Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೊಳುವಾರು ಮಹಮ್ಮದ್ ಕುಂಞಿ ಅವರ...

ಬೊಳುವಾರು ಮಹಮ್ಮದ್ ಕುಂಞಿ ಅವರ ‘ಮೋನುಸ್ಮತಿ’ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ27 Feb 2022 11:53 PM IST
share
ಬೊಳುವಾರು ಮಹಮ್ಮದ್ ಕುಂಞಿ ಅವರ ‘ಮೋನುಸ್ಮತಿ’ ಲೋಕಾರ್ಪಣೆ

ಪುತ್ತೂರು, ಫೆ.27: ಸುಮಾರು 22ಕ್ಕೂ ಅಧಿಕ ಕಥೆ ಕಾದಂಬರಿಗಳನ್ನು ಬರೆದು, 28ಕ್ಕೂ ಅಧಿಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ಬೊಳುವಾರು ಮಹಮ್ಮದ್ ಕುಂಞಿ ಅವರ ಬದುಕು ಎಲ್ಲರಿಗೂ ಮಾದರಿಯಾಗಿದ್ದು, ಅವರು ಮೋನುಸ್ಮತಿ ಮೂಲಕ ಬ್ಯಾರಿ ಸಮುದಾಯದ ತಲ್ಲಣವನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಐಎಎಸ್‌ನ ಪ್ರಾಧ್ಯಾಪಕಿ ಫರ್ಝಾನ ಅಶ್ರಫ್ ಯು.ಟಿ. ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಪುತ್ತೂರಿನ ಬಹುವಚನಂನ ಪದ್ಮಿನಿ ಸಭಾಂಗಣದಲ್ಲಿ ನವಕರ್ನಾಟಕ ಪ್ರಕಾಶನ ಬೆಂಗಳೂರು ಮತ್ತು ಬಹುವಚನಂ ಸಾಂಸ್ಕೃತಿಕ ಸಂಘಟನೆಯ ಸಹಯೋಗದಲ್ಲಿ ಬೊಳುವಾರು ಮಹಮ್ಮದ್ ಕುಂಞಿಯವರ ‘ಮೋನುಸ್ಮತಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹತ್ತಿರ ಇದ್ದವರನ್ನು ಪೊರೆಯುವುದು ಕನ್ನಡ ನಾಡಿನ ಸಂಸ್ಕೃತಿಯಾಗಿದೆ. ಬೊಳುವಾರು ಅವರು ಈ ಭಾವನೆಯನ್ನು ಯಾವುದೇ ಕಾರಣಕ್ಕೂ ಬಲಿಕೊಡದೆ ಉಳಿಸಿಕೊಂಡಿದ್ದಾರೆ ಎಂದರು.

ಮೋನುಸ್ಮತಿಯನ್ನು ತನ್ನದೇ ಆದ ವಿಶಿಷ್ಟ ಕನ್ನಡದಲ್ಲಿ ಚೇತೋಹಾರಿ, ತಾಜಾತಣದಿಂದ ಕಟ್ಟಿಕೊಟ್ಟಿರುವ ಬೊಳುವಾರು ಅವರು ಕನ್ನಡಕ್ಕೆ ತನ್ನದೇ ಕೊಡುಗೆ ನೀಡಿದ್ದಾರೆ. ಸಮಾಜ ಸೆಕ್ಯುಲರಿಸಂ ಎನಿಸಿಕೊಳ್ಳಲು ಧಾರ್ಮಿಕತೆಯಿಂದ ಹೊರಬರಬೇಕು ಎಂಬುವುದು ಸಮಂಜಸವಲ್ಲ. ನಮ್ಮಲ್ಲಿನ ಬಹುತ್ವದ ಸಂಸ್ಕೃತಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗಿದೆ ಎಂದು ಫರ್ಝಾನ ಹೇಳಿದರು.

ಮೋನುಸ್ಮತಿ ಕೃತಿ ಪರಿಚಯ ಮಾಡಿದ ಉಪನ್ಯಾಸಕ, ಸಾಹಿತಿ ಡಾ.ನರೇಂದ್ರ ರೈ ಮಾತನಾಡಿ, ಮೋನುಸ್ಮತಿಯ ಮೂಲಕ ಬೊಳುವಾರು ಅವರು ಒಳ್ಳೆಯ ಸುಂದರ ಭಾರತವನ್ನು ಕಟ್ಟಿಕೊಟ್ಟಿದ್ದಾರೆ. ಮೋನುಸ್ಮತಿಯಲ್ಲಿ ಗಾಂಧಿಯ ಭಾರತವಿದೆ. ಅವರ ಮುತ್ತುಪ್ಪಾಡಿ ಒಂದು ಬಹುತ್ವದ ಭಾರತ. ಭಾರತವೆಂದರೆ ಭೂಗೋಳ ಅಲ್ಲ. ಆದು ಭಾವಗೋಳ. ಬಹುಸಂಸ್ಕೃತಿಯ ಭಾಗವಾಗಿರುವ ಭಾರತವನ್ನು ಮೋನುಸ್ಮತಿಯಲ್ಲಿ ತೋರಿಸಿದ್ದಾರೆ. ನಾನು ಬರೆದ ಬರಹ ಹೀಗೇ ಇರಬೇಕು ಎನ್ನುವ ತಯಾರಿಯೊಂದಿಗೆ ಬರೆದಿದ್ದಾರೆ. ಬೇರೆಯವರನ್ನು ನೋಯಿಸಿಲ್ಲ. ಎಲ್ಲರನ್ನೂ ಇವರು ನೆನೆಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೃತಿಕಾರ ಬೊಳುವಾರು ಮಹಮ್ಮದ್ ಕುಂಞಿ ಮಾತನಾಡಿ, ತನ್ನ ಬದುಕಿನ ಬದಲಾವಣೆಗೆ ಕಾರಣರಾದ ಹಿರಿಯರನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಬೊಳುವಾರು ಅವರ ಬದುಕು ಬದಲಿಸಿದ ಅವರ ಶಿಕ್ಷಕಿ ಅಪ್ಪಿ ಬಾಯಿ ಟೀಚರ್ ಅನುಪಸ್ಥಿತಿಯಲ್ಲಿ ಬೊಳುವಾರು ಶಾಲೆಯ ಶಿಕ್ಷಕಿ ನಿವೇದಿತಾ ಟೀಚರ್, ಕೈತುತ್ತು ಉಣಿಸಿದ ಪರಮೇಶ್ವರಿ ಅಕ್ಕ ಅವರ ಮೊಮ್ಮಗ ಪ್ರಸಾದ್ ಕೌಶಲ್, ವೆಂಕಪ್ಪ ಗೌಡ ಅವರ ಪುತ್ರ ವಸಂತ ಮತ್ತು ಕಾಲೇಜು ಓದಿಸಿದ್ದ ಹಾಜಿ ಕಡಬಕಾರ್ ಅಬ್ದುಲ್ ಖಾದರ್ ಅವರ ಪುತ್ರ ಶಾಹುಲ್ ಹಮೀದ್ ಅವರಿಗೆ ಗೌರವಾರ್ಪಣೆ ಮಾಡಿದರು. ಬೊಳುವಾರು ಮಹಮ್ಮದ್ ಕುಂಞಿ ದಂಪತಿಯನ್ನು ಬಹುವಚನಂ ವತಿಯಿಂದ ಗೌರವಿಸಲಾಯಿತು.

ಬಹುವಚನಂನ ಡಾ.ಶ್ರೀಶ ಕುಮಾರ್ ಎಂ.ಕೆ. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಿರ್ವಹಿಸಿದರು. ರಂಗಕರ್ಮಿ ಹಾಗೂ ಬೊಳುವಾರು ಮಹಮ್ಮದ್ ಕುಂಞಿ ಅವರ ಸಹೋದರ ಐ.ಕೆ.ಬೊಳುವಾರು ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X