ಮೊಗವೀರ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ

ಕಟಪಾಡಿ, ಮಾ.4: ಮಟ್ಟು ಕರಾವಳಿ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಕಟಪಾಡಿ ಪಳ್ಳಿಗುಡ್ಡೆ ನೆಹರೂ ಮೈದಾನದಲ್ಲಿ ಮೊಗವೀರ ಸಮಾಜ ಬಾಂಧವರಿಗಾಗಿ ಹಮ್ಮಿಕೊಳ್ಳಲಾದ ಮೂರು ದಿನಗಳ ಮೊಗವೀರ ಪ್ರಿಮಿಯರ್ ಲೀಗ್ ಎಂಪಿಎಲ್ ಟ್ರೋಫಿ-2022 ಕ್ರಿಕೆಟ್ ಪಂದ್ಯಾಕೂಟಕ್ಕೆ ನ್ಯಾಯವಾದಿ ಗಣೇಶ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಅನಾದಿಕಾಲದಿಂದಲೂ ಮೊಗವೀರ ಸಮಾಜವು ಸಂಘ ಟನಾತ್ಮಕವಾಗಿ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿದ್ದು, ಮೊಗವೀರ ಕ್ರೀಡಾ ಕೂಟವನ್ನು ಆಯೋಜಿಸುವ ಮೂಲಕ ಸಮಾಜದ ಕ್ರೀಡಾಳುಗಳನ್ನು ಒಗ್ಗೂಡಿ ಸುವ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್ ಟ್ರೋಫಿ ಅನಾವರಣಗೊಳಿಸಿದರು.
ಉಡುಪಿಯ ಉದ್ಯಮಿ ಶಂಕರ್ ಕೋಟ್ಯಾನ್, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ತಾಪಂ ಮಾಜಿ ಸದಸ್ಯ ರಾಜೇಶ್ ಅಂಬಾಡಿ, ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್, ಉದ್ಯಾವರ ಮೀನುಗಾರಿಕಾ ಮತ್ತು ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ವಿ.ಸುವರ್ಣ, ಕೋಟೆ ಪಂಡರಿನಾಥ ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಕಾಂಚನ್, ಕಟಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರೇಮ್ ಕುಮಾರ್, ಪಾಂಗಾಳಗುಡ್ಡೆ ಗರಡಿಮನೆ ಸುಧಾಕರ್ ಡಿ.ಅಮೀನ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ, ಕಡೆಕಾರು ಗ್ರಾಪಂ ಸದಸ್ಯ ವಸಂತ್ ಕುಂದರ್, ಸಂಸ್ಥೆಯ ಪದಾಧಿಕಾರಿಗಳಾದ ಸುಚಿತ್, ಶ್ರೀಕಾಂತ್ ಉಪಸ್ಥಿತರಿದ್ದರು.ಮಟ್ಟು ಕರಾವಳಿ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷ ಚಂದ್ರಹಾಸ್ ಕೋಟ್ಯಾನ್ ಕೋಟೆ ಸ್ವಾಗತಿಸಿದರು. ನ್ಯಾಯವಾದಿ ರಾಜಕಿಶೋರ್ ಪಿ.ಶ್ಯಾಮರಾವ್ ಕಾರ್ಯಕ್ರಮ ನಿರೂಪಿಸಿದರು.