Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ವರ್ಷಗಳಿಂದ ಗಡಿಪಾರಿನ...

7 ವರ್ಷಗಳಿಂದ ಗಡಿಪಾರಿನ ನಿರೀಕ್ಷೆಯಲ್ಲಿರುವ ವ್ಯಕ್ತಿಗೆ ಸರಕಾರ ಏನು ಮಾಡಿದೆ?: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 March 2022 11:15 PM IST
share
7 ವರ್ಷಗಳಿಂದ ಗಡಿಪಾರಿನ ನಿರೀಕ್ಷೆಯಲ್ಲಿರುವ ವ್ಯಕ್ತಿಗೆ ಸರಕಾರ ಏನು ಮಾಡಿದೆ?: ಸುಪ್ರೀಂಕೋರ್ಟ್

ಹೊಸದಿಲ್ಲಿ,ಮಾ.1: ವಿದೇಶಿ ಪ್ರಜೆಗಳ ಕಾಯ್ದೆಯಡಿ ವಿದೇಶೀಯನೆಂದು ಗುರುತಿಸಲ್ಪಟ್ಟು ಬಂಧನ ಕೇಂದ್ರದಲ್ಲಿ ಇರಿಸಲಾಗಿರುವ ವ್ಯಕ್ತಿಯ ಬಿಡುಗಡೆ ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರಕಾರದ ಅಭಿಪ್ರಾಯವನ್ನು ಕೇಳಿದೆ. ಪಾಕಿಸ್ತಾನವು ಈ ವ್ಯಕ್ತಿಯನ್ನು ತನ್ನ ಪ್ರಜೆಯೆಂದು ಒಪ್ಪಿಕೊಳ್ಳಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಆತನನ್ನು ಗಡಿಪಾರು ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನಿಗೆ ಭಾರತೀಯ ಪೌರತ್ವ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಕೇಂದ್ರ ಸರಕಾರದ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರು ಈ ಬಗ್ಗೆ ಸೂಚನೆ ನೀಡಲು ಕಾಲಾವಕಾಶ ನೀಡುವಂತೆ ಕೋರಿದರು. ಆದನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ನಿಲುವು ಏನು ಎಂಬ ಬಗ್ಗೆ ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ  ಎಎಸ್‌ಜಿ ಅವರು ‘‘ವಿದೇಶಿಯರ ಕಾಯ್ದೆಯ ಸೆಕ್ಷನ್ 3 (2) (ಇ) ಪ್ರಕಾರ ಓರ್ವ ವ್ಯಕ್ತಿಯನ್ನು ವಿದೇಶಿಯನೆಂದು ಘೋಷಿಸಿದ ಬಳಿಕ, ಆತನನ್ನು ನಿರ್ದಿಷ್ಟ ಸ್ಥಳದಲ್ಲಿ ಇರಿಸಬೇಕಾಗುತ್ತದೆ. ಆತನಿಗೆ ಹೊರಗೆ ಹೋಗಲು ಅವಕಾಶವಿರುವುದಿಲ್ಲ’’ ಎಂದರು.

ಪ್ರಕರಣದ ಆರೋಪಿ ಮುಹಮ್ಮದ್ ಖಮಾರ್ ಯಾನೆ ಮುಹಮ್ಮದ್ ಖಾಮಿಲ್ 2015ರ ಫೆಬ್ರವರಿ 7ರಿಂದ ಬಂಧನಕೇಂದ್ರದಲ್ಲಿದ್ದಾನೆ. ಆತ ಗಡಿಪಾರಿನ ನಿರೀಕ್ಷೆಯಲ್ಲಿದ್ದರೂ ಪಾಕಿಸ್ತಾನ ಸರಕಾರವು ಆತನನ್ನು ಸ್ವೀಕರಿಸಲು ನಿರಾಕರಿಸಿದೆ. ಆತನ ಐವರು ಮಕ್ಕಳು ಭಾರತದಲ್ಲಿ ಜನಿಸಿದ್ದು, ಭಾರತೀಯ ಪೌರತ್ವವನ್ನ ಹೊಂದಿದ್ದಾರೆ.
   
‘‘ಆರೋಪಿಯು ಕಳೆದ ಏಳು ವರ್ಷಗಳಿಂದ ಗಡಿಪಾರಿನ ನಿರೀಕ್ಷೆಯಲ್ಲಿದ್ದಾನೆ. ಆದರೆ ಸರಕಾರ ಆತನಿಗಾಗಿ ಏನು ಮಾಡಿದೆ" ಎಂದು ನ್ಯಾಯಾಧೀಶರು ಎಎಸ್‌ಜಿಯವರನ್ನು ಪ್ರಶ್ನಿಸಿದ್ದರು.

 62 ವರ್ಷ ವಯಸ್ಸಿನ ಮುಹಮ್ಮದ್ ಖಮಾರ್ ಭಾರತದಲ್ಲಿ ಜನಿಸಿದ್ದನು ಹಾಗೂ 1967-68ರಲ್ಲಿ ಆತ ತನ್ನ ಬಂಧುಗಳನ್ನು ಭೇಟಿಯಾಗಲು ತಾಯಿಯೊಂದಿಗೆ ತೆರಳಿದ್ದನು. ಆದರೆ ಆತನ ತಾಯಿ ಅಲ್ಲೇ ಮೃತಪಟ್ಟಿದ್ದಳು ಹಾಗೂ ಆತ ತನ್ನ ಬಂಧುಗಳ ಜೊತೆ ಉಳಿದುಕೊಂಡಿದ್ದ. 1980ರ ದಶಕದಲ್ಲಿ ಆತ ಪಾಕಿಸ್ತಾನಿ ಪಾಸ್ ಪೋರ್ಟ್ ನೊಂದಿಗೆ ಭಾರತಕ್ಕೆ ಆಗಮಿಸಿದ್ದ. ಉತ್ತರಪ್ರದೇಶದ ಮಹಿಳೆಯನ್ನು ಮದುವೆಯಾದ ಆತ ಆಕೆಯಿಂದ ಐದು ಮಕ್ಕಳನ್ನು ಪಡೆದಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X