Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೆಲ್ ದಾಳಿ, ಸಾರಿಗೆ ಕೊರತೆಯಿಂದ ತೆರವು...

ಶೆಲ್ ದಾಳಿ, ಸಾರಿಗೆ ಕೊರತೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ: ವಿದೇಶಾಂಗ ವ್ಯವಹಾರ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ6 March 2022 11:06 PM IST
share
ಶೆಲ್ ದಾಳಿ, ಸಾರಿಗೆ ಕೊರತೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ: ವಿದೇಶಾಂಗ ವ್ಯವಹಾರ ಸಚಿವಾಲಯ

ಹೊಸದಿಲ್ಲಿ, ಮಾ.6: ಮುಂದುವರಿದ ಶೆಲ್ ದಾಳಿ ಹಾಗೂ ಸಾರಿಗೆ ಸೌಲಭ್ಯದ ಕೊರತೆ ಉಕ್ರೇನ್‌ನ ಸುಮಿ ವಲಯದಿಂದ ಭಾರತೀಯ ವಿದ್ಯಾರ್ಥಿಗಳನ್ನು ತೆರವು ಗೊಳಿಸಲು ತೀವ್ರ ಅಡ್ಡಿ ಉಂಟು ಮಾಡುತ್ತಿದೆ ಎಂದು ವಿದೇಶಾಂಗ ವ್ಯವಹಾ ರಗಳಸಚಿವಾಲಯ (ಎಂಇಎ) ಶನಿವಾರ ತಿಳಿಸಿದೆ.

ಯುದ್ಧಗ್ರಸ್ತ ಉಕ್ರೇನ್‌ನಿಂದ ಇದುವರೆಗೆ 63 ವಿಮಾನಗಳಲ್ಲಿ 13,300 ಭಾರತೀಯರನ್ನು ಭಾರತಕ್ಕೆ ಹಿಂದೆ ರೆ ತರಲಾಗಿದೆ ಎಂದು ಅದು ತಿಳಿಸಿದೆ.

  ‘‘ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ವಾಪಸ್ ಕರೆ ತರಲು ಮುಂದಿನ 24 ಗಂಟೆಗಳಲ್ಲಿ 13 ವಿಮಾನಗಳು ಕಾರ್ಯಾಚರಣೆ ನಡೆಸಲಿವೆ. ಈಗ ಮುಖ್ಯವಾಗಿ ಸುಮಿಯಿಂದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸಲು ಗಮನ ಕೇಂದ್ರೀಕರಿಸಲಾಗಿದೆ. ಇದಕ್ಕೆ ಹಲವು ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ ಎಂದು ಅದು ಹೇಳಿದೆ.

‘‘ಉಕ್ರೇನ್‌ನ ಸುಮಿಯಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ನಾವು ತೀವ್ರ ಆತಂಕಗೊಂಡಿದ್ದೇವೆ. ನಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ರೂಪಿಸಲು ಕೂಡಲೇ ಕದನ ವಿರಾಮ ಘೋಷಿಸುವಂತೆ ನಾವು ಹಲವು ವಿಧಾನದಲ್ಲಿ ರಶ್ಯ ಹಾಗೂ ಉಕ್ರೇನ್ಸರಕಾರವನ್ನು ಒತ್ತಾಯಿಸಿದ್ದೇವೆ’’ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಈ ಹಿಂದೆ ಟ್ವೀಟ್ ಮಾಡಿದ್ದರು.

ಈ ನಡುವೆ, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಪಿಸೋಚಿನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಭಾರತ ಸರಕಾರ ನಿಯೋಜಿಸಿದ 3 ಬಸ್‌ಗಳು ಈಗಾಗಲೇ ಅಲ್ಲಿಗೆ ತಲುಪಿವೆ. ಅವು ಶೀಘ್ರದಲ್ಲಿ ಪಶ್ಚಿಮಕ್ಕೆ ಸಾಗಲಿವೆ. ಇನ್ನೂ ಎರಡು ಬಸ್‌ಗಳು ಶೀಘ್ರದಲ್ಲಿ ಕಾರ್ಯಾಚರಣೆಯಲ್ಲಿ ಸೇರಿಕೊಳ್ಳಲಿವೆ. ನಮ್ಮ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದೊಯ್ಯಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶನಿವಾರ ಸುಮಿಯಲ್ಲಿರುವ ಸುಮಿ ಸರಕಾರಿ ವಿಶ್ವವಿದ್ಯಾನಿಲಯದಲ್ಲಿ ಸಿಲುಕಿಕೊಂಡಿರುವ 800 ವಿದ್ಯಾರ್ಥಿಗಳ ದೊಡ್ಡ ಗುಂಪೊಂದು ಭಾರತ ಸರಕಾರ ನಮ್ಮನ್ನು ಸುರಕ್ಷಿತವಾಗಿ ತೆರವುಗೊಳಿಸುತ್ತದೆ ಎಂದು ನಾವು ದೀರ್ಘ ಕಾಲ ಕಾಯುವ ಸ್ಥಿತಿಯಲ್ಲಿ ಇರಲಿಲ್ಲ. ಆದುದರಿಂದ ನಾವು ಜೀವವನ್ನು ಅಪಾಯಕ್ಕೆ ಒಡ್ಡಿ ರಶ್ಯದತ್ತ ನಡೆದುಕೊಂಡು ಹೋಗಲಿದ್ದೇವೆ ಎಂದು ತಿಳಿಸಿದೆ. ವೀಡಿಯೊವೊಂದರಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ನಿಂತ ವಿದ್ಯಾರ್ಥಿನಿಯೊಬ್ಬರು, ‘‘ನಾವು ಸುಮಿ ಸರಕಾರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು.

ಇದು 10ನೇ ದಿನದ ಯುದ್ಧ. ಎರಡು ನಗರಗಳಲ್ಲಿ ಮಾನವೀಯ ಕಾರಿಡಾರ್ ತೆರೆಯಲು ರಶ್ಯ ಕದನ ವಿರಾಮ ಘೋಷಿಸಿದೆ ಎಂಬ ಸುದ್ದಿಯನ್ನು ನಾವು ತಿಳಿದಿದ್ದೇವೆ. ಇಂದು ಬೆಳಗ್ಗಿನಿಂದ ನಾವು ಬಾಂಬ್, ಶೆಲ್ ದಾಳಿ ಹಾಗೂ ವಿಮಾನಗಳ ಹಾರಾಟದ ಶಬ್ದವನ್ನೇ ನಿರಂತರ ಕೇಳುತ್ತಿದ್ದೇವೆ. ನಮಗೆ ಭಯವಾಗುತ್ತಿದೆ. ನಾವು ಸಾಕಷ್ಟು ಕಾದಿದ್ದೇವೆ. ಇನ್ನು ಕಾಯಲು ಸಾಧ್ಯವಿಲ್ಲ.

ನಾವು ಜೀವ ಒತ್ತೆ ಇರಿಸಿ ಗಡಿಯತ್ತ ತೆರಳುತ್ತಿದ್ದೇವೆ. ಒಂದು ವೇಳೆ ನಮಗೆ ಏನಾದರೂ ಆದರೆ, ಸಂಪೂರ್ಣ ಜವಾಬ್ದಾರಿ ಸರಕಾರ ಹಾಗೂ ರಾಯಭಾರ ಕಚೇರಿಯದ್ದು. ಒಂದು ವೇಳೆ ನಮ್ಮಲ್ಲಿ ಯಾರಿಗಾದರೂ ಒಬ್ಬರಿಗೆ ಏನಾದರೂ ಆದರೆ, ಮಿಷನ್ ಗಂಗಾ ಅತಿ ದೊಡ್ಡ ವಿಫಲತೆ ಎಂದು ಹೇಳಬೇಕಾಗುತ್ತದೆ’’ ಎಂದು ಹೇಳುವುದು ಕಂಡು ಬಂದಿದೆ.

ಭಾರತೀಯರಿಗೆ ನೆರವಾಗದ ‘ಮಾನವೀಯ ಕಾರಿಡಾರ್’

ರಶ್ಯ ಶನಿವಾರ ಎರಡು ನಗರಗಳಲ್ಲಿ ಕದನ ವಿರಾಮ ಘೋಷಿಸಿದೆ. ಅಲ್ಲದೆ, ಮರಿವುಪೋಲ್ ಹಾಗೂ ವೋಲ್ನೊನಾಖಾ ನಗರದಿಂದ ನಾಗರಿಕರು ತೆರಳಲು ‘ಮಾನವೀಯ ಕಾರಿಡರ್’ ಆರಂಭಿಸಲಾಗಿದೆ ಎಂದು ಹೇಳಿದೆ. ಆದರೆ, ಪೂರ್ವ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರು ಈ ‘ಮಾನವೀಯ ಕಾರಿಡಾರ್’ ಅನ್ನು ಬಳಸಲು ಸಾಧ್ಯವಾಗುತ್ತಿಲ್ಲ.

ರಶ್ಯ ಕದನ ವಿರಾಮ ಉಲ್ಲಂಘಿಸಿದೆ ಹಾಗೂ ಶೆಲ್ ದಾಳಿ ಮುಂದುವರಿಸಿದೆ. ಆದುದರಿಂದ ನಾಗರಿಕರನ್ನು ಸುರಕ್ಷಿತವಾಗಿ ತೆರವುಗೊಳಿಸಲು ‘ಮಾನವೀಯ ಕಾರಿಡರ್’ ಆರಂಭಿಸಲುಸಾಧ್ಯವಿಲ್ಲ ಎಂದು ಉಕ್ರೇನ್ ಹೇಳಿದೆ.

ಕೆಲವು ಭಾರತೀಯರು ಮಾತ್ರ ಉಕ್ರೇನ್‌ನ ಪಶ್ಚಿಮ ಗಡಿಗೆ ತೆರಳಲು ಸಾಧ್ಯವಾಗಿದೆ. ರಶ್ಯದೊಂದಿಗಿನ ಪೂರ್ವ ಗಡಿಗೆ ತೆರಳಲು ಸಾಧ್ಯವಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X