Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಎಣಿಕೆಗೆ ಮುನ್ನ ವಿವಿಪ್ಯಾಟ್ ಚೀಟಿಗಳ...

ಮತಎಣಿಕೆಗೆ ಮುನ್ನ ವಿವಿಪ್ಯಾಟ್ ಚೀಟಿಗಳ ಪರಿಶೀಲನೆ ಕೋರಿರುವ ಅರ್ಜಿ ಬುಧವಾರ ಸುಪ್ರೀಂನಲ್ಲಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ8 March 2022 8:14 PM IST
share
ಮತಎಣಿಕೆಗೆ ಮುನ್ನ ವಿವಿಪ್ಯಾಟ್ ಚೀಟಿಗಳ ಪರಿಶೀಲನೆ ಕೋರಿರುವ ಅರ್ಜಿ ಬುಧವಾರ ಸುಪ್ರೀಂನಲ್ಲಿ ವಿಚಾರಣೆ

ಹೊಸದಿಲ್ಲಿ,ಮಾ.8: ಮತ ಎಣಿಕೆಗೆ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ವಿವಿಪ್ಯಾಟ್ ಚೀಟಿಗಳ ಪರಿಶೀಲನೆಗೆ ನಿರ್ದೇಶ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಬುಧವಾರ ನಡೆಸಲಿದೆ.

ವಿವಿಪ್ಯಾಟ್ ಮತದಾರ ತನ್ನ ಮತವನ್ನು ಚಲಾಯಿಸಿದ ಬಳಿಕ ಅಭ್ಯರ್ಥಿಯ ಹೆಸರು,ಕ್ರಮಸಂಖ್ಯೆ ಮತ್ತು ಪಕ್ಷದ ಚಿಹ್ನೆಯನ್ನು ಮುದ್ರಿಸುವ ಯಂತ್ರವಾಗಿದೆ. ಚುನಾವಣಾ ವಂಚನೆಯನ್ನು ತಪ್ಪಿಸಲು ತಮ್ಮ ಮತವು ತಮ್ಮ ಆಯ್ಕೆಯ ಅಭ್ಯರ್ಥಿಗಳಿಗೆ ಬಿದ್ದಿದೆ ಎನ್ನುವುದನ್ನು ಮತದಾರರು ದೃಢಪಡಿಸಿಕೊಳ್ಳಲು ಯಂತ್ರವು ಮುದ್ರಿತ ಚೀಟಿಯನ್ನು ಏಳು ಸೆಕೆಂಡ್‌ಗಳ ಕಾಲ ಪ್ರದರ್ಶಿಸುತ್ತದೆ. ಬಳಿಕ ಚೀಟಿಯು ಲಾಕ್ ಮಾಡಿದ ಕಂಪಾರ್ಟ್‌ಮೆಂಟ್‌ಗೆ ಬೀಳುತ್ತದೆ ಮತ್ತು ಚುನಾವಣಾ ಏಜೆಂಟ್ ಮಾತ್ರ ಅದನ್ನು ನೋಡಬಹುದು.

ಆರ್‌ಟಿಐ ಕಾರ್ಯಕರ್ತ ರಾಕೇಶ ಕುಮಾರ ಸಲ್ಲಿಸಿರುವ ಅರ್ಜಿಯನ್ನು ಹಿರಿಯ ನ್ಯಾಯವಾದಿ ಮೀನಾಕ್ಷಿ ಅರೋರಾ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರೆದುರು ಬುಧವಾರ ತುರ್ತು ವಿಚಾರಣೆಗಾಗಿ ಉಲ್ಲೇಖಿಸಿದರು.

ಗೋವಾ,ಮಣಿಪುರ,ಉತ್ತರ ಪ್ರದೇಶ,ಉತ್ತರಾಖಂಡ ಮತ್ತು ಪಂಜಾಬಗಳಲ್ಲಿ ಮತಗಳ ಎಣಿಕೆಯು ಗುರುವಾರ ನಡೆಯಲಿದೆ.
 ‌
ಪ್ರಸ್ತುತ ಮತ ಎಣಿಕೆಯ ಬಳಿಕವಷ್ಟೇ ವಿವಿಪ್ಯಾಟ್ ಚೀಟಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಇದು ಪ್ರಕ್ರಿಯೆಯನ್ನು ವಿವಾದಾಸ್ಪದವಾಗಿಸುತ್ತದೆ. ಮತ ಎಣಿಕೆ ಮುಗಿದ ಬಳಿಕ ಎಲ್ಲ ಚುನಾವಣಾ ಏಜೆಂಟರು ಅಲ್ಲಿಂದ ತೆರಳಿರುತ್ತಾರೆ,ಹೀಗಾಗಿ ಯಾವುದೇ ಪಾರದರ್ಶಕತೆ ಇರುವುದಿಲ್ಲ. ಮತ ಎಣಿಕೆಗೆ ಮುನ್ನ ಏಜೆಂಟರು, ಪಕ್ಷಗಳು ಮತ್ತು ಅಭ್ಯರ್ಥಿಗಳು ಉಪಸ್ಥಿತರಿದ್ದಾಗಲೇ ವಿವಿಪ್ಯಾಟ್ ಚೀಟಿಗಳ ಪರಿಶಲನೆಯನ್ನು ನಡೆಸಬೇಕು ಎಂದು ಅರೋರಾ ವಾದಿಸಿದರು.

ಮತ ಎಣಿಕೆಗೆ ಕೇವಲ ಎರಡು ದಿನಗಳು ಬಾಕಿಯಿರುವಾಗ ಅರ್ಜಿಯನ್ನು ಸಲ್ಲಿಸಿದ್ದೇಕೆ? ನೀವು ಕೊನೆಯ ಕ್ಷಣದಲ್ಲಿ ನ್ಯಾಯಾಲಯಕ್ಕೆ ಬಂದರೆ ನಾವು ನೆರವಾಗುವುದಾದರೂ ಹೇಗೆ? ನಾಡಿದ್ದೇ ಮತಗಳ ಎಣಿಕೆ ನಡೆಯಲಿದೆ. ನಾವು ನಾಳೆ ವಿಚಾರಣೆ ನಡೆಸಿದರೂ ನಿರ್ದೇಶವನ್ನು ಹೊರಡಿಸುವುದು ಹೇಗೆ ಎಂದು ನ್ಯಾ.ರಮಣ ಪ್ರಶ್ನಿಸಿದರು.

ಪ್ರಕರಣದಲ್ಲಿ ಚುನಾವಣಾ ಆಯೋಗವನ್ನು ಕಕ್ಷಿಯನ್ನಾಗಿ ಮಾಡಬಹುದು ಎಂಬ ಅರೋರಾರ ಸಲಹೆಯನ್ನು ಒಪ್ಪಿಕೊಂಡ ಸರ್ವೋಚ್ಚ ನ್ಯಾಯಾಲಯವು,ಬುಧವಾರದ ವಿಚರಣೆ ಸಂದರ್ಭ ಹಾಜರಿರುವಂತೆ ಆಯೋಗಕ್ಕೆ ನಿರ್ದೇಶ ನೀಡಿತು.

 ವಿವಿಪ್ಯಾಟ್ ಪರಿಶೀಲನೆಯನ್ನು ನಡೆಸಲಾಗುವ ವಿಧಾನಸಭಾ ಕ್ಷೇತ್ರದಲ್ಲಿಯ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ. 2019ರ ಪ್ರಕರಣವೊಂದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಿರ್ದೇಶದಂತೆ ಪ್ರಸ್ತುತ ವಿಧಾನಸಭಾ ಕ್ಷೇತ್ರದಲ್ಲಿಯ ಐದು ಮತಗಟ್ಟೆಗಳನ್ನು ವಿವಿಪ್ಯಾಟ್ ಚೀಟಿಗಳ ಪರಿಶೀಲನೆಗಾಗಿ ಯಾದ್ರಚ್ಛಿಕವಾಗಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿದಾರರು ಮತಗಟೆಗಳ ಸಂಖ್ಯೆಯನ್ನು 25ಕ್ಕೆ ಅಥವಾ ವಿಧಾನಸಭಾ ವಿಭಾಗದ ಅನುಪಾತಕ್ಕೆ ಅನುಗುಣವಾಗಿ ಹೆಚ್ಚಿಸುವಂತೆ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X