Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಳನೇ ವೇತನ ಆಯೋಗ ಜಾರಿ ಮಾಡದಿರುವುದು...

ಏಳನೇ ವೇತನ ಆಯೋಗ ಜಾರಿ ಮಾಡದಿರುವುದು ನೌಕರ ವಿರೋಧಿ ಕ್ರಮ: ನೌಕರರ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ4 March 2022 9:49 PM IST
share
ಏಳನೇ ವೇತನ ಆಯೋಗ ಜಾರಿ ಮಾಡದಿರುವುದು ನೌಕರ ವಿರೋಧಿ ಕ್ರಮ: ನೌಕರರ ಒಕ್ಕೂಟ

ಬೆಂಗಳೂರು, ಮಾ. 4: ‘ಸರಕಾರಿ ನೌಕರರಿಗೆ ಏಳನೆ ವೇತನ ಆಯೋಗದ ಕುರಿತಂತೆ ಸರಕಾರ ಭ್ರಮೆ ಹುಟ್ಟಿಸುತ್ತಾ ಹೋರಾಟದ ನೈತಿಕತೆಯನ್ನೇ ಕಳೆದುಕೊಂಡಿರುವ ನೌಕರ ಸಂಘಗಳ ಮಾತುಗಳಿಗೆ ಬಲಿಯಾಗದೆ, ಮುಂದಿನ ದಿನಗಳಲ್ಲಿ ನೌಕರರ ಬೇಡಿಕೆಗಳಿಗಾಗಿ ಇಲಾಖಾ ಸಂಘಗಳು ಮತ್ತು ಕೇಡರ್ ಸಂಘಗಳು ಒಗ್ಗೂಡಿ ಐಕ್ಯ ಹೋರಾಟಕ್ಕೆ ಸಜ್ಜಾಗಬೇಕು' ಎಂದು ಎಂದು ಅಖಿಲ ಕರ್ನಾಟಕ ಸರಕಾರಿ ನೌಕರರ ಒಕ್ಕೂಟವು ಕರೆ ನೀಡಿದೆ.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23ನೆ ಸಾಲಿನ ಆಯವ್ಯಯ ಸರಕಾರಿ ನೌಕರರಿಗೆ ತೀವ್ರ ನಿರಾಸೆ ಉಂಟು ಮಾಡಿದೆಯಲ್ಲದೆ, ಇದು ನೌಕರ-ವಿರೋಧಿ ಮಾತ್ರವಲ್ಲ, ಜನ-ವಿರೋಧಿ. ಜಂಟಿ ಅಧಿವೇಶನ ಸಂದರ್ಭದಲ್ಲಿ ಶಾಸಕರ ವೇತನ ಸೌಲಭ್ಯವನ್ನು ಯಾವುದೇ ಚರ್ಚೆಯಿಲ್ಲದೆ ಹೆಚ್ಚಳ ಮಾಡಿಕೊಳ್ಳಲು ಅಂಗೀಕಾರ ಮಾಡಲಾಗಿರುತ್ತದೆ. ಕೇಂದ್ರ ಸರಕಾರಿ ನೌಕರರು, ಕೇರಳ, ತೆಲಂಗಾಣ, ತಮಿಳುನಾಡು, ಇನ್ನಿತರ ರಾಜ್ಯಗಳ ವೇತನ ಸೌಲಭ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯ ಸರಕಾರಿ ನೌಕರರು ಅತಿ ಕಡಿಮೆ ವೇತನ ಪಡೆಯುತ್ತಿದ್ದಾರೆ. ಜುಲೈ 2022ಕ್ಕೆ ವೇತನ ಪರಿಷ್ಕರಣೆಯಾಗಿ 5 ವರ್ಷಗಳಾಗುತ್ತದೆ.

ಈ ಹಿನ್ನೆಲೆಯಲ್ಲಿ, ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ವೇತನ ಆಯೋಗ ರಚಿಸುವಂತೆ ಹಾಗೂ ರಾಜಾಸ್ತಾನ ಮಾದರಿಯಂತೆ ಎನ್‍ಪಿಎಸ್ ರದ್ದುಪಡಿಸುವಂತೆ ಒಕ್ಕೂಟವು ಆಗ್ರಹಿಸಿತ್ತು. ಆದರೆ, 2022-23ನೆ ಸಾಲಿನ ಬಜೆಟ್‍ನಲ್ಲಿ ಸರಕಾರಿ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ಬದಲಿಗೆ, ಇಲಾಖೆ/ ನಿಗಮ/ ಮಂಡಳಿಗಳ ವಿಲೀನದ ಹೆಸರಿನಲ್ಲಿ ಹುದ್ದೆಗಳ ಕಡಿತ ಮಾಡುವಂತೆ ತಿಳಿಸಿರುವ ಕರ್ನಾಟಕ ಆಡಳಿತ ಸುಧಾರಣೆಗಳ ಆಯೋಗ-2ರ ಶಿಫಾರಸ್ಸುಗಳನ್ನು ಜಾರಿಗೊಳಿಸುವುದಾಗಿ ಘೋಷಿಸಲಾಗಿದೆ. ಈ ಜನ-ವಿರೋಧಿ ಕ್ರಮವನ್ನು ಒಕ್ಕೂಟವು ಒಕ್ಕೊರಲಿನಿಂದ ಖಂಡಿಸುತ್ತದೆ. 

ಕೋವಿಡ್ 19ರ ಸಂಕಷ್ಟ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ನೌಕರರ ಬದುಕಿಗೆ ಕಂಟಕವಾಗಿರುವ ಎನ್‍ಪಿಎಸ್ ಪದ್ದತಿ ಮತ್ತು ಆಡಳಿತ ಸುಧಾರಣೆಗಳ ಶಿಫಾರಸ್ಸುಗಳ ವಿರುದ್ದ ಧ್ವನಿ ಎತ್ತದೆ, ಮೂಗಿಗೆ ತುಪ್ಪ ಸವರುವಂತಹ ಮರಣ ಭತ್ಯೆ, ಶಿಶುಪಾಲನಾ ರಜೆ ಇತ್ಯಾದಿಯಂತಹ ಸಣ್ಣಪುಟ್ಟ ಆದೇಶಗಳು, ವೈಭವೋಪೇತ ನೌಕರ ಅತಿಥಿಗೃಹ ನಿರ್ಮಾಣ, ಇತ್ಯಾದಿಗಳು ನೌಕರರ ಹೊಟ್ಟೆ ತುಂಬಿಸುವುದಿಲ್ಲ ಎಂದು ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X