Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ನಮ್ಮ ಮಗಳು ಸುರಕ್ಷಿತವಾಗಿ ಮನೆ ಸೇರಿದರೆ...

'ನಮ್ಮ ಮಗಳು ಸುರಕ್ಷಿತವಾಗಿ ಮನೆ ಸೇರಿದರೆ ಸಾಕು'

ಉಕ್ರೇನ್‌ನಲ್ಲಿರುವ ಮಂಗಳೂರು ನಿವಾಸಿಯ ಪೋಷಕರ ಮಾತು

ವಾರ್ತಾಭಾರತಿವಾರ್ತಾಭಾರತಿ2 March 2022 2:40 PM IST
share
ನಮ್ಮ ಮಗಳು ಸುರಕ್ಷಿತವಾಗಿ ಮನೆ ಸೇರಿದರೆ ಸಾಕು

ಮಂಗಳೂರು, ಮಾ.2: ‘‘ಸದ್ಯ ನಮ್ಮ ಮಗಳು ರೊಮೇನಿಯಾ ವಿಮಾನ ನಿಲ್ದಾಣದ ಸಮೀಪ ಆಶ್ರಯ ಪಡೆದಿದ್ದು, ಸುರಕ್ಷಿತವಾಗಿದ್ದಾಳೆಂಬ ಸುದ್ದಿ ಕೇಳಿ ನಾವು ನಿಟ್ಟುಸಿರು ಬಿಟ್ಟಿದ್ದೇವೆ. ಆಕೆ ಸುರಕ್ಷಿತವಾಗಿ ಮನೆ ಸೇರಿದರೆ ಸಾಕು’’ ಎಂದು ಮಂಗಳೂರು ಬಿಜೈ ನಿವಾಸಿ, ಉಕ್ರೇನ್‌ನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿನಿ ಅನುಷಾ ಹೆತ್ತವರ ಮಾತಿದು.

ಕಳೆದ ಕೆಲ ದಿನಗಳಿಂದ ನಾವು ತುಂಬಾ ಆತಂಕಕ್ಕೆ ಒಳಗಾಗಿದ್ದೆವು. ಆಕೆ ನಿರಂತರ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡುತ್ತಿದ್ದಳು. ನಿನ್ನೆ ಆಕೆ ಹಾಗೂ ಇತರ ಹಲವು ವಿದ್ಯಾರ್ಥಿಗಳು ಉಕ್ರೇನ್ ಗಡಿ ದಾಟಿ ರೊಮೇನಿಯಾ ವಿಮಾನ ನಿಲ್ದಾಣ ತಲುಪಿರುವುದು ನಮಗೆಲ್ಲಾ ನೆಮ್ಮದಿ ತಂದಿದೆ ಎಂದು ಅನುಷಾ ತಾಯಿ ಅಭಿಪ್ರಾಯಿಸಿದ್ದಾರೆ.

‘‘2019ರಿಂದ ಯುಕ್ರೇನ್‌ನಲ್ಲಿ ಅನುಷಾ ಎಂಬಿಬಿಎಸ್ ಓದುತ್ತಿದ್ದಾಳೆ. ಪ್ರತಿ ವರ್ಷ ರಜೆಯಲ್ಲಿ ಊರಿಗೆ ಬಂದು ಹೋಗುತ್ತಿದ್ದಳು. ಕೋವಿಡ್‌ನಿಂದಾಗಿ ಒಂದು ವರ್ಷ ಆನ್‌ಲೈನ್‌ನಲ್ಲೇ ಪಾಠ ನಡೆದಿತ್ತು. 2021ರ ಆಗಸ್ಟ್‌ನಲ್ಲಿ ಮತ್ತೆ ಅಂತಿಮ ವರ್ಷದ ಎಂಬಿಬಿಎಸ್‌ ಗಾಗಿ ತೆರಳಿದ್ದಳು. ಇನ್ನೇನು ಜೂನ್‌ನಲ್ಲಿ ಅವರ ಅಂತಿಮ ವರ್ಷದ ಪರೀಕ್ಷೆ ನಡೆಯಬೇಕಿತ್ತು. ಅಲ್ಲಿ ನಡೆಯುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆನ್‌ಲೈನ್ ಅಥವಾ ಆಫ್‌ಲೈನ್ ನಡೆಯುವುದೋ ಎಂಬ ಚರ್ಚೆಯ ನಡೆವೆ ಇಂತಹ ಘಟನೆಗಳು ನಡೆದಿದೆ. ಆಕೆಯ ಶೈಕ್ಷಣಿಕ ಭವಿಷ್ಯದ ಬಗ್ಗೆ ಆಕೆ ಸುರಕ್ಷಿತವಾಗಿ ಮನೆಗೆ ಬಂದು ಸೇರಿದ ಮೇಲೆ ತೀರ್ಮಾನಿಸಿದರಾಯಿತು’’ ಎಂದು ಅನುಷಾ ತಾಯಿ ಹೇಳಿಕೊಂಡಿದ್ದಾರೆ.

‘‘ಮೊದಲ ವರ್ಷ ಆಕೆ ಅಲ್ಲಿ ಕಾಲೇಜು ಹಾಸ್ಟೆಲ್‌ನಲ್ಲಿಯೇ ವಾಸ್ತವ್ಯವಿದ್ದರು. ಬಳಿಕ ಅಲ್ಲೇ ಆಕೆ ಸ್ನೇಹಿತೆಯರ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಡುಗೆಯೆಲ್ಲಾ ಅವರೇ ಮಾಡಿಕೊಂಡಿದ್ದರು. ಅಲ್ಲಿನ ಜನರು, ಶಿಕ್ಷಕರು, ಎಲ್ಲರೂ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿರುವ ಬಗ್ಗೆ ಆಕೆ ಹೇಳಿಕೊಳ್ಳುತ್ತಿದ್ದಳು. ಶಿಕ್ಷಕರು ಮಕ್ಕಳ ಜತೆ ಅದೆಷ್ಟು ಅನ್ಯೋನ್ಯತೆ ಬೆಳೆಸಿದ್ದರೆಂದರೆ, ನನ್ನ ಮಗಳು ಸಸ್ಯಾಹಾರಿ ಆಗಿದ್ದ ಕಾರಣ ಆಕೆಯ ಉಪನ್ಯಾಸಕರೊಬ್ಬರು ಅವರ ಮನೆಯಲ್ಲಿ ಪಾಲಕ್ ಬೆಳೆಸಿದ್ದನ್ನು ತಂದು ನೀಡುತ್ತಿದ್ದರಂತೆ’’ ಎಂದು ಅನುಷಾ ತಾಯಿ ಹೇಳಿದರು.

‘‘ಸದ್ಯ ಆಕೆ ಭಾರತದ ಸುಮಾರು 300 ಜನ ಇತರ ವಿದ್ಯಾರ್ಥಿಗಳ ಜತೆ ರೊಮೇನಿಯಾದ ವಿಮಾನ ನಿಲ್ದಾಣದ ಬಳಿಕ ಬಾಸ್ಕೆಟ್‌ಬಾಲ್ ಕೋರ್ಟ್ ಆವರಣದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿಯೂ ಎಲ್ಲವೂ ಉತ್ತಮವಾಗಿದೆ ಎಂದು ಇಂದು ಬೆಳಗ್ಗೆಯೂ ಮೊಬೈಲ್ ಸಂದೇಶದ ಮೂಲಕ ತಿಳಿಸಿದ್ದಾಳೆ’’ ಎಂದು ಅನುಷಾ ತಾಯಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X