Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಮಗ ಆಹಾರ, ಬಸ್ ವ್ಯವಸ್ಥೆ ಸಿಗದೆ...

‘ಮಗ ಆಹಾರ, ಬಸ್ ವ್ಯವಸ್ಥೆ ಸಿಗದೆ ಕಂಗಲಾಗಿದ್ದಾನೆ’: ಉಕ್ರೇನ್‌ನಲ್ಲಿರುವ ಕೆಮ್ಮಣ್ಣುವಿನ ವಿದ್ಯಾರ್ಥಿ ಪೋಷಕರ ಆತಂಕ

ವಾರ್ತಾಭಾರತಿವಾರ್ತಾಭಾರತಿ4 March 2022 10:18 PM IST
share
‘ಮಗ ಆಹಾರ, ಬಸ್ ವ್ಯವಸ್ಥೆ ಸಿಗದೆ ಕಂಗಲಾಗಿದ್ದಾನೆ’: ಉಕ್ರೇನ್‌ನಲ್ಲಿರುವ ಕೆಮ್ಮಣ್ಣುವಿನ ವಿದ್ಯಾರ್ಥಿ ಪೋಷಕರ ಆತಂಕ

ಉಡುಪಿ, ಮಾ.4: ‘ನಮ್ಮ ಮಗ ಗ್ಲೆನ್ವಿಲ್ ಮ್ಯಾಕ್ವಿಲ್ ಫೆರ್ನಾಂಡಿಸ್ ಸದ್ಯ ಖಾರ್ಕೀವ್ ಗಡಿ ಪ್ರದೇಶದಲ್ಲಿದ್ದು, ಸರಿಯಾದ ಆಹಾರ ಹಾಗೂ ಬಸ್ ವ್ಯವಸ್ಥೆ ಸಿಗದೆ ಕಂಗಲಾಗಿದ್ದಾನೆ’ ಎಂದು ತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಮೆಲ್ವಿನ್ ಫೆರ್ನಾಂಡಿಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಮಾ.3ರಂದು ಹಲವು ಗಂಟೆಗಳ ಕಾಲ ಮಗ ಸಂಪರ್ಕ ಸಿಗದ ಹಿನ್ನೆಲೆಯಲ್ಲಿ ಮೆಲ್ವಿನ್ ರೊಡ್ರಿಗಸ್ ಮತ್ತು ಐಡಾ ದಂಪತಿ ತೀವ್ರ ಆತಂಕಕ್ಕೆ ಒಳಗಾಗಿದ್ದು, ನಮ್ಮ ಮಕ್ಕಳು ಎಲ್ಲಿದ್ದಾರೆಂಬ ಮಾಹಿತಿಯಾದರೂ ಕೊಡಿ ಎಂದು ಸರಕಾರಕ್ಕೆ ಮನವಿ ಮಾಡಿದ್ದರು. ಇದೀಗ ಮಗ ಸಂಪರ್ಕ ಸಿಕ್ಕಿರುವುದರಿಂದ ಈ ಕುಟುಂಬ ಸದ್ಯ ಸಮಾಧಾನಪಟ್ಟಿದೆ. ಆದರೆ ಮಗನ ಬರುವಿಕೆ ಬಗ್ಗೆ ಚಿಂತೆಗೆ ಒಳಗಾಗಿದೆ.

ಖಾರ್ಕೀವ್ ನ್ಯಾಶನಲ್ ಮೆಡಿಕಲ್ ಯುನಿವರ್ಸಿಟಿಯ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಗ್ಲೆನ್ವಿಲ್, ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಉಕ್ರೇನ್‌ಗೆ ತೆರಳಿದ್ದನು. ರಶ್ಯಾ ದಾಳಿಯ ಮಧ್ಯೆ ಸಿಲುಕಿರುವ ಗ್ಲೆನ್ವಿಲ್ ಹಾಗೂ ಅವರ ತಂಡ, ಖಾರ್ಕಿವ್ ಹಾಸ್ಟೆಲ್‌ನಿಂದ ಸುಮಾರು 30 ಕಿಲೋ ಮೀಟರ್ ನಡೆದುಕೊಂಡು ಹೋಗಿ ಖಾರ್ಕಿವ್ ಗಡಿ ತಲುಪಿದೆ ಎಂದು ತಿಳಿದುಬಂದಿದೆ.

ಈ ಕುರಿತು ವಾರ್ತಾಭಾರತಿಗೆ ಮಾಹಿತಿ ನೀಡಿದ ಮೆಲ್ವಿನ್ ಫೆರ್ನಾಂಡಿಸ್, ‘ಇಂದು ಸಂಜೆ ಒಂದು ಗಂಟೆ ಮೊದಲು ಮಗ ಸಂಪರ್ಕಕ್ಕೆ ಸಿಕ್ಕಿದ್ದಾನೆ. ಇವರ ತಂಡದಲ್ಲಿ ಮಗ ಸೇರಿದಂತೆ 540 ಮಂದಿ ಇದ್ದು, ಸದ್ಯ ಖಾರ್ಕೀವ್ ಗಡಿ ಪ್ರದೇಶದಲ್ಲಿದ್ದಾರೆ. ಯಾವುದೇ ಅಪಾಯ ಇಲ್ಲದಿದ್ದರೂ ಆಹಾರ ಸಿಗದೆ ಕಂಗಾಲಾಗಿದ್ದಾರೆ. ಅದೇ ರೀತಿ ಮುಂದೆ ಹೋಗಲು ಇವರಿಗೆ ಬಸ್ ವ್ಯವಸ್ಥೆ ಕೂಡ ಇಲ್ಲ’ ಎಂದು ತಿಳಿಸಿದ್ದಾರೆ.

ಖಾರ್ಕೀವ್ ಗಡಿಯಿಂದ ಸುಮಾರು 1500 ಕಿಲೋಮೀಟರ್ ದೂರ ಸಂಚಾರ ಮಾಡಬೇಕಾಗುತ್ತದೆ. ಆದರೆ ಬಸ್ ವ್ಯವಸ್ಥೆ ಇಲ್ಲವಾಗಿದೆ. ಈ ಸಂದರ್ಭದಲ್ಲಿ ಫೋನ್ ನೆಟ್‌ವರ್ಕ್ ಕೂಡ ಸಿಗುವುದು ಕಷ್ಟ. ಉಕ್ರೇನ್‌ನ ಲಿವ್ಯೆ ಪ್ರದೇಶಕ್ಕೆ ತಲುಪಿದ ನಂತರ ಅಲ್ಲಿ ರಾಯಭಾರಿ ಕಚೇರಿ ಅಧಿಕಾರಿಗಳು ಇವರನ್ನು ಉಕ್ರೇನ್ ಗಡಿ ದಾಟಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ರೈಲು, ಲಿವ್ಯೆ ಪ್ರದೇಶಕ್ಕೆ ತಲುಪಿ, ಅಲ್ಲಿಂದ ಏರ್‌ಲಿಫ್ಟ್ ಮಾಡಿದರೆ ಎರಡು ದಿನಗಳ ಒಳಗೆ ಮ್ಯಾಕ್ಲಿನ್ ಉಡುಪಿಗೆ ತಲುಪಬಹುದು. ಆದರೆ ಅಲ್ಲಿಯ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬದಲಾಗುತ್ತಿರುವುದರಿಂದ ಯಾವುದನ್ನು ನಿರೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಕಂಟ್ರೋಲ್ ರೂಮ್, ಡಿಸಿ ಕಚೇರಿಯಿಂದ ಮಾಹಿತಿ ಬರುತ್ತಿದೆ. ಸ್ಥಳಾಂತರ ಮಾಡುವ ಸಂಪೂರ್ಣ ಖರ್ಚುವೆಚ್ಚವನ್ನು ಸರಕಾರ ನೋಡಿಕೊಳ್ಳುವುದಾಗಿ ನಮಗೆ ಭರವಸೆ ನೀಡಿದೆ. ದೆಹಲಿಗೆ ಬಂದು ಅಲ್ಲಿಂದ ಮುಂಬೈ ಮೂಲಕ ಉಡುಪಿಗೆ ಕಳುಹಿಸಬಹುದು ಅಥವಾ ದೆಹಲಿಯಿಂದ ಬೆಂಗಳೂರಿಗೆ ವಿಮಾನ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮ್ಯಾಕ್ಲಿನ್ ನಮಗೆ ಧೈರ್ಯ ತುಂಬಿಸುತ್ತಿದ್ದಾನೆ. ಎಲ್ಲರೂ ಸೇಫ್ ಆಗಿದ್ದಾರೆ ಎಂದು ಮೆಲ್ವಿನ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X