ಫಾದರ್ ಮುಲ್ಲರ್ಸ್ ಚಾರಿಟೇಬಲ್ ಮುಖ್ಯಸ್ಥ ಡಾ.ಉರ್ಬನ್ಗೆ ಸನ್ಮಾನ

ಉಡುಪಿ, ಮಾ.1: ಉದ್ಯಾವರದ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಪ್ರಸ್ತುತ ಪ್ರತಿಷ್ಠಿತ ಮಂಗಳೂರಿನ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ವಿಭಾಗ ಮುಖ್ಯಸ್ಥರಾಗಿರುವ ಡಾ.ಉರ್ಬನ್ ಡಿಸೋಜ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.
ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ರಂಗಮಂದಿರದಲ್ಲಿ ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ನಡೆದ ನಿರಂತರ್ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರ ಸಾಧನೆುನ್ನು ಗುರುತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಸ್ಥಳೀಯ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ.ವಂ.ಫಾ. ಸ್ಟ್ಯಾನಿ ಬಿ.ಲೋಬೊ, ಫಾ.ಆಲ್ವಿನ್ ಸೆರಾವೊ, ಉದ್ಯಮಿ ಹೆನ್ರಿ ಡಿಸೋಜ, ನಿರಂತರ ಉದ್ಯಾವರ ಸಂಸ್ಥೆಯ ರೊನಾಲ್ಡ್ ಡಿಸೋಜ, ಸವಿತಾ ಡಿಸೋಜ, ಒಲಿವಿರಾ ಮಥಾಯಸ್ ಮೊದಲಾದವರು ಉಪಸ್ಥಿತರಿದ್ದರು
ನಿರಂತರ ಉದ್ಯಾವರ ಅಧ್ಯಕ್ಷ ಸ್ಟೀವನ್ ಕುಲಾಸೋ ಸ್ವಾಗತಿಸಿದರು. ಕೋಶಾಧಿಕಾರಿ ರೋಶನ್ ಕ್ರಾಸ್ತಾ ವಂದಿಸಿದರು. ಮೈಕಲ್ ಡಿಸೋಜ ಕಾರ್ಯ ಕ್ರಮ ನಿರೂಪಿಸಿದರು.