Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 'ಗಾಂಧಿ ಬಗ್ಗೆ ದ್ವೇಷಪೂರಿತವಾಗಿ...

'ಗಾಂಧಿ ಬಗ್ಗೆ ದ್ವೇಷಪೂರಿತವಾಗಿ ನಿಂದಿಸುವ ವರ್ಗದ ಬೆಳವಣಿಗೆ ಆತಂಕಕಾರಿ'

ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ಡಾ.ಮಹಾಬಲೇಶ್ವರ ರಾವ್

ವಾರ್ತಾಭಾರತಿವಾರ್ತಾಭಾರತಿ1 March 2022 7:42 PM IST
share
ಗಾಂಧಿ ಬಗ್ಗೆ ದ್ವೇಷಪೂರಿತವಾಗಿ ನಿಂದಿಸುವ ವರ್ಗದ ಬೆಳವಣಿಗೆ ಆತಂಕಕಾರಿ

ಉಡುಪಿ, ಮಾ.1: ಗಾಂಧೀಜಿ ದೈವಾಂಶ ಸಂಭೂತರು ಎಂದು ಭಾವಿಸಿ ಅವರಲ್ಲಿ ಆರಾಧನಾ ಭಾವ ಮಾತ್ರ ಇರುವ ಒಂದು ವರ್ಗ ಹಾಗೂ ಗಾಂಧೀಜಿ ನಮ್ಮ ನಿಮ್ಮಂತೆ ಮನುಷ್ಯರು, ಅವರ ಜೀವನದ ವಿಮರ್ಶೆ ಸಾಧ್ಯ ಎಂದು ಭಾವಿಸುವ ಇನ್ನೊಂದು ವರ್ಗವೂ ಇದೆ. ಆದರೆ ಗಾಂಧೀಜಿ ಅವರನ್ನು ತಿಳಿದು ಕೊಳ್ಳದೆ ದ್ವೇಷಪೂರಿತವಾಗಿ ನಿಂದಿಸುವ ವರ್ಗವೊಂದು ದೊಡ್ಡದಾಗಿ ಬೆಳೆಯುತ್ತಿ ರುವುದು ನಿಜವಾಗಿಯೂ ಆತಂಕಕಾರಿ ಸಂಗತಿ ಎಂದು ಖ್ಯಾತ ಶಿಕ್ಷಣ ತಜ್ಞ ಹಾಗೂ ಲೇಖಕ ಡಾ.ಮಹಾಬಲೇಶ್ವರ ಹೇಳಿದ್ದಾರೆ.

ಬೊಳುವಾರು ಮಹಮದ್ ಕುಂಞಿ ಇವರು ಬರೆದಿರುವ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’ ಕೃತಿಯು ವಿದ್ಯಾರ್ಥಿಗಳು ಗಾಂಧೀಜಿಯನ್ನು ಅರಿತು ಕೊಳ್ಳಲು ಉಪಯುಕ್ತವಾದ ಪುಸ್ತಕವಾಗಿದೆ ಎಂದವರು ಹೇಳಿದರು.

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ಉಡುಪಿ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರ ಮತ್ತು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಇವುಗಳ ಆಶ್ರಯದಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೊಳುವಾರು ಅವರ ‘ಪಾಪು ಗಾಂಧಿ’ ಹಾಗೂ ಡಾ.ಮಹಾಬಲೇಶ್ವರ ರಾವ್ ಅವರ ‘ಬರಿಯ ಬಟ್ಟೆಯಲ್ಲ ಭಾರತದ ಬಾವುಟ’ ಪುಸ್ತಕಗಳ ಆಧಾರಿತ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತಿದ್ದರು. ಕಾರ್ಯಕ್ರಮ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.

ಭಾರತದ ಬಾವುಟವನ್ನು ಕೇವಲ ಬಟ್ಟೆಯಾಗಿ ನೋಡುವುದು ಸರಿಯಲ್ಲ. ಅದು ದೇಶಭಕ್ತಿಯ ಸಂಕೇತ. ಅದನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಅದು ರೂಪುಗೊಂಡ ಬಗೆಯ ಇತಿಹಾಸವನ್ನು ತಿಳಿಯುವುದು ತನ್ಮೂಲಕ ಬಾವುಟದ ಕುರಿತು ಗೌರವಭಾವ ಮೂಡಿಸುವಂತಹ ಬರಿಯ ಬಟ್ಟೆಯಲ್ಲ ಭಾರತದ ಬಾವುಟ ಪುಸ್ತಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಭಾವವನ್ನು ಮೂಡಿಸಲು ಸಹಕಾರಿಯಾಗಿದೆ ಎಂದು ಡಯಟ್‌ನ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್ ತಿಳಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ನಾಯ್ಕಾ, ಗಾಂಧೀಜಿ ಪ್ರತಿ ಯೊಂದು ಕಾಲದಲ್ಲೂ ಪ್ರಸ್ತುತರು. ಆಳವಾದ ಅಧ್ಯಯನ ನಡೆಸುತ್ತಾ ಹೋದಂತೆ ಸರಳವೆನಿಸುವ ಅವರ ಜೀವನ ಮತ್ತು ವಿಚಾರಧಾರೆಗಳು ಸಂಕೀರ್ಣವಾಗಿ ಕಾಣಿಸುತ್ತದೆ ಎಂದರು.

ಸೇವಾದಳದ ಪಕೀರಪ್ಪ ಗೌಡ, ಗಾಂಧಿ ಅಧ್ಯಯನ ಕೇಂದ್ರದ ವಿನೀತ್ ರಾವ್ ಉಪಸ್ಥಿತರಿದ್ದರು.ಭಾರತೀಯ ವಿಕಾಸ ಟ್ರಸ್ಟಿನ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಸ್ವಾಗತಿಸಿದರು. ಬಿವಿಟಿ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಕಾರ್ಯಕ್ರಮ ನಿರೂಪಿಸಿದರು. ಬಿವಿಟಿ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ವಂದಿಸಿದರು.

ಜಿಲ್ಲೆಯ 19 ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X