Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಕ್ರೇನಿನ ಬಂಕರ್‌ಗಳಲ್ಲಿ ಉಡುಪಿ ಜಿಲ್ಲೆಯ...

ಉಕ್ರೇನಿನ ಬಂಕರ್‌ಗಳಲ್ಲಿ ಉಡುಪಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು

► ಕುಟುಂಬವನ್ನು ಕೂಡಿಕೊಂಡ ಇಬ್ಬರು ► ಉಕ್ರೇನ್ ಗಡಿ ದಾಟಿದ ಮೂವರು

ವಾರ್ತಾಭಾರತಿವಾರ್ತಾಭಾರತಿ1 March 2022 9:30 PM IST
share
ಉಕ್ರೇನಿನ ಬಂಕರ್‌ಗಳಲ್ಲಿ ಉಡುಪಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು

ಉಡುಪಿ : ಯುದ್ಧ ಬಾಧಿತ ಉಕ್ರೇನ್‌ನಲ್ಲಿದ್ದ ಉಡುಪಿ ಜಿಲ್ಲೆಗೆ ಸೇರಿದ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಇಬ್ಬರು ಈಗಾಗಲೇ ಸುರಕ್ಷಿತವಾಗಿ ತಮ್ಮ ತಮ್ಮ ಕುಟುಂಬವನ್ನು ಕೂಡಿಕೊಂಡರೆ, ಮೂವರು ಉಕ್ರೇನ್ ಗಡಿ ದಾಟಿದ್ದು, ತಾಯ್ನಿಡಿಗೆ ಬರುವ ಅವಕಾಶವನ್ನು ಎದುರು ನೋಡುತಿದ್ದಾರೆ. ಆದರೆ ಇಬ್ಬರು ವಿದ್ಯಾರ್ಥಿಗಳು ಮಾತ್ರ ಇನ್ನೂ ಬಂಕರ್‌ಗಳಲ್ಲಿದ್ದು, ಮುಂದಿನ ಹೆಜ್ಜೆಗಾಗಿ ಇಲ್ಲಿನ ರಾಯಭಾರ ಕಚೇರಿಯ ಸೂಚನೆಯನ್ನು ಎದುರು ನೋಡುತಿದ್ದಾರೆ.

ಏಳು ಮಂದಿಯ ಪೈಕಿ ಉದ್ಯಾವರ ಸ್ಮಾಲರದ ರಾಜೀವ್‌ರ ಮಗ ಮೃಣಾಲ್ (19), ನಿನ್ನೆ ರಾತ್ರಿಯೇ ಮನೆಗೆ ಆಗಮಿಸಿ ಹೆತ್ತವರು ಹಾಗೂ ಅಜ್ಜಿ ಜೊತೆ ಸೇರಿಕೊಂಡರೆ, ಒಡೆಸ್ಸಾ ನೇಶನಲ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಉಡುಪಿಯ ನಂದಿನಿ ಅರುಣ್(21) ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ ವಿಮಾನ ನಿಲ್ದಾಣದಿಂದ ಖಾಸಗಿ ಏರ್ ಎಮಿರೇಟ್ಸ್ ವಿಮಾನದಲ್ಲಿ ಮಸ್ಕತ್‌ಗೆ ಪ್ರಯಾಣಿಸಿ ಅಲ್ಲಿ ಉದ್ಯೋಗಿಯಾಗಿರುವ ತಂದೆಯ ಮನೆಯನ್ನು ಸೇರಿಕೊಂಡಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿದೆ.

ಉಳಿದಂತೆ ಪರ್ಕಳ ಮೂಲದ ನಿಯಮ್ ರಾಘವೇಂದ್ರ (20) ಉಕ್ರೇನ್ ಗಡಿ ದಾಟಿ ರೊಮೇನಿಯಾ ತಲುಪಿದ್ದಾರೆ. ಅವರು ಬುಕಾರೆಸ್ಟ್‌ನಿಂದ ಹೊಸದಿಲ್ಲಿಗೆ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ. ಅವರ ತಂದೆ ಅಲ್ಲಿ ಕರ್ನಾಟಕ ಭವನದ ಮ್ಯಾನೇಜರ್ ಆಗಿದ್ದಾರೆ.

ರೋಹನ್ ಹಂಗೇರಿಗೆ:  ಖಾರ್ಕೀವ್‌ನ ನೇಶನಲ್ ಮೆಡಿಕಲ್ ಯುನಿವರ್ಸಿಟಿಯ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ ಅವರು ಪುತ್ರ ರೋಹನ್ ಬಗ್ಲಿ (24) ಖಾರ್ಕೀವ್‌ನಿಂದ ಲೈವಿಗೆ ಬಂದಿದ್ದು, ಅಲ್ಲಿಂದ ಹಂಗೇರಿಯ ಬುಡಾಪೆಸ್ಟ್ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಹಂಗೇರಿ ಯಿಂದ ಅವರು ಎರಡು ದಿನದೊಳಗೆ ಹೊಸದಿಲ್ಲಿಗೆ ಬರುವ ನಿರೀಕ್ಷೆ ಇದೆ.

ಖಾರ್ಕೀವ್‌ನಲ್ಲಿ ಕಲಿಯುತ್ತಿರುವ ತ್ರಾಸಿಯ ಅಂಕಿತ ಜಗದೀಶ್ ಪೂಜಾರಿ (22) ಅವರು ಲೈವಿ ಮೂಲಕ ಪೊಲಂಡ್‌ಗೆ ತೆರಳಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಬಂದ ಮಾಹಿತಿ ತಿಳಿಸಿದೆ.

ಇನ್ನು ಉಕ್ರೇನಿನ ಟೌನ್ ನೇಶನಲ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಕಲಿಯುತ್ತಿರುವ ಕೆಮ್ಮಣ್ಣಿನ ಗ್ಲೆನ್‌ವಿಲ್ ಫೆರ್ನಾಂಡೀಸ್ (19), ಹಾಸ್ಟಲ್ ಸಮೀಪದ ಬಂಕರ್‌ನಲ್ಲಿದ್ದರೆ, ಖಾರ್ಕೀವ್ ನೇಶನಲ್ ಮೆಡಿಕಲ್ ಯುನಿವರ್ಸಿಟಿ ವಿದ್ಯಾರ್ಥಿನಿ ಕಲ್ಯಾಣಪುರದ ಅನಿಫ್ರೆಡ್ ರಿಡ್ಲೆ ಡಿಸೋಜ (20) ಅವರು ಸಹ ವಿವಿ ಹಾಸ್ಟೆಲ್ ಬಂಕರ್‌ನಲ್ಲಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಬಂದ ಮಾಹಿತಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X