Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೇನ್ ವಾರ್ನ್ ʼಅತ್ಯುತ್ತಮ ಸ್ಪಿನ್...

ಶೇನ್ ವಾರ್ನ್ ʼಅತ್ಯುತ್ತಮ ಸ್ಪಿನ್ ಬೌಲರ್ʼ ಎಂದು ಹೇಳುವುದಿಲ್ಲ ಎಂದ ಗಾವಸ್ಕರ್: ಸಾಮಾಜಿಕ ತಾಣದಾದ್ಯಂತ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 March 2022 8:05 PM IST
share
ಶೇನ್ ವಾರ್ನ್ ʼಅತ್ಯುತ್ತಮ ಸ್ಪಿನ್ ಬೌಲರ್ʼ ಎಂದು ಹೇಳುವುದಿಲ್ಲ ಎಂದ ಗಾವಸ್ಕರ್: ಸಾಮಾಜಿಕ ತಾಣದಾದ್ಯಂತ ಆಕ್ರೋಶ

ಹೊಸದಿಲ್ಲಿ: ಆಸ್ಟ್ರೇಲಿಯಾ ಕ್ರಿಕೆಟಿಗ ಶೇನ್ ವಾರ್ನ್ ಅವರ ಅಕಾಲಿಕ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್, ತಮ್ಮ ಮಾತಿನ ನಡುವೆ ಶೇನ್ ವಾರ್ನ್ ಅವರು ಕ್ರಿಕೆಟ್ ಜಗತ್ತಿಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರಾದರೂ ಅವರು ಸಾರ್ವಕಾಲಿಕ ಮಹಾನ್ ಸ್ಪಿನ್ ಬೌಲರ್ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವಿವಾದಕ್ಕೆ ತುತ್ತಾಗಿದೆ.

ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡಿದ ಅವರು "ಭಾರತೀಯ ಸ್ಪಿನ್ನರ್‍ಗಳು ಹಾಗೂ ಮುತ್ತಯ್ಯ ಮುರಳೀಧರನ್ ಶೇನ್ ಅವರಿಗಿಂತ ಉತ್ತಮ ಸ್ಪಿನ್ ಬೌಲರ್‍ಗಳಾಗಿದ್ಧಾರೆ" ಎಂದು ಹೇಳಿದ್ದಾರೆ.

"ಭಾರತದ ವಿರುದ್ಧ ಶೇನ್ ವಾರ್ನ್ ಸಾಧನೆಯನ್ನು ನೋಡಿ, ಅದು ಸಾಮಾನ್ಯವಾಗಿದೆ" ಎಂದು ಗಾವಸ್ಕರ್ ಹೇಳಿದ್ದಾರೆ. ಇದೀಗ ಅವರು ಮತ್ತೊಂದು ವೀಡಿಯೊದಲ್ಲಿ, "ತಾನು ಈ ಹೇಳಿಕೆ ನೀಡಿರುವ ಸಮಯ, ಸಂದರ್ಭ ಸರಿಯಾದುದಲ್ಲ" ಎಂದು ಅಚಾತುರ್ಯವನ್ನು ಒಪ್ಪಿಕೊಂಡಿದ್ದಾರೆ.

"ಸ್ಪಿನ್ ಬೌಲರ್ ಗಳ ವಿರುದ್ಧ ಉತ್ತಮವಾಗಿ ಆಡುವ ಭಾರತೀಯ ಆಟಗಾರರ ವಿರುದ್ಧ ಶೇನ್ ಅವರಿಗೆ ಸಾಕಷ್ಟು ಯಶಸ್ಸು ದೊರೆತಿರಲಿಲ್ಲ.ಅವರನ್ನು ಅತ್ಯುತ್ತಮ ಸ್ಪಿನ್ ಬೌಲರ್ ಎಂದು ಹೇಳುವುದಿಲ್ಲ. ಭಾರತದ ವಿರುದ್ಧ ಬಹಳಷ್ಟು ಯಶಸ್ಸು ಪಡೆದ ಮುತ್ತಯ್ಯ ಮುರಳೀಧರನ್ ನನ್ನ ಪ್ರಕಾರ ಅವರಿಗಿಂತ ಉತ್ತಮ ಬೌಲರ್" ಎಂದು ಗಾವಸ್ಕರ್ ಹೇಳಿದರು.

"ಅವರು ಜೀವನವನ್ನು ಸಂಪೂರ್ಣವಾಗಿ ಆನಂದಿಸುವವರಾಗಿದ್ದರು ಹಾಗೂ ಅವರು ಅದೇ ರೀತಿ ಜೀವಿಸಿದರು, ಪ್ರಾಯಶಃ ಅದನ್ನು ಅವರ ಹೃದಯಕ್ಕೆ ತಾಳಿಕೊಳ್ಳಲು ಸಾಧ್ಯವಾಗಲಿಲ್ಲ ಹಾಗೂ ಅವರು ಬಹಳ ಬೇಗನೇ ನಮ್ಮನ್ನು ಅಗಲಿದರು" ಎಂದು ಗಾವಸ್ಕರ್ ಹೇಳಿದರು.

ಆದರೆ ಗಾವಸ್ಕರ್ ಅವರ ಹೇಳಿಕೆಗಳು ಶೇನ್ ವಾರ್ನ್ ಅವರ ಅಭಿಮಾನಿಗಳಿಗೆ ಅಸಮಾಧಾನವುಂಟು ಮಾಡಿದ್ದು ಹಲವರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

There’s a time and a place… this wasn’t it.

Indian legend slammed for ‘shameful’ Warne claim >>> https://t.co/kyPYvk4oqE pic.twitter.com/HwLEGSEOA5

— Fox Cricket (@FoxCricket) March 7, 2022

Really shameful act from Gavaskar but not shocking. He's been passing shameful comments since quite a long time. Now change the name Border-Gavaskar trophy https://t.co/0ivWRDDj1r

— Pallavi paul (@PallaviPaul20) March 7, 2022

So, SMG agrees that it wasn't the appropriate time to answer such a question & such comparisons.

- Instagram/Sunil Gavaskar pic.twitter.com/c4BvNqlfBb

— Moinak Das (@d_moinak) March 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X