ಕಸಾಪ ಉಡುಪಿ ತಾಲೂಕು ಘಟಕದ ಪದಗ್ರಹಣ
ಉಡುಪಿ, ಮಾ.8: ಕಸಾಪ ಉಡುಪಿ ತಾಲೂಕು ಘಟಕದ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಮಾ.12ರಂದು ಸಂಜೆ 6.30ಕ್ಕೆ ಉಡುಪಿ ಗುಂಡಿಬೈಲ್ನಲ್ಲಿರುವ ಬ್ರಾಹ್ಮಿ ಸಭಾಭವನದಲ್ಲಿ ಜರಗಲಿದೆ.
ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸ ಲಿರುವರು. ಮನೋವೈದ್ಯ ಡಾ.ಪಿ.ವಿ. ಭಂಡಾರಿ ಉದ್ಘಾಟಿಸಲಿರುವರು. ಮಣಿಪಾಲ ಯುನಿವರ್ಸಲ್ ಪ್ರೆಸ್ನ ಪ್ರಧಾನ ಸಂಪಾದಕಿ ಪ್ರೊ.ನೀತಾ ಇನಾಂದಾರ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story