ರಾಜ್ಯದಲ್ಲಿ ಮಂಗಳವಾರ 202 ಕೊರೋನ ಪ್ರಕರಣ ದೃಢ, 7 ಮಂದಿ ಸಾವು

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು, ಮಾ.1: ರಾಜ್ಯದಲ್ಲಿ ಮಂಗಳವಾರ 202 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 7 ಮಂದಿ ಸೋಂಕಿಗೆ ಬಲಿಯಾಗಿದ್ದು, 971 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,41,265ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 39,957ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,847ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
7 ಮಂದಿ ಸಾವು: ಬಳ್ಳಾರಿ 1, ಬೆಂಗಳೂರು ನಗರ 3, ದಕ್ಷಿಣ ಕನ್ನಡ 1, ದಾವಣಗೆರೆ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 202 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 150, ಬೀದರ್ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 4, ಗದಗ 3, ಹಾಸನ 2, ಕೋಲಾರ 1, ಮೈಸೂರು 6, ಶಿವಮೊಗ್ಗ 3, ತುಮಕೂರು 10, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.







