Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೀವ್ ಸಮೀಪಿಸಿದ ರಶ್ಯಾ ಪಡೆ: ಕ್ಷಿಪಣಿ...

ಕೀವ್ ಸಮೀಪಿಸಿದ ರಶ್ಯಾ ಪಡೆ: ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ ನ 70 ಯೋಧರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ1 March 2022 10:26 PM IST
share
ಕೀವ್ ಸಮೀಪಿಸಿದ ರಶ್ಯಾ ಪಡೆ: ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ ನ 70 ಯೋಧರ ಮೃತ್ಯು

ರಶ್ಯಾದ ಸೇನಾ ವಾಹನಗಳ ಸಾಲು ಉಕ್ರೇನ್ ನ ರಾಜಧಾನಿ ಕೀವ್ ನತ್ತ ಮುಂದೊತ್ತಿ ಬರುತ್ತಿದ್ದು ರಶ್ಯಾದ ಕ್ಷಿಪಣಿ ದಾಳಿಯಲ್ಲಿ ತನ್ನ 70ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಹೇಳಿದೆ. ಈ ಮಧ್ಯೆ, ಖಾರ್ಕಿವ್ ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉಕ್ರೇನ್ ಮೇಲಿನ ರಶ್ಯಾ ದಾಳಿಗೆ ಸಂಬಂಧಿಸಿ ಮಂಗಳವಾರದ ಕೆಲವು ಮಹತ್ವದ ಬೆಳವಣಿಗೆಗಳು ಇಲ್ಲಿವೆ.

ರಶ್ಯಾದ ಕ್ಷಿಪಣಿ ದಾಳಿಯಲ್ಲಿ 70ಕ್ಕೂ ಅಧಿಕ ಉಕ್ರೇನ್ ಯೋಧರು ಮೃತಪಟ್ಟಿದ್ದು, ನಾಗರಿಕರ ಮೇಲೆ ನಡೆಸಿದ ಬರ್ಬರ ಶೆಲ್ ದಾಳಿಯಲ್ಲಿ ಹಲವಾರು ಪ್ರಜೆಗಳು ಮೃತರಾಗಿರುವುದಾಗಿ ಉಕ್ರೇನ್ ಹೇಳಿದೆ. ಉಕ್ರೇನ್ ನ ಖಾರ್ಕಿವ್ ನಲ್ಲಿ ಮಂಗಳವಾರ ಸರಕಾರಿ ಕಟ್ಟಡವನ್ನು ರಶ್ಯಾ ಪಡೆಗಳು ಧ್ವಂಸಗೊಳಿಸಿದಾಗ, ಅಲ್ಲೇ ಸಮೀಪದಲ್ಲಿದ್ದ ಕರ್ನಾಟಕದ ಹಾವೇರಿ ಜಿಲ್ಲೆಯ ಯುವಕ, ನವೀನ್ ಎಂಬ ಎಂಬಿಬಿಎಸ್ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವಿದೇಶ ವ್ಯವಹಾರ ಇಲಾಖೆ ಮಾಹಿತಿ ನೀಡಿದೆ.

ಖಾರ್ಕಿವ್ನಲ್ಲಿನ ಹಲವು ಜನವಸತಿ ಪ್ರದೇಶಗಳ ಮೇಲೆ ರಶ್ಯಾದಿಂದ ಫಿರಂಗಿ ದಾಳಿ. ಕಳೆದ ಗುರುವಾರ ಆಕ್ರಮಣ ಆರಂಭವಾದಂದಿನಿಂದ 14 ಮಕ್ಕಳ ಸಹಿತ 352 ನಾಗರಿಕರು ಮೃತಪಟ್ಟಿರುವುದಾಗಿ ಉಕ್ರೇನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಗೂ ನಷ್ಟವಾಗಿದೆ ಎಂದು ಇದೇ ಮೊದಲ ಬಾರಿ ಒಪ್ಪಿಕೊಂಡ ರಶ್ಯಾ.

ರಶ್ಯಾದ ಆಕ್ರಮಣ ಆರಂಭವಾದಂದಿನಿಂದ 5 ಲಕ್ಷಕ್ಕೂ ಅಧಿಕ ಜನ ಉಕ್ರೇನ್ನಿಂದ ನೆರೆರಾಷ್ಟ್ರಗಳಿಗೆ ಪಲಾಯನ ಮಾಡಿರುವುದಾಗಿ ವಿಶ್ವಸಂಸ್ಥೆಯ ಮಾಹಿತಿ. ಉಕ್ರೇನ್ ರಾಜಧಾನಿ ಕೀವ್ ನ ಸಮೀಪ 64 ಕಿ.ಮೀನಷ್ಟು ಉದ್ದದ ರಶ್ಯಾ ಸೇನೆಯ ವಾಹನಗಳ ಸಾಲು ನಿಂತಿರುವುದು ಉಪಗ್ರಹ ರವಾನಿಸಿದ ಚಿತ್ರಗಳಿಂದ ಕಂಡುಬಂದಿದೆ.

ರಶ್ಯಾ-ಉಕ್ರೇನ್ ನಡುವಿನ ಪ್ರಥಮ ಸುತ್ತಿನ ಸಂಧಾನ ಸಭೆಯಲ್ಲಿ ಯಾವುದೇ ಫಲಿತಾಂಶ ಸಾಧ್ಯವಾಗಿಲ್ಲ. ಉಕ್ರೇನ್ ಮೇಲಿನ ಆಕ್ರಮಣದ ಹಿನ್ನೆಲೆಯಲ್ಲಿ ಕ್ರೀಡಾ ಜಗತ್ತಿನಿಂದ ರಶ್ಯಾ ವಿರುದ್ಧ ವ್ಯಾಪಕ ಆಕ್ರೋಶ. ಈ ವರ್ಷದ ಫುಟ್ಬಾಲ್ ವಿಶ್ವಕಪ್ ಟೂರ್ನಿಯಿಂದ ರಶ್ಯಾ ಉಚ್ಛಾಟನೆ. ರಶ್ಯಾ ವಿರುದ್ಧ ಜಾಗತಿಕ ಕ್ರೀಡಾ ನಿಷೇಧಕ್ಕೆ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಕರೆ.
 
ಉಕ್ರೇನ್ ಮೇಲಿನ ರಶ್ಯಾ ಆಕ್ರಮಣಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರದಿಂದ ಮತ್ತೊಮ್ಮೆ ದೂರ ಉಳಿದ ಭಾರತ. ಈ ವಾರದಲ್ಲಿ 2ನೇ ಬಾರಿ ವಿಶ್ವಸಂಸ್ಥೆಯಲ್ಲಿ ಈ ನಿಲುವು ತಳೆದ ಭಾರತ ಸರಕಾರ.

ಬೆಲಾರೂಸ್ ಗಡಿಭಾಗದಲ್ಲಿ ರಶ್ಯಾ-ಉಕ್ರೇನ್ ಸಂಧಾನ ಮಾತುಕತೆಗೆ ಭಾರತದ ಸ್ವಾಗತ.
ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ನಿಯೋಗದಲ್ಲಿದ್ದ 12 ರಶ್ಯಾದ ರಾಜತಾಂತ್ರಿಕರನ್ನು ದೇಶದಿಂದ ಉಚ್ಛಾಟಿಸಿದ ಅಮೆರಿಕ. ರಾಷ್ಟ್ರೀಯ ಭದ್ರತೆಗೆ ಎದುರಾದ ಆತಂಕದಿಂದ ಈ ಕ್ರಮ ಎಂದು ಅಮೆರಿಕದ ಹೇಳಿಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X