ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಗೆ ಜೀವ ಬೆದರಿಕೆ: ದೂರು ದಾಖಲು

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಾಗಿದೆ.
ಹರ್ಷ ಹತ್ಯೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಹಿನ್ನಲೆಯಲ್ಲಿ ಫೆ.21ರಂದು ಬೆದರಿಕೆಯ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಡಿ.ಎಸ್.ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಅಲ್ಲದೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಬೆದರಿಕೆ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





