Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿಗಳಿಂದ 29 ಮಹಿಳೆಯರಿಗೆ ‘ನಾರಿ...

ರಾಷ್ಟ್ರಪತಿಗಳಿಂದ 29 ಮಹಿಳೆಯರಿಗೆ ‘ನಾರಿ ಶಕ್ತಿ ಪುರಸ್ಕಾರ’ಗಳ ಪ್ರದಾನ‌

ವಾರ್ತಾಭಾರತಿವಾರ್ತಾಭಾರತಿ8 March 2022 11:26 PM IST
share
ರಾಷ್ಟ್ರಪತಿಗಳಿಂದ 29 ಮಹಿಳೆಯರಿಗೆ ‘ನಾರಿ ಶಕ್ತಿ ಪುರಸ್ಕಾರ’ಗಳ ಪ್ರದಾನ‌

ಹೊಸದಿಲ್ಲಿ,ಮಾ.8: ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಂಗಳವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 2020 ಮತ್ತು 2021ರಲ್ಲಿ ಅತ್ಯುತ್ತಮ ಸಾಧನೆಗಳನ್ನು ಪ್ರದರ್ಶಿಸಿರುವ 29 ಮಹಿಳೆಯರಿಗೆ ‘ನಾರಿ ಶಕ್ತಿ ಪುರಸ್ಕಾರ’ಗಳನ್ನು ಪ್ರದಾನಿಸಿದರು.

2020 ಮತ್ತು 2021ಕ್ಕೆ ತಲಾ 14ರಂತೆ ಒಟ್ಟು 28 ಪ್ರಶಸ್ತಿಗಳನ್ನು ಮಹಿಳೆಯರ,ವಿಶೇಷವಾಗಿ ದುರ್ಬಲರು ಮತ್ತು ಶೋಷಿತರ ಸಬಲೀಕರಣಕ್ಕಾಗಿ ಅವರ ಅಸಾಧಾರಣ ಕಾರ್ಯಗಳನ್ನು ಗುರುತಿಸಿ ಪ್ರದಾನಿಸಲಾಗಿದೆ.

ನಾರಿ ಶಕ್ತಿ ಪುರಸ್ಕಾರವು ವ್ಯಕ್ತಿಗಳ ಮತ್ತು ಸಂಸ್ಥೆಗಳ ಅಸಾಧಾರಣ ಕೊಡುಗೆಯನ್ನು ಗುರುತಿಸಲು ಹಾಗೂ ಮಹಿಳೆಯರನ್ನು ಗೇಮ್-ಚೇಂಜರ್‌ಗಳಾಗಿ ಮತ್ತು ಸಮಾಜದಲ್ಲಿ ಧನಾತ್ಮಕ ಬದಲಾವಣೆಗಾಗಿ ವೇಗವರ್ಧಕರನ್ನಾಗಿ ಸಂಭ್ರಮಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಉಪಕ್ರಮವಾಗಿದೆ.

ಉದ್ಯಮಶೀಲತೆ,ಕೃಷಿ,ನವೀನತೆ,ಸಾಮಾಜಿಕ ಕಾರ್ಯ,ಶಿಕ್ಷಣ ಮತ್ತು ಸಾಹಿತ್ಯ,ಭಾಷಾಶಾಸ್ತ್ರ,ಕಲೆ ಮತ್ತು ಕರಕೌಶಲ್ಯ,ವಿಜ್ಞಾನ,ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ (ಎಸ್‌ಟಿಇಎಂ),ಅಂಗವಿಕಲರ ಹಕ್ಕುಗಳು,ವಾಣಿಜ್ಯ ನೌಕಾಪಡೆ ಹಾಗೂ ವನ್ಯಜೀವಿ ಸಂರಕ್ಷಣೆಯಂತಹ ಕ್ಷೇತ್ರಗಳಿಗೆ ಸೇರಿದವರಿಗೆ ಈ ಪುರಸ್ಕಾರಗಳನ್ನು ನೀಡಲಾಗುತ್ತದೆ.

ಮಂಗಳವಾರ ಪುರಸ್ಕಾರಕ್ಕೆ ಭಾಜನರಾದವರಲ್ಲಿ ಉದ್ಯಮಿ ಅನಿತಾ ಗುಪ್ತಾ, ಸಾವಯವ ರೈತ ಮಹಿಳೆ ಮತ್ತು ಬುಡಕಟ್ಟು ಕಾರ್ಯಕರ್ತೆ ಉಷಾಬೆನ್ ದಿನೇಶಭಾಯಿ ವಸಾವಾ, ಹೊಸತನದ ಅನ್ವೇಷಕಿ ನಾಸಿರಾ ಅಖ್ತರ್,‌ ಇಂಟೆಲ್ ಇಂಡಿಯಾದ ಮುಖ್ಯಸ್ಥೆ ನಿವೃತಿ ರಾಯ್,ಡೌನ್ ಸಿಂಡ್ರೋಮ್ ಪೀಡಿತ ಕಥಕ್ ನರ್ತಕಿ ಸಾಯಿಲೀ ನಂದಕಿಶೋರ ಅಗವಾನೆ,ಮೊದಲ ಮಹಿಳಾ ಉರಗ ಸಂರಕ್ಷಕಿ ವನಿತಾ ಜಗದೇವ್ ಬೊರಾಡೆ ಮತ್ತು ಗಣಿತಜ್ಞೆ ನೀನಾ ಗುಪ್ತಾ ಸೇರಿದ್ದಾರೆ.

ಸೋಮವಾರ ಈ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರು,‘ವೋಕಲ್ ಫಾರ್ ಲೋಕಲ್’ನಂತಹ ಸರಕಾರದ ಪ್ರಯತ್ನಗಳ ಯಶಸ್ಸು ಮಹಿಳೆಯರ ಕೊಡುಗೆಯನ್ನು ಅವಲಂಬಿಸಿದೆ. ಎಲ್ಲ ಮಹಿಳೆಯರು ತಮ್ಮ ಕುಟುಂಬ ಮಟ್ಟದಲ್ಲಿ ನಿರ್ಧಾರ ಕೈಗೊಳುವ ಪ್ರಕ್ರಿಯೆಯ ಭಾಗವಾಗಿರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ ಮತ್ತು ಇದು ಅವರ ಆರ್ಥಿಕ ಸಬಲೀಕರಣದಿಂದ ಸಾಧ್ಯವಾಗುತ್ತದೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X