ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಹೆಬ್ರಿ, ಮಾ. 2: ಬೆನ್ನುನೋವಿನಿಂದ ಬಳಲುತ್ತಿದ್ದ ಹೆಬ್ರಿ ಗ್ರಾಮದ ಹೆಬ್ಬಾಗಿಲು ಮನೆ ಹೊಸೂರು ನಿವಾಸಿ ಅಪ್ಪಿ ಪೂಜಾರ್ತಿ(78) ಎಂಬವರು ಮಾನಸಿಕವಾಗಿ ನೊಂದು ಇಂದು ಮಧ್ಯಾಹ್ನ ಬಚ್ಚಲು ಮನೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ಅಂಡಾರುವಿನ ರಾಮ ಗುಡ್ಡೆಯ ನಿವಾಸಿ ಭೋಜ ಶೆಟ್ಟಿ ಎಂಬವರು ಮಾ.1ರಂದು ಮನೆಯ ಮುಂದಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story