Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಯಾಣ ಮಂಟಪ ಬುಕಿಂಗ್ ರದ್ದು:...

ಕಲ್ಯಾಣ ಮಂಟಪ ಬುಕಿಂಗ್ ರದ್ದು: ಶೇ.10ರಷ್ಟು ಮುಂಗಡ ಮಾತ್ರ ಕಡಿತಕ್ಕೆ ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ8 March 2022 6:38 PM IST
share
ಕಲ್ಯಾಣ ಮಂಟಪ ಬುಕಿಂಗ್ ರದ್ದು: ಶೇ.10ರಷ್ಟು ಮುಂಗಡ ಮಾತ್ರ ಕಡಿತಕ್ಕೆ ಕೋರ್ಟ್ ಆದೇಶ

ಬೆಂಗಳೂರು, ಮಾ.8: ಕಲ್ಯಾಣ ಮಂಟಪಗಳನ್ನು ಮದುವೆ ಸಮಾರಂಭಗಳಿಗಾಗಿ ಕಾಯ್ದಿರಿಸಿ, ಕಾರಣಾಂತರಗಳಿಂದ ಸಮಾರಂಭ ರದ್ದಾದಾಗ ಮುಂಗಡ ಹಣದಲ್ಲಿ ಶೇ.10ರಷ್ಟು ಮಾತ್ರವೇ ಕಡಿತಗೊಳಿಸಬೇಕು ಎಂದು ನಗರದ ಗ್ರಾಹಕರ ಹಕ್ಕುಗಳ ವೇದಿಕೆ ತೀರ್ಪಿತ್ತಿದೆ.  

ಬೆಂಗಳೂರು ನಗರದ ಮಾಗಡಿ ರಸ್ತೆ ನಿವಾಸಿ ಎನ್.ಚಂದ್ರಶೇಖರ್ ಎಂಬುವರು ತಮ್ಮ ಪುತ್ರನ ವಿವಾಹಕ್ಕಾಗಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವೆಂಕಟೇಶ್ವರ ಸೇವಾ ಟ್ರಸ್ಟ್‍ನ ಕಲ್ಯಾಣ ಮಂಟಪವನ್ನು 2020ರ ಎಪ್ರಿಲ್ 5 ಮತ್ತು 6ಕ್ಕೆ ಕಾಯ್ದಿರಿಸಿದ್ದರು. ಜತೆಗೆ ಮುಂಗಡವಾಗಿ 1.47 ಲಕ್ಷ ರೂ. ಪಾವತಿ ಮಾಡಿದ್ದರು. ಆದರೆ, ಕೊರೋನ ಕಾರಣದಿಂದ ಮದುವೆ ರದ್ದುಗೊಳಿಸಲು ನಿರ್ಧರಿಸಿ ಮುಂಗಡವಾಗಿ ಪಾವತಿಸಿದ್ದ 1.47 ಲಕ್ಷ ರೂ. ಹಿಂದಿರುಗಿಸುವಂತೆ ಅವರು ಕೋರಿದ್ದರು.

ಇದರನ್ವಯ ಕಲ್ಯಾಣ ಮಂಟಪದ ಆಡಳಿತ ಮಂಡಳಿ 1.25 ಲಕ್ಷ ರೂ. ಹಿಂದಿರುಗಿಸಿದ್ದರು. ಉಳಿದ ಶೇ 18ರಷ್ಟು( 22 ಸಾವಿರ) ಹಣವನ್ನು ಸರಕಾರಕ್ಕೆ ತೆರಿಗೆ ಪಾವತಿ ಮಾಡಿರುವುದಾಗಿ ಹೇಳಿದ್ದರು. ಇದನ್ನು ಆಕ್ಷೇಪಿಸಿದ್ದ ದೂರುದಾರರು, ‘ಕಲ್ಯಾಣ ಮಂಟಪ ಕಾಯ್ದಿರಿಸಿದ ಬಳಿಕ ನಾವು ಸಭಾಂಗಣವನ್ನು ಬಳಕೆ ಮಾಡಿಲ್ಲ. ಹೀಗಾಗಿ, ತೆರಿಗೆ ಪಾವತಿಸುವ ಅಗತ್ಯವಿಲ್ಲ’ ಎಂದು ಹೇಳಿದ್ದರು. ಆಡಳಿತ ಮಂಡಳಿ ಈ ವಾದವನ್ನು ಒಪ್ಪಿರಲಿಲ್ಲ. 

ಈ ಸಂಬಂಧ ಚಂದ್ರಶೇಖರ್ ಸಲ್ಲಿಸಿದ್ದ ದೂರನ್ನು ಬೆಂಗಳೂರು ನಗರ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ಎಸ್.ಬೀಳಗಿ ಮತ್ತು ಸದಸ್ಯೆ ರೇಣುಕಾದೇವಿ ದೇಶಪಾಂಡೆ ಅವರಿದ್ದ ಪೀಠ ವಿಚಾರಣೆ ನಡೆಸಿ, ಬುಕಿಂಗ್ ಮಾಡಿದ ದಿನಾಂಕದಿಂದ 150 ದಿನಗಳ ಒಳಗಾಗಿ ಮದುವೆ ಸಮಾರಂಭವನ್ನು ರದ್ದು ಮಾಡಿದಾಗ ಮುಂಗಡ ಹಣದಲ್ಲಿ ಶೇ.10ರಷ್ಟು ಮಾತ್ರವೇ ಕಡಿತಗೊಳಿಸಬೇಕು. ಅಲ್ಲದೆ, ‘ಕಲ್ಯಾಣ ಮಂಟಪದ ಮಾಲಕರು 22 ಸಾವಿರ ಜಿಎಸ್‍ಟಿ ಪಾವತಿಸಿರುವ ಸಂಬಂಧ ದಾಖಲೆಗಳನ್ನು ಒದಗಿಸಿಲ್ಲ. ಹೀಗಾಗಿ, ಶೇ.18ರಷ್ಟು ಮೊತ್ತ ಕಡಿತ ಮಾಡಿರುವುದು ನಿಯಮ ಬಾಹಿರ. ಕೇವಲ ಶೇ.10ರಷ್ಟು ಮಾತ್ರವೇ ಕಡಿತ ಮಾಡಬೇಕಿತ್ತು. ಹೀಗಾಗಿ, ಇನ್ನುಳಿದ 7,700 ರೂ. ಮೊತ್ತವನ್ನು ದೂರುದಾರರಿಗೆ ಹಿಂದಿರುಗಿಸಬೇಕು ಎಂದು ದೂರನ್ನು ಭಾಗಶಃ ಪುರಸ್ಕರಿಸಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X