Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಜರಾತ್, ರಾಜಸ್ಥಾನ ಹೆಚ್ಚು ಹಿಂದುಳಿದ...

ಗುಜರಾತ್, ರಾಜಸ್ಥಾನ ಹೆಚ್ಚು ಹಿಂದುಳಿದ ರಾಜ್ಯಗಳು: ಸಚಿವ ಮಾಧುಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 March 2022 6:19 PM IST
share
ಗುಜರಾತ್, ರಾಜಸ್ಥಾನ ಹೆಚ್ಚು ಹಿಂದುಳಿದ ರಾಜ್ಯಗಳು: ಸಚಿವ ಮಾಧುಸ್ವಾಮಿ

ಬೆಂಗಳೂರು, ಮಾ. 9: ‘ಗುಜರಾತ್ ಮತ್ತು ರಾಜಸ್ಥಾನ ಹೆಚ್ಚು ಮರುಭೂಮಿ ಹೊಂದಿದ್ದು, ಹಿಂದುಳಿದ ರಾಜ್ಯಗಳಾಗಿವೆ' ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ 2022-23ನೆ ಸಾಲಿನ ಆಯವ್ಯಯದ ಮೇಲಿನ ಚರ್ಚೆಯ ವೇಳೆ ‘ಕೇಂದ್ರ ಅನುದಾನದ ತಾರತಮ್ಯ ಮಾಡಲಾಗುತ್ತಿದೆ' ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಹಿಂದುಳಿದ ರಾಜ್ಯಗಳ ಅಭಿವೃದ್ದಿಗೆ ಕೇಂದ್ರ ಸರಕಾರ ಹೆಚ್ಚು ಅನುದಾನ ನೀಡುತ್ತದೆ. ಎಲ್ಲರಿಗೂ ಸಮಾನವಾಗಿ ಹಂಚಬೇಕೆಂಬ ನಿಯಮವೇನು ಇಲ್ಲ, ಅದನ್ನು ಸಂವಿಧಾನದಲ್ಲಿಯೂ ಉಲ್ಲೇಖಿಸಿಲ್ಲ' ಎಂದು ಹೇಳಿದರು.

ಈ ಹಂತದಲ್ಲಿ ಮಧ್ಯೆಪ್ರವೇಶಿಸಿದ ಜೆಡಿಎಸ್‍ನ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ, ‘ಗುಜರಾತ್ ರಾಜ್ಯವೂ ಅತಿ ಹಿಂದುಳಿದಿದೆಯೇ? ಅದಕ್ಕೆ ಹೆಚ್ಚು ಅನುದಾನ ಕೊಡುತ್ತಿಲ್ಲವೇ?’ ಎಂದು ಪ್ರಶ್ನಿಸಿದರು. ‘ಹೌದು ಗುಜರಾತ್ ಹಿಂದುಳಿದ ರಾಜ್ಯವೇ. ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೆಚ್ಚು ಮರುಭೂಮಿ ಪ್ರದೇಶವಿದೆ' ಎಂದು ಮಾಧುಸ್ವಾಮಿ ಸಮರ್ಥನೆ ನೀಡಿದರು.

ಈ ವೇಳೆ ಎದ್ದುನಿಂದ ಪ್ರತಿಪಕ್ಷ ಉಪನಾಯಕ ಯು.ಟಿ.ಖಾದರ್, ‘ಗುಜರಾತ್ ರಾಜ್ಯವನ್ನು ಮಾದರಿ ರಾಜ್ಯ. ದೇಶದಲ್ಲೆ ಉತ್ತಮ ರಾಜ್ಯ ಎಂದು ಹೇಳುತ್ತಿದ್ದರು’ ಎಂದು ಛೇಡಿಸಿದರು. ಆರಂಭದಲ್ಲೇ ಮಾತನಾಡಿದ ಕುಮಾರಸ್ವಾಮಿ, ‘ಕೇಂದ್ರದ ಅನುದಾನ ಹಂಚಿಕೆಯಲ್ಲಿ ಇಳಿಕೆಯಾಗಿದೆ. ಕೇಂದ್ರಕ್ಕೆ ಅನುಕಂಪ ತೋರಿಸಲು ರಾಜಸ್ವ ಕೊರತೆಯನ್ನು 14 ಸಾವಿರ ಕೋಟಿ ರೂ.ತೋರಿಸಲಾಗಿದೆಯೇ?’ ಎಂದು ಪ್ರಶ್ನಿಸಿದರು.

ಜಿಎಸ್ಟಿ ಜಾರಿ ಬಳಿಕ ರಾಜ್ಯಕ್ಕೆ ತೆರಿಗೆ ವಿಧಿಸುವ ಅವಕಾಶವೇ ಇಲ್ಲದಂತಾಗಿದೆ. ಎಲ್ಲವನ್ನು ಕೇಂದ್ರ ಸರಕಾರ ಪಡೆಯುತ್ತಿದ್ದು, ರಾಜ್ಯದಿಂದ ಸಂಗ್ರಹಿಸಿದ 100 ರೂ.ನಲ್ಲಿ ರಾಜ್ಯಕ್ಕೆ 40 ರೂ.ಗಳನ್ನಷ್ಟೇ ಕೇಂದ್ರ ಕೊಡುತ್ತದೆ. ಆದರೆ, ರಾಜಸ್ಥಾನ, ಗುಜರಾತ್ ಹಾಗೂ ಉತ್ತರಪ್ರದೇಶಕ್ಕೆ ಹೆಚ್ಚು ಅನುದಾನ ನೀಡುತ್ತದೆ. ಆ ರಾಜ್ಯಗಳ ಜನಸಂಖ್ಯೆ ಆಧರಿಸಿ ಕೊಡುತ್ತಿರಬಹುದು. ನಮ್ಮದು ಸಂಪತ್ಭರಿತ ರಾಜ್ಯ. ಸರಿಯಾಗಿ ತೆರಿಗೆ ಪಾವತಿಸುವುದೇ ಸರಿಯಲ್ಲ ಎಂಬ ಚರ್ಚೆ ಜನರಲ್ಲಿದೆ. ಕೇಂದ್ರ ಮಾಡುತ್ತಿರುವ ತಾರತಮ್ಯದಿಂದಾಗಿ ಈ ಭಾವನೆ ಬಂದಿದೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಗುಜರಾತ್ ಮಾಡೆಲ್.. ಸುಳ್ಳೆ?

‘ಗುಜರಾತ್ ರಾಜ್ಯವನ್ನು ಮಾದರಿ ರಾಜ್ಯ. ದೇಶದಲ್ಲೆ ಉತ್ತಮ ರಾಜ್ಯ ಎಂದು ಹೇಳುತ್ತಿದ್ದರು. ಹಾಗಾದರೆ ಅದು ಸುಳ್ಳೆ?’

-ಯು.ಟಿ.ಖಾದರ್, ಪ್ರತಿಪಕ್ಷ ಉಪನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X