Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಕ್ರೇನ್‍ ನಿಂದ ಮರಳಿದ ವಿದ್ಯಾರ್ಥಿಗಳಿಗೆ...

ಉಕ್ರೇನ್‍ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಶಿಕ್ಷಣ ನೀಡಲಿ: ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 March 2022 1:07 PM IST
share
ಉಕ್ರೇನ್‍ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಶಿಕ್ಷಣ ನೀಡಲಿ: ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಮಾ.7: 'ಆಪರೇಷನ್‌ ಗಂಗಾ' ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಶ್ಯ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ  ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

2,65,720 ಕೋಟಿ ರೂ.ಗಳಷ್ಟು ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್‌ ಮೂಲಕ 50 ಶೇ. ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ ಎಂದವರು ಹೇಳಿದ್ದಾರೆ.

ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. 'ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ' ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

'ಆಪರೇಷನ್‌ ಗಂಗಾ' ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. 1/5

— H D Kumaraswamy (@hd_kumaraswamy) March 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X