Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಳಂದ ಪ್ರಕರಣ: 165 ಅಮಾಯಕ ಜನರ ಬಂಧನ;...

ಆಳಂದ ಪ್ರಕರಣ: 165 ಅಮಾಯಕ ಜನರ ಬಂಧನ; ಜಾಯಿಂಟ್ ಆ್ಯಕ್ಷನ್ ಕಮಿಟಿ ಆರೋಪ

''ಸಂಘಪರಿವಾರದ ವ್ಯವಸ್ಥಿತ ಷಡ್ಯಂತ್ರ''

ವಾರ್ತಾಭಾರತಿವಾರ್ತಾಭಾರತಿ7 March 2022 2:49 PM IST
share
ಆಳಂದ ಪ್ರಕರಣ: 165 ಅಮಾಯಕ ಜನರ ಬಂಧನ; ಜಾಯಿಂಟ್ ಆ್ಯಕ್ಷನ್ ಕಮಿಟಿ ಆರೋಪ

ಕಲಬುರಗಿ: ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದ ಆವರಣದಲ್ಲಿ ನಡೆದ ಘಟನೆಗೆ ಜಿಲ್ಲಾಡಳಿತ ಹಾಗೂ ಪೊಲೀಸರ ವರ್ತನೆಯಿಂದಾಗಿ ಅಲ್ಲಿನ ಭದ್ರತೆ ವೈಫಲ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಮುಸ್ಲಿಂ ಪೊಲಿಟಿಕಲ್ ಫೋರಂನ ರಾಜ್ಯ ಕಾರ್ಯದರ್ಶಿ ಸಿರಾಜ್ ಜಾಫ್ರೀ ಅವರು ಆರೋಪಿಸಿದ್ದಾರೆ. 

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಜಾಯಿಂಟ್ ಆ್ಯಕ್ಷನ್ ಕಮಿಟಿ ನಿಯೋಗದ ಒಕ್ಕೂಟದಿಂದ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದ ಬಿಜೆಪಿಯ ಸಂಸದ ಹಾಗೂ ಶಾಸಕರ  ಕುಮ್ಮಕ್ಕಿನಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಮಾರ್ಚ್ 1 ರಂದು ಅಹಿತಕ ಘಟನೆಗೆ ಕಾರಣವಾಗಿದೆ. ಇದು ಬಿಜೆಪಿ ಹಾಗೂ ಆರೆಸ್ಸೆಸ್ ಸಂಘಟನೆಗಳ ಕಾರ್ಯಕರ್ತರ ಪೂರ್ವ ನಿಯೋಜಿತ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಅಸಮಾಧಾನ ಹೊರಹಾಕಿದರು. 

ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸದೇ ನೈತಿಕ ಕಾರ್ಯನಿರ್ವಹಿಸಿ ಬಿಜೆಪಿಯ ಕೇಂದ್ರ ಸಚಿವ, ಶಾಸಕರ ಹಾಗೂ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದು ಒಂದೆ ಧರ್ಮಿಯರ 165ಕ್ಕೂ ಹೆಚ್ಚಿನ ಅಮಾಯಕರನ್ನು ಬಂಧಿಸಿರುವುದು ಪೊಲೀಸರ ಲೋಪ ಎದ್ದು ಕಾಣುತ್ತದೆ ಎಂದರು. 

ಫೆ. 25 ರಂದು ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಿದ್ದಾರೆ, ಅಲ್ಲದೇ ಹಿಂದೂಪರ ಸಂಘಟನೆಗಳ ಪ್ರಮುಖರಾದ ಪ್ರಮೋದ್ ಮುತಾಲಿಕ್, ಆಂದೋಲಾಶ್ರೀ ಸಿದ್ಧಲಿಂಗ ಸ್ವಾಮೀಜಿ ಹಾಗೂ ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧಿಸಿದ್ದಾರೆ. ಈ ಕುರಿತು ಆಳಂದದಲ್ಲಿ 144 ಸೆಕ್ಷನ್ ನಿಷೇಧ ಹೇರಿದರೂ ಆಡಳಿತ ಪಕ್ಷದ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಸ್ಥಳೀಯ ಬಿಜೆಪಿ ಶಾಸಕರನ್ನು ದರ್ಗಾದ ಆವರಣದಲ್ಲಿ ಸೇರಿ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸಿದ್ದವಿಲ್ಲ, ಬದಲಾಗಿ ಅಮಾಯಕರನ್ನು ಗುರಿಯಾಗಿಸಿ ಪ್ರಕರಣ ದಾಖಲಿಸಿರುವುದು ಜ್ವೈಂಟ್ ಆ್ಯಕ್ಷನ್ ಕಮಿಟಿ ಕಠೋರವಾಗಿ ಖಂಡಿಸುತ್ತದೆ ಎಂದರು. 

144 ಸೆಕ್ಷನ್ ವಿಧಿಸಿದರೂ ಅತ್ತ ಪಾದಯಾತ್ರೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನೆ ನೀಡುತ್ತಿರುವುದು ಜಿಲ್ಲಾಡಳಿತ ಗಮನಿಸಿಲ್ಲ, ಆ ಕೂಡಲೇ ಅವರ ವಿರುದ್ಧವೂ ಪ್ರಕರಣ ದಾಖಲಿಸಿ ಭದ್ರತೆ ಕಾಪಾಡಬಹುದಿತ್ತು, ಆದರೆ ಆ ಕೆಲಸ ಮಾಡಿಲ್ಲ ಎಂದು ಹೇಳಿದ ಅವರು, ಸರ್ಕಾರಿ ವಾಹನಗಳಿಗೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳನ್ನು  ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು,  ಉಳಿದ ಅಮಾಯಕರನ್ನು ಬಿಡುಗಡೆಗೊಳಿಸಬೇಕೆಂದು ಈ ವೇಳೆ ಆಗ್ರಹಿಸಿದರು. 

ಈ ಪ್ರಕರಣಕ್ಕೆ ಒಂದು ವೇಳೆ 144 ಸೆಕ್ಷನ್ ಉಲ್ಲಂಘಿಸಿದ ಸಂಸದ, ಶಾಸಕರ ಮೇಲೆ ಪ್ರಕರಣ ದಾಖಲಿಸಿ ಬಂಧಿಸದಿದ್ದರೆ, ಕಾನೂನು ದುರ್ಬಳಕೆ ಮಾಡಿಕೊಂಡ ವಿವಿಧ ಅಧಿಕಾರಿಗಳ ವಿರುದ್ಧ ನೇರವಾಗಿ ಹೈಕೋರ್ಟ್‍ಗೆ ದೂರು ಕೊಡಲಿದ್ದೇವೆಂದು ಸಿರಾಜ್ ಜಾಫ್ರೀ ಎಚ್ಚರಿಸಿದರು. 

ಈ ಸಂದರ್ಭದಲ್ಲಿ ಸೈಯ್ಯದ್ ಅಝರ್ ಅಲಿ, ರಹೀಮ್ ಪಟೇಲ್, ಎಂ.ಡಿ ನೂಹ್, ಅಫ್ಜಲ್ ಮಹಮ್ಮದ್, ಮಝರ್ ಹುಸೈನ್, ಶಾಹೀದ್ ನಾಸೀರ್ ಹಾಗೂ ಜಾಯಿಂಟ್ ಆ್ಯಕ್ಷನ್ ಕಮಿಟಿ ನಿಯೋಗದ ಸದಸ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X