಳಿದ್ದರೂ, ಕೋವಿಡ್ ಹಾಗೂ ಇತರ ಕಾರಣಗಳಿಗಾಗಿ ಕ್ಲಾಸ್‌ಗಳು ಇನ್ನೂ ಪ್ರಾರಂಭಗೊಂಡಿರಲಿಲ್ಲ. ಆತನ ಅಡ್ಮಿಷನ್ ಪ್ರಕ್ರಿಯೆ ಮಾತ್ರ ಮುಗಿದಿದೆ, ಕ್ಲಾಸ್‌ಗಳು ಇನ್ನೂ ಪ್ರಾರಂಭಗೊಂಡಿರಲಿಲ್ಲ ಎಂದು ರಾಜೇಶ್ ತಿಳಿಸಿದರು.

 ಯುದ್ಧದ ಸನ್ನಿವೇಶದ ಹಿನ್ನೆಲೆಯಲ್ಲಿ ಮುಂದಿನ ವಾರ ಆತ ಬರುವ ಯೋಜನೆ ಹಾಕಿಕೊಳ್ಳಲಾಗಿತ್ತು. ಈಗ ಪರಿಸ್ಥಿತಿ ನೋಡಿ ತಾಯ್ನಿಡಿಗೆ ಮರಳುವ ಯೋಜನೆ ಇದೆ. ಊರಿಗೆ ಮರಳಿದ ಬಳಿಕ ಮತ್ತೆ ಅಲ್ಲಿಗೆ ಹಿಂದಿರುಗುವ ಬಗ್ಗೆ ಅಲ್ಲಿನ ಪರಿಸ್ಥಿತಿಯ ನೋಡಿ ನಿರ್ಧರಿಸಲಾಗುವುದು ಎಂದು ತನ್ನ ಏಕೈಕ ಪುತ್ರನ ಬಗ್ಗೆ ರಾಜೇಶ್ ತಿಳಿಸಿದರು.

ರೋಹನ್ ಸುರಕ್ಷಿತ: ಇದೇ ವೇಳೆ ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್‌ನಲ್ಲಿ ಓದುತ್ತಿರುವ ರೋಹನ್ ಬಾಗ್ಲಿ ಸುರಕ್ಷಿತವಾಗಿರುವುದಾಗಿ ಆತನ ತಂದೆ ಬ್ರಹ್ಮಾವರ ವಿಜ್ಞಾನ ಕೃಷಿ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಧನಂಜಯ್ ತಿಳಿಸಿದ್ದಾರೆ. ಅವರನ್ನೆಲ್ಲಾ ಬಂಕರ್‌ಗಳಲ್ಲಿ ಇರಿಸಿದ್ದಾಗಿ ಆತ ತಿಳಿಸಿದ್ದಾನೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X