ಉಕ್ರೇನಿನಲ್ಲಿ ಸಿಲುಕಿದ ಉಡುಪಿ ಜಿಲ್ಲೆಯ ಇನ್ನಿಬ್ಬರ ಮಾಹಿತಿ ಲಭ್ಯ

ಸಾಂದರ್ಭಿಕ ಚಿತ್ರ
ಉಡುಪಿ, ಫೆ.26: ಯುದ್ಧ ಬಾಧಿತ ಉಕ್ರೇನಿನಲ್ಲಿ ಉಡುಪಿ ಜಿಲ್ಲೆಯ ಇನ್ನಿಬ್ಬರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿ ಉಡುಪಿ ಜಿಲ್ಲಾಡಳಿತಕ್ಕೆ ಲಭಿಸಿದೆ. ಇಬ್ಬರೂ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ.
ಉಡುಪಿಯ ಸಂಗೀರ್ಥ ಅರುಣ್ ಎಂಬವರ ಪುತ್ರಿಯಾದ ನಂದಿನಿ ಅರುಣ್ (21) ಅವರು ಒಡೆಸ್ಸಾ ನೇಶನಲ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಎಂಬಿಬಿಎಸ್ನ ನಾಲ್ಕನೇ ವರ್ಷದ ವಿದ್ಯಾರ್ಥಿನಿಯಾಗಿದ್ದರೆ, 22ರ ಹರೆಯದ ಕುಂದಾಪುರ ತ್ರಾಸಿಯ ಅಂಕಿತ ಜಗದೀಶ್ ಪೂಜಾರಿ ಖಾರ್ಕಿವ್ ನೇಶನಲ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಎಂಬಿಬಿಎಸ್ ಕಲಿಯುತಿದ್ದಾರೆ ಎಂದು ಮಾಹಿತಿ ತಿಳಿಸಿದೆ.
ಈ ಮೂಲಕ ಉಡುಪಿ ಜಿಲ್ಲೆಯಿಂದ ಒಟ್ಟು ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನಿನ ವಿವಿದೆಡೆಗಳಲ್ಲಿ ಇದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿಗಳು ಲಭಿಸಿವೆ.
Next Story