Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ...

ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ: ಜಲತಜ್ಞ ರಾಜೇಂದ್ರ ಸಿಂಗ್

ವಾರ್ತಾಭಾರತಿವಾರ್ತಾಭಾರತಿ9 March 2022 9:04 PM IST
share
ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ: ಜಲತಜ್ಞ ರಾಜೇಂದ್ರ ಸಿಂಗ್

ಬೆಂಗಳೂರು, ಮಾ.9: ರಾಜ್ಯ ಸರಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾದರೆ, ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲವಾಗುತ್ತದೆ. ಅದರ ಬದಲಾಗಿ, ಇರುವ ನೀರಿನ ಮೂಲಗಳನ್ನು ವಿಕೇಂದ್ರೀಕರಿಸಿ ಉತ್ತಮವಾಗಿ ನಿರ್ವಹಣೆ ಮಾಡಿದಾಗ ನೀರಿನ ಅಭಾವ ತಗ್ಗುತ್ತದೆ ಎಂದು ಪರಿಸರವಾದಿ, ಜಲತಜ್ಞ ರಾಜೇಂದ್ರ ಸಿಂಗ್ ಹೇಳಿದ್ದಾರೆ.

ಬುಧವಾರ ನಗರದ ಪ್ರೆಸ್ ಕ್ಲಬ್‍ನಲ್ಲಿ ಕರ್ನಾಟಕ ನೆಲಜಲ ಪರಿಸರ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಎಂಬ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೊಸ ಅಣೆಕಟ್ಟುಗಳನ್ನು ಕಟ್ಟುವುದರಿಂದ ಯಾವುದೇ ಪ್ರಯೋಜವಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡ ಜನಸಾಮಾನ್ಯರ ಪರವಾಗಿ ಯೋಚನೆ ಮಾಡುತ್ತಿಲ್ಲ. ಬದಲಾಗಿ ಅಂಬಾನಿ, ಅದಾನಿಯಂತಹ ಶ್ರೀಮಂತರ ಪರವಾಗಿ ನಿಂತಿವೆ ಎಂದು ಹೇಳಿದರು. 

ನದಿಗಳ ಸುತ್ತಮುತ್ತ ಇರುವ ಜಾಗವನ್ನು ಭೂ ಮಾಫಿಯಾ ನುಂಗಿ ನೀರು ಕುಡಿದು ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಹಾಳಾಗಿದೆ. ಇದಕ್ಕೆ ಈಗಿನ ವ್ಯವಸ್ಥೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಸಾಮಾಜಿಕ ಹೋರಾಟಗಾರ, ನಟ ಚೇತನ್ ಮಾತನಾಡಿ, ನಾನು ಮೊದಲಿನಿಂದಲೂ ಮೇಕೆದಾಟು ಪರವಾಗಿದ್ದೇನೆ. ಆದರೆ, ಅಣೆಕಟ್ಟು ಕಟ್ಟುವುದರ ಬಗ್ಗೆ ನಮ್ಮ ವಿರೋಧವಿದೆ ಎಂದು ಹೇಳಿದರು. 

ಕೃಷಿಗೆ ಮತ್ತು ಕುಡಿಯುವ ನೀರಿಗೆ ಸರಕಾರಗಳು ಮಳೆಯ ನೀರಿಗೆ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸಿ ಇರುವ ಜಲಸಂಪನ್ಮೂಲವನ್ನು ವೈಜ್ಞಾನಿಕವಾಗಿ ಪೋಲಾಗದಂತೆ ತಡೆದು ಅವುಗಳಿಗೆ ಸರಿಯಾದ ರೂಪ ಕೊಟ್ಟರೆ ಸರಕಾರಕ್ಕೆ ಯಾವ ಅಣೆಕಟ್ಟುಗಳು ಅವಶ್ಯಕತೆ ಇರುವುದಿಲ್ಲ. ಬೆಂಗಳೂರಿನಲ್ಲಿ ಇರುವ ಕಾವೇರಿ ನೀರನ್ನು ನಾವು ಸರಿಯಾಗಿ ಸದುಪಯೋಗ ಪಡೆದುಕೊಳ್ಳುತ್ತಿಲ್ಲ ಎಂದು ತಿಳಿಸಿದರು. 

ನಗರದ ಸಣ್ಣ, ಪುಟ್ಟ ಕೆರೆಗಳಲ್ಲಿ ನೀರನ್ನು ಶೇಖರಿಸಿ, ಮಳೆ ನೀರನ್ನು ಅಲ್ಲೇ ಇಂಗುವಂತೆ ಮಾಡಿದರೆ ಅಂತರ್ಜಲ ವೃದ್ಧಿಯಾಗಿ ಜಲ ಅಭಾವ ದೂರವಾಗಲಿದೆ ಎಂದು ಸಲಹೆ ನೀಡಿದರು. 

ಮೇಕೆದಾಟು ಅಣೆಕಟ್ಟು ಕಟ್ಟಿದರೆ ಆ ಪ್ರದೇಶದ ಜೀವಸಂಕುಲಕ್ಕೆ ಹೊಡೆತ ಬೀಳಲಿದೆ. ಹಾಗೂ ಅಲ್ಲಿ ವಾಸಿಸುತ್ತಿರುವ ಅನೇಕ ಹಳ್ಳಿಗಳ ಜನರ ಜೀವನ ಬೀದಿಪಾಲಾಗಲಿದೆ. ಇದು ತಿಳಿದಿದ್ದರೂ ರಾಜ್ಯ ಸರಕಾರ ಯೋಜನೆಯನ್ನು ತರಲೆಬೇಕೆಂದು ಬಜೆಟ್‍ನಲ್ಲಿ ಈಗಾಗಲೇ 1 ಸಾವಿರ ಕೋಟಿ ರೂ.ಘೋಷಿಸಿದೆ. ಎಂದಿಗೂ ಈ ಯೋಜನೆ ಜಾರಿಗೆ ಬರಲು ನಾವು ಬಿಡುವುದಿಲ್ಲ. ರಾಜಕೀಯ ಲಾಭಕ್ಕಾಗಿ ಹೊರಟವರ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.

ಪರಿಸರ ಚಿಂತಕ ನಾಗೇಶ ಹೆಗಡೆ ಮಾತನಾಡಿ, ಬೆಂಗಳೂರು ಕೆರೆಗಳ ಹೂಳನ್ನು ಎತ್ತುವ ಮೂಲಕ ಅಂತರ್ಜಲವನ್ನು ಹೆಚ್ಚಿಸಬೇಕು. ಕೊಳಚೆ ನೀರನ್ನು ಶುದ್ಧೀಕರಿಸುವ ಅವಶ್ಯಕತೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಹಿತಿ ಬಿ.ಟಿ.ಲಲಿತಾನಾಯಕ್ ಉಪಸ್ಥಿತರಿದ್ದರು.  

ಮೇಕೆದಾಟು ಅಣೆಕಟ್ಟು ಕಟ್ಟುವುದಕ್ಕೆ ವಿರೋಧವಿದೆ 

‘ಹೊಸದಾಗಿ ಮೇಕೆದಾಟು ಅಣೆಕಟ್ಟು ಕಟ್ಟುವುದರ ಬಗ್ಗೆ ನಮ್ಮ ವಿರೋಧವಿದೆ. ಅಣೆಕಟ್ಟು ಕಟ್ಟಿದರೆ ಅಲ್ಲಿನ ಅರಣ್ಯ ಪ್ರದೇಶ ನಾಶವಾಗಿ ಜೀವಸಂಕುಲಕ್ಕೆ ಹೊಡೆತ ಬೀಳಲಿದೆ ಹಾಗೂ ಅಲ್ಲಿ ವಾಸಿಸುತ್ತಿರುವ ಅನೇಕ ಹಳ್ಳಿಗಳ ಜನರ ಜೀವನ ಬೀದಿಪಾಲಾಗಲಿದೆ.’

-ಚೇತನ್, ನಟ, ಸಾಮಾಜಿಕ ಹೋರಾಟಗಾರ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X