Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಮ್ಮ ಕಷ್ಟಕ್ಕೆ ಭಾರತದ ರಾಯಭಾರ ಕಚೇರಿಯ...

ನಮ್ಮ ಕಷ್ಟಕ್ಕೆ ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ನೆರವಾಗಿಲ್ಲ: ನಿಯಮ್ ರಾಘವೇಂದ್ರ

ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿರುವ ಉಡುಪಿಯ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ3 March 2022 10:27 PM IST
share
ನಮ್ಮ ಕಷ್ಟಕ್ಕೆ ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ನೆರವಾಗಿಲ್ಲ: ನಿಯಮ್ ರಾಘವೇಂದ್ರ

ಉಡುಪಿ, ಮಾ.3: ಯುದ್ಧಗ್ರಸ್ಥ ಉಕ್ರೇನಿನಿಂದ ಸುರಕ್ಷಿತವಾಗಿ ಹೊರಬರಲು ನಾವು ವಿದ್ಯಾರ್ಥಿಗಳು ಸಾಕಷ್ಟು ಸಾಹಸ ಮಾಡಬೇಕಾಯಿತು. ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ನಮ್ಮ ಕಷ್ಟಕಾಲದಲ್ಲಿ ಯಾವುದೇ ನೆರವು ನೀಡಿಲ್ಲ ಎಂದು ಇಂದು ಸ್ವದೇಶಕ್ಕೆ ಮರಳಿದ ನಿಯಮ್ ರಾಘವೇಂದ್ರ ತಿಳಿಸಿದ್ದಾರೆ.

ಉಕ್ರೇನಿನ ವಿನ್ನಿಸ್ಟಿಯಾ ನಗರದಲ್ಲಿರುವ ವಿನ್ನಿಸ್ಟಿಯಾ ನ್ಯಾಶನಲ್ ಪಿರೊಗೊವ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ಓದುತ್ತಿರುವ ನಿಯಮ್ ರಾಘವೇಂದ್ರ, ರೊಮೆನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಮುಂಬೈ ಮಾರ್ಗವಾಗಿ ಗುರುವಾರ ಹೊಸದಿಲ್ಲಿ ತಲುಪಿದ್ದಾರೆ. ಅವರ ತಂದೆ ಬಿ.ವಿ.ರಾಘವೇಂದ್ರ ಹೊಸದಿಲ್ಲಿ ಕರ್ನಾಟಕ ಭವನದ ವ್ಯವಸ್ಥಾಪಕರಾಗಿದ್ದಾರೆ. ಮಣಿಪಾಲ ಸಮೀಪದ ಪರ್ಕಳದಲ್ಲಿ ವಾಸವಾಗಿದ್ದಾರೆ.

ವಿನ್ನಿಸ್ಟಿಯಾ ನಗರದಲ್ಲಿ ಯುದ್ಧದ ತೀವ್ರತೆ ಇರಲಿಲ್ಲ. ಆದರೆ ಅಲ್ಲಿಂದ ರೊಮೆನಿಯಾ ಗಡಿಯವರೆಗೂ ಹೋಗಲು ಸಾಕಷ್ಟು ಸಾಹಸ ಮಾಡಿದ್ದೇವೆ ಎಂದು ಅವರು ಯುದ್ಧ ಪ್ರಾರಂಭಗೊಂಡ ಬಳಿಕ ತಮ್ಮ ಆತಂಕ, ನೋವು, ಕಷ್ಟಗಳನ್ನು ನೆನಪಿಸಿಕೊಳ್ಳುತ್ತಾ ನುಡಿದರು.

ನಾವಿದ್ದ ನಗರದಿಂದ ರೊಮೆನಿಯಾ ಗಡಿಯವರೆಗೂ ತಲುಪಲು ಯಾವೊಬ್ಬ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯೂ ಸಹಾಯ ಮಾಡಿಲ್ಲ. ಗೆಳೆಯರು ಸೇರಿಕೊಂಡು ಖಾಸಗಿ ಬಸ್ ವ್ಯವಸ್ಥೆಯಲ್ಲಿ ರೊಮೆನಿಯಾ ಗಡಿವರೆಗೂ ಬಂದೆವು. ಅಲ್ಲಿ ಸಹ ನಮ್ಮ ಸಹಾಯಕ್ಕೆ ಯಾರೂ ಬರಲಿಲ್ಲ ಎಂದು ಅವರು ಹೊಸದಿಲ್ಲಿಯಿಂದ ಮಾತನಾಡುತ್ತಾ ತಿಳಿಸಿದರು.

ಒಂದು ದೇಶದಿಂದ ಇನ್ನೊಂದು ದೇಶದ ಗಡಿ ದಾಟುವ ಬಗ್ಗೆಯೂ ನಮಗೆ ಮಾಹಿತಿ ನೀಡುವವರು ಇರಲಿಲ್ಲ. ರೊಮೆನಿಯಾ ಗಡಿಯಿಂದ ವಿಮಾನ ನಿಲ್ದಾಣದ ಸುತ್ತಲು ಹೆಚ್ಚಿನ ಟ್ರಾಫಿಕ್ ಇದ್ದುದ್ದರಿಂದ ಪ್ರತಿಕೂಲ ಹವಾಮಾನ ದಲ್ಲೂ(ಮೈಕೊರೆವ ಚಳಿ) 12 ಕಿ.ಮೀ ನಡೆದುಕೊಂಡೇ ಹೋಗಬೇಕಾಯಿತು ಎಂದು ನೋವಿನಿಂದ ವಿವರಿಸಿದರು.

ಭವಿಷ್ಯದ ಬಗ್ಗೆ ಕೇಳಿದಾಗ, ಎಲ್ಲವೂ ತಿಳಿಯಾದ ಮೇಲೆ ಮತ್ತೆ ಅಲ್ಲಿಗೆ ತೆರಳಿ ಓದು ಪೂರ್ಣಗೊಳಿಸುವ ಇಚ್ಛೆಯಿದೆ. ಅಲ್ಲಿ ಶಿಕ್ಷಣ ತುಂಬಾ ಚೆನ್ನಾಗಿದೆ ಎಂದ ನಿಯಮ್, ಎಂಬಿಬಿಎಸ್ ಕೋರ್ಸ್‌ನ್ನು ಆನ್‌ಲೈನ್‌ನಲ್ಲಿ ಕಲಿಯಲು ಸಾಧ್ಯವಿಲ್ಲ. ಮಾ.13ರ ಅನಂತರ ಆನ್‌ಲೈನ್ ತರಗತಿ ಆರಂಭವಾಗಲಿದೆ ಎಂದು ಮಾಹಿತಿಯಿದೆ. ಆದರೆ ಈ ಬಗ್ಗೆ ಸ್ಪಷ್ಟತೆಯಿಲ್ಲ ಎಂದರು.

ನಿಯಮ್ ರಾಘವೇಂದ್ರ (20) ಮಣಿಪಾಲದ ಮಾಧವ ಕೃಪಾದಲ್ಲಿ ಹೈಸ್ಕೂಲ್ ಹಾಗೂ ಪಿಯುಸಿ ಶಿಕ್ಷಣ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X