Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲಪ್ರಯೋಗಿಸಿ ಭಿನ್ನಾಭಿಪ್ರಾಯ...

ಬಲಪ್ರಯೋಗಿಸಿ ಭಿನ್ನಾಭಿಪ್ರಾಯ ಹತ್ತಿಕ್ಕುತ್ತಿರುವ ಬೆಲಾರಸ್: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ9 March 2022 11:52 PM IST
share
ಬಲಪ್ರಯೋಗಿಸಿ ಭಿನ್ನಾಭಿಪ್ರಾಯ ಹತ್ತಿಕ್ಕುತ್ತಿರುವ ಬೆಲಾರಸ್: ವಿಶ್ವಸಂಸ್ಥೆ ವರದಿ

ನ್ಯೂಯಾರ್ಕ್, ಮಾ.9: ಬೆಲಾರಸ್‌ನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲಾಗುತ್ತಿದೆ ಮತ್ತು ಮಾನವ ಹಕ್ಕು ವಂಚಿತರು ನ್ಯಾಯದ ನೆರೆವು ಪಡೆಯುವ ಮಾರ್ಗವನ್ನು ತಡೆಯಲಾಗಿದೆ. ಶಿಕ್ಷೆಯ ಭೀತಿಯಿಲ್ಲದ ಪರಿಸ್ಥಿತಿ ಆ ದೇಶದಲ್ಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಬೆಲಾರಸ್ ಸರಕಾರವು ವಿರೋಧಿಗಳ, ಮಾಧ್ಯಮ ಹಾಗೂ ಇತರರ ಮೇಲಿನ ದಮನವನ್ನು ಮುಂದುವರಿಸಿದ್ದು ಕಾನೂನನ್ನು ದುರುಪಯೋಗ ಪಡಿಸುತ್ತಿರುವ ಅಪರಾಧಿಗಳು ಉತ್ತರದಾಯಿತ್ವದಿಂದ ವಿನಾಯಿತಿ ಪಡೆದಿದ್ದಾರೆ ಎಂದು ದೇಶದೊಳಗಿನ ಪರಿಸ್ಥಿತಿಯ ಕುರಿತು ಬುಧವಾರ ಪ್ರಕಟವಾದ ಹೊಸ ವರದಿಯಲ್ಲಿ ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ಅಧ್ಯಕ್ಷೆ ಮಿಶೆಲ್ ಬ್ಯಾಚ್ಲೆಟ್ ಉಲ್ಲೇಖಿಸಿದ್ದಾರೆ. ಜನರ ಮೂಲಭೂತ ಹಕ್ಕು ಚಲಾವಣೆಯ ಅಧಿಕಾರವನ್ನೂ ನಿಷೇಧಿಸಲಾಗಿದೆ ಮತ್ತು ಸಂತ್ರಸ್ತರು ನ್ಯಾಯ ಪಡೆಯುವ ಅವಕಾಶದಿಂದಲೂ ವಂಚಿತರಾಗಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು, ನಾಗರಿಕ ಸಮಾಜ, ಸ್ವತಂತ್ರ್ಯ ಮಾಧ್ಯಮ ಮತ್ತು ವಿರೋಧ ಗುಂಪುಗಳನ್ನು ನಿಗ್ರಹಿಸಲು ಅಧಿಕಾರಿಗಳ ವ್ಯಾಪಕ ಮತ್ತು ನಿರಂತರ ಉಪಕ್ರಮಗಳು ಮತ್ತು ಅದೇ ಸಮಯದಲ್ಲಿ ಅಪರಾಧಿಗಳಿಗೆ ಅಭಯ ನೀಡುವ ಕ್ರಮದಿಂದಾಗಿ ಬೆಲಾರಸ್ನಲ್ಲಿ ಅಪರಾಧಿಗಳಿಗೆ ಸಂಪೂರ್ಣ ನಿರ್ಭಯದ ಪರಿಸ್ಥಿತಿ ನೆಲೆಸಿದೆ ಎಂದು ವರದಿ ಹೇಳಿದೆ. 2020ರ ಆಗಸ್ಟ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆ ಸಂದರ್ಭದಿಂದ 2021ರ ಡಿಸೆಂಬರ್ವರೆಗಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ವರದಿ ತಯಾರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ಅಲೆಕ್ಸಾಂಡರ್ ಲುಕಶೆಂಕೊ ಮತ್ತೊಂದು ಅವಧಿಗೆ ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಫಲಿತಾಂಶವನ್ನು ವಿರೋಧಿಸಿ ದೇಶದೆಲ್ಲೆಡೆ ಭುಗಿಲೆದ್ದ ಪ್ರತಿಭಟನೆಯನ್ನು ಅನಗತ್ಯ ಮತ್ತು ಅಸಮಾನ ಬಲವನ್ನು ಪ್ರಯೋಗಿಸಿ ಹಿಂಸಾತ್ಮಕ ರೀತಿಯಲ್ಲಿ ಹತ್ತಿಕ್ಕಲಾಗಿದ್ದು, 2020ರ ಮೇ ತಿಂಗಳಿಂದ 2021ರ ಮೇ ವರೆಗಿನ ಅವಧಿಯಲ್ಲಿ ಕನಿಷ್ಟ 37,000 ಜನರನ್ನು ಬಂಧನದಲ್ಲಿಡಲಾಗಿದೆ ಎಂದು ವರದಿ ಹೇಳಿದೆ. 2021ರ ಅಂತ್ಯದಲ್ಲಿ ರಾಜಕೀಯ ಪ್ರೇರಿತ ಪ್ರಕರಣದಲ್ಲಿ 969 ಮಂದಿ ಜೈಲಿನಲ್ಲಿದ್ದು ಇನ್ನೂ ಹಲವರಿಗೆ 10 ವರ್ಷ ಅಥವಾ ಅದಕ್ಕೂ ಹೆಚ್ಚಿನ ಅವಧಿಯ ಶಿಕ್ಷೆ ವಿಧಿಸಲಾಗಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X