Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರು ಒತ್ತಡಕ್ಕೆ ಒಳಗಾಗದೆ ಕರ್ತವ್ಯ...

ಪೊಲೀಸರು ಒತ್ತಡಕ್ಕೆ ಒಳಗಾಗದೆ ಕರ್ತವ್ಯ ನಿರ್ವಸಬೇಕು: ನ್ಯಾ.ಸುಬ್ರಮಣ್ಯ

ವಾರ್ತಾಭಾರತಿವಾರ್ತಾಭಾರತಿ25 Feb 2022 7:42 PM IST
share
ಪೊಲೀಸರು ಒತ್ತಡಕ್ಕೆ ಒಳಗಾಗದೆ ಕರ್ತವ್ಯ ನಿರ್ವಸಬೇಕು: ನ್ಯಾ.ಸುಬ್ರಮಣ್ಯ

ಉಡುಪಿ, ಫೆ.25: ಪೊಲೀಸರು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಯಾವುದೇ ಮಾನಸಿಕ ಮತ್ತು ದೈಹಿಕ ಒತ್ತಡಗಳಿಗೆ ಒಳಗಾಗದೆ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್. ಸುಬ್ರಮಣ್ಯ ಹೇಳಿದ್ದಾರೆ.

ಶುಕ್ರವಾರ ನಗರದ ಪೊಲೀಸ್ ಕಲಾಯತ್ ಚಂದು ಮೈದಾನದಲ್ಲಿ, ಉಡುಪಿ ಪೊಲೀಸ್ ತರಬೇತಿ ಶಾಲೆಯ 13ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಶುಕ್ರವಾರ ನಗರದ ಪೊಲೀಸ್ ಕಲಾಯತ್ ಚಂದು ಮೈದಾನದಲ್ಲಿ, ಉಡುಪಿ ಪೊಲೀಸ್ ತರಬೇತಿ ಶಾಲೆಯ 13ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡುತಿದ್ದರು. ಪೊಲೀಸರು ಯಾವುದೇ ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ ಸಂಯಮದಿಂದ, ಕಾನೂನಿನಡಿಯಲ್ಲಿ, ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದ ಜಿಲ್ಲಾ ನ್ಯಾಯಾಧೀಶರು, ಸೇವಾವಧಿಯಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ. ಉನ್ನತ ಗುರಿ ಇಟ್ಟುಕೊಂಡು ಪರಿಶ್ರಮದಿಂದ ಕಾರ್ಯ ನಿರ್ವಹಿಸಿ. ಬಿಡುವಿನ ವೇಳೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಪಡೆಯಲು ಪ್ರಯತ್ನಿಸುವಂತೆ ಪ್ರಶಿಕ್ಷಣಾರ್ಥಿಗಳಿಗೆ ಅವರು ತಿಳಿಸಿದರು.

ತರಬೇತಿ ಅವಧಿಯಲ್ಲಿ ಹೊರಾಂಗಣ, ಗುರಿ ಅಭ್ಯಾಸ, ಒಳಾಂಗಣ ತರಬೇತಿಯಲ್ಲಿ ಉತ್ತಮ ಸಾಧನೆ ತೋರಿದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಡಿಎಆರ್ ಮಂಡ್ಯ ಜಿಲ್ಲೆಯ ಆಕಾಶ ಎನ್.ಎಸ್. ಇವರು ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಪಡೆದರು.

ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪೆರೇಡ್ ನಡೆಯಿತು. ನಂತರ ಪ್ರತಿಜ್ಞಾ ವಿಧಿ ಬೋೀಧಿಸಲಾಯಿತು.ಉಡುಪಿಯಲ್ಲಿ ಇದುವರೆಗೆ ನಡೆದ ತರಬೇತಿಯಲ್ಲಿ 6 ಸಶಸ್ತ್ರ ಮೀಸಲು, 5 ಸಿವಿಲ್, ಒಂದು ರೈಲ್ವೆ ಮತ್ತು ಒಂದು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಗಳ 13 ತಂಡಗಳ ಒಟ್ಟು 1218 ಮಂದಿಗೆ ತರಬೇತಿ ನೀಡಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಸ್ವಾಗತಿಸಿದರು. ಎಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ ವರದಿ ವಾಚನ ಮಾಡಿದರು. ಕುಂದಾಪುರ ಉಪವಿಭಾಗದ ಪೊಲೀಸ್‌ಉಪಾಧೀಕ್ಷಕ ಶ್ರೀಕಾಂತ್ ವಂದಿಸಿದರು. ಕರಾವಳಿ ಕಾವಲು ಪೊಲೀಸ್‌ನ ಉಪನಿರೀಕ್ಷಕ ಬಿ.ಮನಮೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು. ಪ್ರಶಿಕ್ಷಣಾರ್ಥಿಗಳ ಪೋಷಕರು ಮತ್ತು ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ತರಬೇತಿದಾರರಲ್ಲಿ 18 ಮಂದಿ ಇಂಜಿನಿಯರಿಂಗ್ ಪದವೀಧರರು
ಉಡುಪಿ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 13 ನೇ ತಂಡದಲ್ಲಿ 100 ಪ್ರಶಿಕ್ಷಣಾರ್ಥಿಗಳಿದ್ದು, ಇವರಲ್ಲಿ ಎಸೆಸೆಲ್ಸಿ 4, ಪಿಯುಸಿ 20, ಡಿಪ್ಲೋಮಾ 1, ಪದವೀಧರರು 49, ಸ್ನಾತಕ ಪದವೀಧರರು 8 ಮತ್ತು 18 ಮಂದಿ ಇಂಜಿನಿಯರಿಂಗ್ ವಿದ್ಯಾರ್ಹತೆ ಪಡೆದಿದ್ದು, 11 ಮಂದಿ ಮಾಜಿ ಸೈನಿಕರು ಇದ್ದಾರೆ.
ಇವರಲ್ಲಿ 25 ಮಂದಿ ಕೋಲಾರ, 16 ಮಂದಿ ಬೆಂಗಳೂರು ಗ್ರಾಮಾಂತರ, 14 ಮಂದಿ ಚಿಕ್ಕಬಳ್ಳಾಪುರ, 12 ಮಂದಿ ಬೀದರ್, ದಕ್ಷಿಣ ಕನ್ನಡ 7, ಮಂಡ್ಯ 6, ಚಿತ್ರದುರ್ಗ 6, ಚಾಮರಾಜನಗರ 6, ಬೆಳಗಾವಿ 4, ಯಾದಗಿರಿ 2, ತುಮಕೂರು 2 ಜಿಲ್ಲೆಯವರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X