Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾರಕ ಅಸ್ತ್ರದೊಂದಿಗೆ ಮಸೀದಿಗೆ ಪ್ರವೇಶ...

ಮಾರಕ ಅಸ್ತ್ರದೊಂದಿಗೆ ಮಸೀದಿಗೆ ಪ್ರವೇಶ ಪ್ರಕರಣ ಸೂಕ್ತ ತನಿಖೆಯಾಗಲಿ: ಮಿತ್ತಬೈಲ್ ಆಡಳಿತ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ3 March 2022 8:57 PM IST
share

ಬಂಟ್ವಾಳ, ಮಾ.3: ವ್ಯಕ್ತಿಯೊಬ್ಬ ಮಾರಕ ಅಸ್ತ್ರ ಹಿಡಿದು ಮಸೀದಿಯೊಳಗೆ ಪ್ರವೇಶ ಮಾಡಿರುವ ಪ್ರಕರಣದ ಹಿಂದಿರುವ ಎಲ್ಲಾ ಶಕ್ತಿಗಳನ್ನು ಹಾಗೂ ಷಡ್ಯಂತ್ರವನ್ನು ಸೂಕ್ತ ತನಿಖೆಯ ಮೂಲಕ ಪೊಲೀಸ್ ಇಲಾಖೆ ಕೊಡಲೇ ಬಯಲಿಗೆಳೆಯಬೇಕು ಎಂದು ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ಆಗ್ರಹಿಸಿದೆ. 

ಕೆಎ.19.ಇಐ5352 ನೋಂದಣಿಯ ದ್ವಿಚಕ್ರ ವಾಹನದಲ್ಲಿ ಬಂದ ಕಲ್ಲಡ್ಕ ನಿವಾಸಿ ಬಾಬು ಎಂಬಾತ ಮಾ. 1ರಂದು ರಾತ್ರಿ 10.05ಕ್ಕೆ ಕೈಕಂಬ ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿಯೊಳಗೆ ಪ್ರವೇಶಿಸಿದ್ದು ಆತನ ಬಳಿ ಮಾರಕ ಅಸ್ತ್ರ ಪತ್ತೆಯಾಗಿದೆ. 

ಮಸೀದಿಯ ಒಳಗೆ ಪ್ರವೇಶಗೈದ ಆತ ಅಲ್ಲಿಂದ ಹೊರಗೆ ಬಂದು ದರ್ಗಾದ ಬಳಿ ರಾತ್ರಿ ಪಾಳಿಯಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಕೆಲಸಗಾರರಲ್ಲಿ ಮಸೀದಿಯ ಖತೀಬರ ಬಗ್ಗೆ ವಿಚಾರಿಸಿದ್ದಾನೆ. ನಂತರ ಅಲ್ಲಿಂದ ತೆರಳಿ ಮತ್ತೆ ದರ್ಗಾದ ಬಳಿಗೆ ಆತ ಬಂದಾಗ ಸಂಶಯಗೊಂಡ ಪೈಂಟಿಂಗ್ ಕೆಲಸಗಾರರು ಆತನನ್ನು ವಿಚಾರಿಸಿದ್ದಾರೆ. ಆತನ ಮಾತಿನಲ್ಲಿ ಶಂಸಯಗೊಂಡ ಕೆಲಸಗಾರರು ಆತನನ್ನು ಹಿಡಿದಿಟ್ಟು ಜಮಾಅತ್ ಕಮಿಟಿಯವರಿಗೆ ತಿಳಿಸಿದ್ದಾರೆ.

ನಾವು ಸ್ಥಳಕ್ಕೆ ತೆರಳಿ ಆತನ ವಾಹನ ಪರಿಶೀಲನೆ ನಡೆಸಿದಾಗ ಅದರಲ್ಲಿ ಮಾರಕ ಅಸ್ತ್ರ ಪತ್ತೆಯಾಗಿದ್ದು ಬಳಿಕ ಆತನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದೇವೆ. ಪೊಲೀಸರು ಆತನ ವಿರುದ್ಧ ಐಪಿಸಿ ಕಾಲಂ 1860 (ಯು/ಎಸ್-448, 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. 

ತನಿಖೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮಸೀದಿಯ ಸಿಸಿ ಕೆಮಾರ ಫೋಟೇಜ್ ಅನ್ನು ಪೊಲೀಸರಿಗೆ ನೀಡಿದ್ದೇವೆ. ಮಾರಕ ಅಸ್ತçದೊಂದಿಗೆ ಮಸೀದಿಗೆ ಬಂದು ಧರ್ಮ ಗುರುವಿನ ಬಗ್ಗೆ ವಿಚಾರಿಸಿದ್ದು ಮತ್ತು ಆತನ ನಡೆಯ ಬಗ್ಗೆ ಹಲವು ರೀತಿಯ ಸಂಶಯ ಹುಟ್ಟು ಹಾಕಿದೆ. ಬಂಧಿತ ವ್ಯಕ್ತಿಯನ್ನು ಪೊಲೀಸ್ ಇಲಾಖೆ ತೀವ್ರ ವಿಚಾರಣೆಗೆ ಒಳಪಡಿಸಬೇಕು. ಘಟನೆಯ ಹಿಂದೆ ಬೇರೆ ವ್ಯಕ್ತಿಗಳು ಕೂಡಾ ಇರುವ ಅನುಮಾನ ಇದ್ದು ತನಿಖೆ ನಡೆಸಿ ಅವರನ್ನು ಕೂಡಾ ಬಂಧಿಸಬೇಕು ಎಂದು ನಾವು ಪೊಲೀಸ್ ಇಲಾಖೆಯನ್ನು ಒತ್ತಾಯಿಸುತ್ತೇವೆ. 

ಬಂಟ್ವಾಳ ತಾಲೂಕು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ನಿರಂತರವಾದ ಕೋಮು ಘರ್ಷಣೆಯಿಂದ ಜನತೆ ತತ್ತರಿಸಿ ಹೋಗಿದ್ದು ಕೆಲವು ಸಮಯದಿಂದ ತಾಲೂಕು ಶಾಂತಿಯಿಂದ ಇದೆ. ಧರ್ಮ ಗುರುಗಳ ಮೇಲೆ ದಾಳಿ ನಡೆಸುವ ಮೂಲಕ ಮತ್ತೆ ತಾಲೂಕಿನಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಕಿಡಿಗೇಡಿಗಳು ನಡೆಸಲು ಯತ್ನಿಸುತ್ತಿರುವ ಅನುಮಾನ ಕೂಡಾ ವ್ಯಕ್ತವಾಗುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ತನಿಖೆ ನಡೆಸಬೇಕು. ಹಾಗೂ ಜನರು ಯಾವುದೇ ಪ್ರಚೋಧನೆಗೆ ಒಳಗಾಗದೆ ಶಾಂತಿ ಕಾಪಾಡಬೇಕು ಎಂದು ಮಸೀದಿಯ ಅಧ್ಯಕ್ಷ ಮುಹಮ್ಮದ್ ಸಾಗರ್ ಮತ್ತು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X