Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಬಳಿಕ...

ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಬಳಿಕ ಪ್ರಾಂಶುಪಾಲರೇ ಹೇಳಿಕೆ ಬದಲಿಸಿದರು: ವಿದ್ಯಾರ್ಥಿನಿ ಹಿಬಾ ಶೇಖ್

ಮಂಗಳೂರಿನ ಸರಕಾರಿ ಪ್ರಥಮ‌ ದರ್ಜೆ ಕಾಲೇಜಿ‌ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ3 March 2022 10:38 PM IST
share
ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಬಳಿಕ ಪ್ರಾಂಶುಪಾಲರೇ ಹೇಳಿಕೆ ಬದಲಿಸಿದರು: ವಿದ್ಯಾರ್ಥಿನಿ ಹಿಬಾ ಶೇಖ್

ಮಂಗಳೂರು, ಮಾ.3: ನಗರದ ರಥಬೀದಿಯಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುತ್ತಿದ್ದ ಆರೇಳು ವಿದ್ಯಾರ್ಥಿನಿಯರನ್ನು ಬಲವಂತವಾಗಿ ಪರೀಕ್ಷಾ ಕೊಠಡಿಯಿಂದ ಹೊರಗೆ ಹಾಕಿದ ಘಟನೆ ಗುರುವಾರ ನಡೆದಿದೆ.

ಈ ಬಗ್ಗೆ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಹಿಬಾ ಶೇಖ್ ಎಂಬಾಕೆಯು ವೀಡಿಯೋ ಹೇಳಿಕೆಯೊಂದನ್ನು ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಇದು ಭಾರೀ ವೈರಲ್ ಆಗಿದೆ.

ಈ ದಿನ ನಮಗೆ ಪರೀಕ್ಷೆ ಇತ್ತು. ಅದರಂತೆ ನಾವು ಪರೀಕ್ಷೆ ಬರೆಯುತ್ತಿದ್ದಾಗ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಾಯಿ ಸಂದೇಶ್ ಎಂಬಾತ ನಮ್ಮನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಹಾಕುವಂತೆ ಪ್ರಾಂಶುಪಾಲರ ಬಳಿ ಒತ್ತಾಯಿಸತೊಡಗಿದ. ಆರಂಭದಲ್ಲಿ ಪ್ರಾಂಶುಪಾಲರು ಆತನ ಮಾತನ್ನು ಗಣನೆಗೆ ತೆಗೆದುಕೊಳ್ಳದಿದ್ದಾಗ ಆತ ಪ್ರಾಂಶುಪಾಲರ ವಿರುದ್ಧ ಮಾತನಾಡತೊಡಗಿದ. ಅಲ್ಲದೆ ಕಾಲೇಜಿನ ಇತರ ವಿದ್ಯಾರ್ಥಿಗಳ ಜೊತೆ ಸೇರಿ ಗದ್ದಲ ಎಬ್ಬಿಸಿದ. ಅಲ್ಲದೆ ಸಾಯಿ ಸಂದೇಶ್ ಮತ್ತಷ್ಟು ಒತ್ತಡ ಹಾಕಿದಾಗ ಪ್ರಾಂಶುಪಾಲರು ನಮ್ಮನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಹಾಕಲು ಅನುಮತಿಸಿದರು. ಈ ಮಧ್ಯೆ ಪೊಲೀಸರನ್ನು ಪರೀಕ್ಷಾ ಕೊಠಡಿಗೆ ಕರೆಯಿಸಿಕೊಂಡ ಸಾಯಿ ಸಂದೇಶ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯುತ್ತಿದ್ದ ನಮ್ಮನ್ನು ಹೊರಗೆ ಕಳುಹಿಸಿದ ಎಂದು ಆರೋಪಿಸಿದ್ದಾರೆ.

ನಮ್ಮಂದಿಗೆ ಪರೀಕ್ಷೆ ಬರೆಯುತ್ತಿದ್ದ ಶಾಹಿನಾರಿಗೂ ಪೊಲೀಸರು ಬೆದರಿಕೆ ಹಾಕಿದರು. ನನ್ನದೊಂದು ಸಹಿ ನಿನ್ನ ವಿದ್ಯಾರ್ಥಿ ಜೀವನವನ್ನೇ ಕೊನೆಗಾಣಿಸಬಹುದು. ಮತ್ತೆ ನೀನು ಮತ್ಯಾವ ಕಾಲೇಜಿಗೂ ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರು ಬೆದರಿಸಿದರು ಎಂದು ಹಿಬಾ ಶೇಖ್ ಆರೋಪಿಸಿದ್ದಾರೆ.

ಹಿಜಾಬ್ ಪ್ರಕರಣದ ಬಳಿಕ ಈ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜಿಗೆ ಹೋಗುತ್ತಿದ್ದರೂ ಕೂಡ ತರಗತಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ ಗುರುವಾರ ಆರಂಭಗೊಂಡ ಪರೀಕ್ಷೆ ಬರೆಯಲು ಕಾಲೇಜಿನ ಪ್ರಾಂಶುಪಾಲರು ಮೊದಲು ಅವಕಾಶ ನೀಡಿದ್ದರೂ ಬಳಿಕ ಒತ್ತಡಕ್ಕೆ ಮಣಿದರು ಎಂದು ನೊಂದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ನಮಗೆ ಪ್ರಾಂಶುಪಾಲರು ಸಹಿ ಹಾಕಿ ಅನುಮತಿ ಪತ್ರವನ್ನು ನೀಡಿದ್ದರು. ಆದರೆ ಸಾಯಿ ಸಂದೇಶ್‌ನ ಒತ್ತಡದ ಬಳಿಕ ಪ್ರಾಂಶುಪಾಲರು ಮೊದಲು ಕೊಟ್ಟಿದ್ದ ಅನುಮತಿ ಪತ್ರಕ್ಕೆ ಸಂಬಂಧಿಸಿದಂತೆ ನಾನು ಯಾರಿಗೂ ಯಾವುದೇ ಅನುಮತಿ ಪತ್ರ ಕೊಟ್ಟಿಲ್ಲ ಎಂದು ಸುಳ್ಳು ಹೇಳಿ ನಮ್ಮನ್ನು ಆಶ್ಚರ್ಯಚಕಿತರಾಗುವಂತೆ ಮಾಡಿದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಎಬಿವಿಪಿ ನಾಯಕ ಸಾಯಿ ಸಂದೇಶ ನಮಗೆ ಧಮ್ಕಿ ಹಾಕಿದ್ದಾನೆ ಮತ್ತು ಸ್ಥಳಕ್ಕೆ ಬಂದಿದ್ದ ಪೊಲೀಸರು ಕೂಡ ನಮಗೆ ಬೆದರಿಕೆ ಹಾಕಿದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಈ ಮಧ್ಯೆ ಎರಡ್ಮೂರು ದಿನದ ಹಿಂದೆ ಕಾಲೇಜಿನ ಸಿಬ್ಬಂದಿಯೊಬ್ಬ ನಮ್ಮನ್ನು ಅಮಾನವೀಯವಾಗಿ ಕಾಣುತ್ತಿದ್ದ. ಕಾಲೇಜು ಸಹಪಾಠಿಗಳ ಜೊತೆ ಬೆರೆಯಬಾರದು. ಇಲ್ಲಿ ಊಟ ಮಾಡಬಾರದು. ನೀರು ಕುಡಿಯಬಾರದು ಎಂದು ಆ ಸಿಬ್ಬಂದಿ ಒತ್ತಡ ಹಾಕುತ್ತಿದ್ದ ಎಂದು ಹಿಬಾ ಶೇಖ್ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು 'ವಾರ್ತಾಭಾರತಿ'ಯು ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಕೂಡ ಪ್ರಾಂಶುಪಾಲರು ಕರೆಯನ್ನು ಸ್ವೀಕರಿಸಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X