Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರ ಪ್ರಕರಣದ ಸಾಕ್ಷಿಯನ್ನು...

ದಿಲ್ಲಿ ಹಿಂಸಾಚಾರ ಪ್ರಕರಣದ ಸಾಕ್ಷಿಯನ್ನು ಪರದೆ ಬಳಸಿ ಎಲ್ಲರಿಂದ ಅಡಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವಕೀಲರು !

ವಾರ್ತಾಭಾರತಿವಾರ್ತಾಭಾರತಿ25 Feb 2022 8:03 PM IST
share
ದಿಲ್ಲಿ ಹಿಂಸಾಚಾರ ಪ್ರಕರಣದ ಸಾಕ್ಷಿಯನ್ನು ಪರದೆ ಬಳಸಿ ಎಲ್ಲರಿಂದ ಅಡಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವಕೀಲರು !

ಹೊಸದಿಲ್ಲಿ: ಅಪರೂಪದ ವಿದ್ಯಮಾನವೊಂದರಲ್ಲಿ, ದಿಲ್ಲಿಯ ನ್ಯಾಯಾಲಯದ ಕಲಾಪ ಕೊಠಡಿಯನ್ನು ಪರದೆಯೊಂದನ್ನು ಬಳಸಿ ಇಬ್ಭಾಗಗೊಳಿಸಿದ ನಂತರ 2020 ಈಶಾನ್ಯ ದಿಲ್ಲಿ ಮತೀಯ ಹಿಂಸಾಚಾರ ಸಂಬಂಧಿತ ಕೊಲೆ ಪ್ರಕರಣವೊಂದರ ಏಕೈಕ ಸಾಕ್ಷಿಯೊಬ್ಬರನ್ನು ಅಲ್ಲಿ ಗುರುವಾರ ಹಾಜರುಪಡಿಸಲಾಯಿತು. ಈ ಕಾರಣದಿಂದಾಗಿ ಕೋರ್ಟಿನ ಇನ್ನೊಂದು ಪ್ರತ್ಯೇಕಿತ ಭಾಗದಲ್ಲಿದ್ದ ಪ್ರತಿವಾದಿ ವಕೀಲರು, ಸಾರ್ವಜನಿಕ ಅಭಿಯೋಜಕರು ಮತ್ತು ಪೊಲೀಸ್ ಸಿಬ್ಬಂದಿಗೆ ಸಾಕ್ಷಿಯನ್ನು ನೋಡುವುದು ಸಾಧ್ಯವಾಗಿಲ್ಲ.

ಆರೋಪಿ ಕಟಕಟೆಯಲ್ಲಿ ನಿಂತ ಕಡೆಯೂ ಒಂದು ಪರದೆ ಹಾಕಲಾಗಿತ್ತು. ಕರವಾಲ್ ನಗರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದ ಆರು ಆರೋಪಿಗಳ ಪೈಕಿ ಇಬ್ಬರ ಪರ ಹಾಜರಿದ್ದ ವಕೀಲ ಮೆಹಮೂದ್ ಪ್ರಾಚ, ಈ ಕುರಿತು ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ "ದಿಲ್ಲಿ ಹಿಂಸಾಚಾರ ಪ್ರಕರಣದ ಸಾಕ್ಷಿಯೊಬ್ಬರನ್ನು ಈ ರೀತಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅವರ ಹೇಳಿಕೆ ಪಡೆದುಕೊಂಡಿದ್ದು ಇದೇ ಮೊದಲ ಬಾರಿ, ಆದರೆ ಕಾನೂನಿನನ್ವಯ ಈ ರೀತಿ ಸಾಕ್ಷಿಯನ್ನು ಪರದೆಯ ಹಿಂದಿನಿಂದ ಹಾಜರುಪಡಿಸಲು ಅವಕಾಶವಿಲ್ಲ, ಪ್ರತಿವಾದಿ ವಕೀಲರಲ್ಲಿ ಕೆಲವರು ಇದೇ ವಿಚಾರ ಮುಂದಿಟ್ಟರು ಹಾಗೂ ಅದನ್ನು ಕಲಾಪದಲ್ಲಿ ದಾಖಲಿಸಿಕೊಳ್ಳಬೇಕು" ಎಂದಿದ್ದಾರೆ.

ಸಾಕ್ಷಿಯನ್ನು ಈ ರೀತಿ ಏಕೆ ಹಾಜರುಪಡಿಸಲಾಯಿತು ಎಂಬುದಕ್ಕೆ ನ್ಯಾಯಾಲಯದಲ್ಲಿ ಕಾರಣವನ್ನೂ ನೀಡಲಾಗಿಲ್ಲ.

ಸಾಕ್ಷಿ ಅಜಿತ್ ತೋಮರ್ ಮೂರು ಕೊಲೆ ಪ್ರಕರಣಗಳಲ್ಲಿ ಏಕೈಕ ಪ್ರತ್ಯಕ್ಷದರ್ಶಿ ಸಾಕ್ಷಿಯಾಗಿದ್ದಾನೆ ಎಂದು ಪ್ರಾಚ ಹೇಳಿದ್ದಾರೆ. ಒಂದು ಪ್ರಕರಣ ಸಂಬಂಧ ಆತನನ್ನು ಮೇಲೆ ತಿಳಿಸಿದ ರೀತಿಯಲ್ಲಿ ಗುರುವಾರ ಹಾಜರುಪಡಿಸಲಾಗಿದೆ.  ಈ ನಿರ್ದಿಷ್ಟ ಪ್ರಕರಣ ದಿನೇಶ್ ಎಂಬಾತನ ಸಾವಿಗೆ ಸಂಬಂಧಿಸಿದ್ದಾಗಿದ್ದು ಆತ ಗುಂಡೇಟಿನ ಗಾಯಗಳಿಂದ ಜಿಟಿಬಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ಪ್ರಕರಣದ ಚಾರ್ಜ್‍ಶೀಟ್ ಜೂನ್ 16, 2020ರಂದು ಸಲ್ಲಿಸಲಾಗಿತ್ತು.

"ಈ ರೀತಿ ಪರದೆ ಹಾಕಿ ಸಾಕ್ಷಿಗಳನ್ನು ಹಾಜರುಪಡಿಸಲು ಯುಎಪಿಎ ಅಡಿ ಅವಕಾಶವಿದ್ದರೂ ಅದಕ್ಕೂ ನಿರ್ದಿಷ್ಟ ಆದೇಶ ಬೇಕಿದೆ ಹಾಗೂ ಕಾನೂನು ಈ ಕುರಿತು ನಿರ್ದಿಷ್ಟವಾಗಿ ಏನನ್ನೂ ಹೇಳಿಲ್ಲ. ಈ ರೀತಿ ಗುರುವಾರ ಮಾಡಿರುವುದು ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆ ಬಗ್ಗೆ ಪ್ರಶ್ನಿಸುವಂತಾಗುತ್ತದೆ ಹಾಗೂ ಪ್ರತಿವಾದಿ ವಕೀಲನಾಗಿ ನನಗೆ ಕೂಡ ಪರದೆಯಾಚೆ ಯಾರಿದ್ದರೆಂದು ತಿಳಿಯುವುದಿಲ್ಲ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X