Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಶ್ಯಾ- ಉಕ್ರೇನ್ ಯುದ್ಧ ಅಪೇಕ್ಷಣೀಯ...

ರಶ್ಯಾ- ಉಕ್ರೇನ್ ಯುದ್ಧ ಅಪೇಕ್ಷಣೀಯ ಆಯ್ಕೆಯಲ್ಲ: ಪ್ರೊ.ನಲಪತ್

ವಾರ್ತಾಭಾರತಿವಾರ್ತಾಭಾರತಿ26 Feb 2022 9:06 PM IST
share
ರಶ್ಯಾ- ಉಕ್ರೇನ್ ಯುದ್ಧ ಅಪೇಕ್ಷಣೀಯ ಆಯ್ಕೆಯಲ್ಲ: ಪ್ರೊ.ನಲಪತ್

ಮಣಿಪಾಲ, ಫೆ.26: ರಶ್ಯಾ-ಉಕ್ರೇನ್ ಸಂಘರ್ಷದ ಈ ಸಂದರ್ಭದಲ್ಲಿ ಯುದ್ಧ ಅಪೇಕ್ಷಣೀಯ ಆಯ್ಕೆಯಲ್ಲ ಎಂದು ಯುನೆಸ್ಕೋ ಶಾಂತಿ ಪೀಠದ ಪ್ರೊ.ಎಂ.ಡಿ.ನಲಪತ್ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳ ಭೌಗೋಳಿಕ ರಾಜಕೀಯ ಸನ್ನಿವೇಶಗಳು ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿವೆ. ಆದರೆ ಸೇನಾ ದಾಳಿಯ ಆಯ್ಕೆ ಇದಕ್ಕೆ ಪರಿಹಾರವಲ್ಲ ಎಂದು ಅವರು ಪ್ರತಿಪಾದಿಸಿದರು.

ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಇಂದು ನಡೆದ ‘ರಶ್ಯಾ-ಉಕ್ರೇನ್;ಯುದ್ಧ ಮತ್ತು ಶಾಂತಿ’ ಕುರಿತ ವಿಶೇಷ ಉಪನ್ಯಾಸದಲ್ಲಿ ಯುನೆಸ್ಕೋ ಶಾಂತಿ ಪೀಠದ ಹಿರಿಯ ರಾಜಕೀಯ ವಿಮರ್ಶಕ ರಾಗಿರುವ ಪ್ರೊ. ಎಂ.ಡಿ.ನಲಪತ್ ಮಾತನಾಡುತ್ತಿದ್ದರು.

ದೇಶಗಳ ‘ವಿಸ್ತರಣಾವಾದಿ’ ಪ್ರವೃತ್ತಿಗಳು ಯುದ್ಧಕ್ಕೆ ಕಾರಣ. ರಶ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ನಮ್ಮ ಕಾಲದ ಭೌಗೋಳಿಕ ರಾಜಕೀಯವನ್ನು ಮರು ವ್ಯಾಖ್ಯಾನಿಸಬಹುದು ಎಂದ ಅವರು, ಈ ಯುದ್ಧ ಪೂರ್ಣ ಪ್ರಮಾಣದ ಪರಮಾಣು ಯುದ್ಧಕ್ಕೆ ದಾರಿ ಮಾಡದೇ ಇರಲಿ ಎಂದು ಹಾರೈಸಿದರು.

ಜಗತ್ತಿನಲ್ಲಿ ಶಾಂತಿಯ ಧ್ವನಿಗಳು ಬಲಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಒಪ್ಪಿದ ಅವರು, ಪ್ರಸ್ತುತ ಪರಿಸ್ಥಿತಿಯು ಶೀತಲ ಸಮರದ ದಿನಗಳತ್ತ ಅಥವಾ ಶಕ್ತಿ ಬಣಗಳ ನಡುವಿನ ನೇರ ಯುದ್ಧಕ್ಕೆ ಕಾರಣವಾಗದೆ ಇರಲಿ. ನಾನು ಇತರ ವಿಷಯಗಳಲ್ಲಿ ಭಾರತ ಸರಕಾರವನ್ನು ಟೀಕಿಸಬಹುದು, ಆದರೆ ಈ ವಿಷಯದಲ್ಲಿ ನಾನು ಕದನ ವಿರಾಮಕ್ಕೆ ಕರೆ ನೀಡಿರುವ ಸರ್ಕಾರದ ನಿಲುವನ್ನು ಸ್ವಾಗತಿಸುತ್ತೇನೆ ಎಂದರು.

ಆಕ್ರಮಣ ಮತ್ತು ಯುದ್ಧದಂತಹ ವಿಷಯಗಳಲ್ಲಿ ಯುನೆಸ್ಕೋ ಸೀಮಿತ ಪಾತ್ರವನ್ನು ಹೊಂದಿದ್ದರೂ ಸಹ, ಮಾತುಕತೆ ಮತ್ತು ಸಂವಾದ ಮೂಲಕ ಶಾಂತಿಯುತ ಪರಿಹಾರ ಕಾಣಲು ಯುಎನ್ಒ ಮುಖ್ಯ ಪಾತ್ರ ವಹಿಸುತ್ತದೆ. ಯುದ್ಧ ಅನಗತ್ಯ ಸಾವುಗಳು ಮತ್ತು ವಿನಾಶಕ್ಕೆ ಮಾತ್ರ ಕಾರಣವಾಗುತ್ತದೆ ಎಂದು ಹಿರಿಯ ಪತ್ರಕರ್ತರೂ ಆಗಿರುವ ಪ್ರೊ.ನಲಪತ್ ನುಡಿದರು.

ಇದಕ್ಕೆ ಮೊದಲು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ, ಚಾರ್ಲಿ ಚಾಪ್ಲಿನ್‌ರ ‘ದಿ ಗ್ರೇಟ್ ಡಿಕ್ಟೇಟರ್’ ಚಿತ್ರದ-ನಾವು ತುಂಬಾ ಯೋಚಿಸುತ್ತೇವೆ ಆದರೆ ಬಹಳ ಕಡಿಮೆ ಭಾವಿಸುತ್ತೇವೆ- (we think too much and feel too little) ಎಂಬ ಸಾಲನ್ನು ಉಲ್ಲೇಖಿಸಿ ಇತ್ತೀಚೆಗೆ ‘ನಿಶ್ಶಸ್ತ್ರೀಕರಣ ಮತ್ತು ಅಣ್ವಸ್ತ್ರೀಕರಣ’ದ ಬಗ್ಗೆ ನಾವು ಹೆಚ್ಚು ಕೇಳುತ್ತಿಲ್ಲ ಎಂದರು.

ಚಿಂತಕ ಪ್ರೊ.ಫಣಿರಾಜ್, ಯುದ್ಧದ ವಿರುದ್ಧ ಸಾಮೂಹಿಕ ಜಾಗತಿಕ ಅಭಿಪ್ರಾ ಯದ ಅಗತ್ಯವನ್ನು ಒತ್ತಿ ಹೇಳಿದರು.ಜಯದೀಪ್ ಜಯೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಲೇಖಕರಾದ ಪ್ರೊ.ಮನು ಚಕ್ರವರ್ತಿ, ಜಿ.ಎನ್. ಮೋಹನ್, ಶರ್ಮಿಳಾ, ರೇಶ್ಮಿ ಭಾಸ್ಕರನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X