Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅನ್ನಭಾಗ್ಯಕ್ಕೆ ಕನ್ನ: 23 ಕೋಟಿ ರೂ....

ಅನ್ನಭಾಗ್ಯಕ್ಕೆ ಕನ್ನ: 23 ಕೋಟಿ ರೂ. ಅಕ್ರಮ

ಜಿ.ಮಹಾಂತೇಶ್ಜಿ.ಮಹಾಂತೇಶ್10 March 2022 9:50 AM IST
share
ಅನ್ನಭಾಗ್ಯಕ್ಕೆ ಕನ್ನ: 23 ಕೋಟಿ ರೂ. ಅಕ್ರಮ

ಅಕ್ರಮ ವಾಗಿ ಪಡಿತರ ಆಹಾರ ಧಾನ್ಯಗಳನ್ನು ಸಾಗಣೆ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ 1,518 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಉಮೇಶ್ ಕತ್ತಿ ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ಬೆಂಗಳೂರು, ಮಾ.9: ‘ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆ ಕನ್ನ ಭಾಗ್ಯ ಯೋಜನೆಯಾಗಿದೆ. ಇಂತಹ ಸರಕಾರವನ್ನು ತೊಲಗಿಸೋಣ. ಇದಕ್ಕೆಲ್ಲಾ ಒಂದೇ ಪರಿಹಾರ ಬಿಜೆಪಿ ಗೆಲ್ಲಿಸಿ’ ಹೀಗೆಂದು ಹಿಂದೆ ಬಿಜೆಪಿ ಹುಯಿಲೆಬ್ಬಿಸಿತ್ತು. ಇದೀಗ ಬಿಜೆಪಿ ಸರಕಾರದ ಅವಧಿಯಲ್ಲೂ 23.29 ಕೋಟಿ ರೂ. ಮೊತ್ತದ ಅಕ್ರಮ ನಡೆದಿದೆ.

ಕಳೆದ ಮೂರು ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ವಿತರಣೆ ಮಾಡುವ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ 1,060 ಪ್ರಕರಣಗಳು ದಾಖಲಾಗಿವೆ ಎಂದು ಪ್ರಿಯಾಂಕ್ ಖರ್ಗೆ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ 2022ರ ಫೆ.24ರಂದು ವಿಧಾನಸಭೆಗೆ ಸಚಿವ ಉಮೇಶ್ ಕತ್ತಿ ಅವರು ಉತ್ತರಿಸಿದ್ದಾರೆ.

1,064 ಪ್ರಕರಣಗಳ ಪೈಕಿ ಅತಿ ಹೆಚ್ಚು ಎಂದರೆ 189 ಪ್ರಕರಣಗಳು ಬಳ್ಳಾರಿಯಲ್ಲಿ ದಾಖಲಾಗಿವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (2019-20- 2020-21) ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ 42 ಪ್ರಕರಣಗಳು ದಾಖಲಾಗಿದ್ದರೆ ಈ ಪೈಕಿ 32 ಎಫ್‌ಐಆರ್ ದಾಖಲಾಗಿವೆ.

ಇನ್ನುಳಿದಂತೆ ಬಾಗಲಕೋಟೆಯಲ್ಲಿ 68, ಬೆಂಗಳೂರು ಪೂರ್ವ ತಾಲೂಕಿನಲ್ಲಿ 17, ಬೆಳಗಾವಿಯಲ್ಲಿ 39, ಬೀದರ್‌ನಲ್ಲಿ 67, ಚಾಮರಾಜನಗರದಲ್ಲಿ 68, ಚಿತ್ರದುರ್ಗದಲ್ಲಿ 31, ದಾವಣಗೆರೆಯಲ್ಲಿ 59, ಗದಗ್‌ನಲ್ಲಿ 45, ಹಾವೇರಿಯಲ್ಲಿ 29, ಕಲಬುರಗಿಯಲ್ಲಿ 58, ಕೊಪ್ಪಳದಲ್ಲಿ 47, ಮಂಡ್ಯದಲ್ಲಿ 33, ಮೈಸೂರಿನಲ್ಲಿ 62, ರಾಯಚೂರಿನಲ್ಲಿ 40, ವಿಜಯಪುರದಲ್ಲಿ 40 ಪ್ರಕರಣಗಳು ದಾಖಲಾಗಿವೆ.

2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆ ಅಲ್ಲ ಕನ್ನ ಭಾಗ್ಯವೆಂದು ಬಿಜೆಪಿ ಪಕ್ಷವು ದೊಡ್ಡ ಮಟ್ಟದಲ್ಲಿ ಹುಯಿಲೆಬ್ಬಿಸಿತ್ತಲ್ಲದೆ ಈ ಸಂಬಂಧ ಟಿವಿ ಮತ್ತು ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ನೀಡಿತ್ತು.

 ಇದನ್ನು ಪ್ರತಿರೋಧಿಸಿದ್ದ ಕಾಂಗ್ರೆಸ್ ಪಕ್ಷವು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿತ್ತು. ಈ ದೂರಿನ ವಿಚಾರಣೆ ನಡೆಸಿದ್ದ ಚುನಾವಣೆ ಆಯೋಗದ ಅಧಿಕಾರಿ ಅನ್ನಭಾಗ್ಯ ಕನ್ನ ಭಾಗ್ಯವೆಂದು ನೀಡಿದ್ದ ಜಾಹೀರಾತಿಗೆ ದಾಖಲೆಗಳನ್ನು ಕೇಳಿದ್ದರು. ಆದರೆ ಜಾಹೀರಾತು ಬಿಡುಗಡೆ ಮಾಡಿದ್ದ ಬಿಜೆಪಿಯು ಅನ್ನ ಭಾಗ್ಯ ಕನ್ನ ಭಾಗ್ಯವೆಂದು ಸಾಬೀತುಪಡಿಸುವಲ್ಲಿ ವಿಫಲವಾಗಿದ್ದಲ್ಲದೆ ಆರೋಪಕ್ಕೆ ಸಂಬಂಧಿಸಿದಂತೆ ಕೆಲ ಪತ್ರಿಕಾ ತುಣುಕುಗಳನ್ನಷ್ಟೇ ನೀಡಿತ್ತೇ ವಿನಃ ಯಾವುದೇ ದಾಖಲೆಗಳನ್ನು ಒದಗಿಸಿರಲಿಲ್ಲ.

ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಕೇಂದ್ರ ಸರಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2,17,403 ಮೆಟ್ರಿಕ್ ಟನ್ ಅಕ್ಕಿಯನ್ನು 3 ರೂ. ಸಬ್ಸಿಡಿ ದರದಲ್ಲಿ ಹಂಚಿಕೆ ಮಾಡುತ್ತಿದೆ. ಇದರೊಂದಿಗೆ ರಾಜ್ಯ ಸರಕಾರವು 15,500 ಮೆಟ್ರಿಕ್ ಟನ್ ಅಕ್ಕಿಯನ್ನು ಒಎಂಎಸ್‌ಎಸ್ ದರದಲ್ಲಿ ಖರೀದಿಸುತ್ತಿದೆ.

ಅಂತ್ಯೋದಯ ಪಡಿತರ ಚೀಟಿದಾರರ ಪ್ರತಿ ಪಡಿತರ ಚೀಟಿದಾರರಿಗೆ 35 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಆದ್ಯತಾ (ಬಿಪಿಎಲ್) 5 ಕೆ.ಜಿ. ಪ್ರತಿ ಸದಸ್ಯರಿಗೆ ಉಚಿತ ಅಕ್ಕಿ, ಆದ್ಯತೇತರ (ಎಪಿಎಲ್) 5 ಕೆ.ಜಿ. ಅಕ್ಕಿ ಏಕ ಸದಸ್ಯ ಪಡಿತರ ಚೀಟಿ ಮತ್ತು ಒಬ್ಬರಿಗಿಂತ ಹೆಚ್ಚಿನ ಸದಸ್ಯ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ 15 ರೂ.ನಂತೆ ವಿತರಿಸುತ್ತಿದೆ. ಅನ್ನ ಭಾಗ್ಯ ಯೋಜನೆಯ ಅಕ್ಕಿ ಖರೀದಿಗಾಗಿ ಪ್ರತಿ ತಿಂಗಳು ರಾಜ್ಯ ಸರಕಾರವು 154.32 ಕೋಟಿ ರೂ. ಖರ್ಚು ಮಾಡುತ್ತದೆ.

ಒಟ್ಟು 1,060 ಪ್ರಕರಣಗಳಲ್ಲಿ 1,05,857.74 ಕ್ವಿಂಟಾಲ್ ಅಕ್ಕಿ, 1,573.10 ಕ್ವಿಂಟಾಲ್ ಗೋಧಿ, 982.24 ಕ್ವಿಂಟಾಲ್ ರಾಗಿ, 9.30 ಕ್ವಿಂಟಾಲ್ ತೊಗರಿಬೇಳೆ, 1,519 ಲೀಟರ್ ಪೆಟ್ರೋಲ್, 5,988.24 ಲೀ. ಡೀಸೆಲ್ ಮತ್ತು 845 ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 23,29,95,831 ರೂ. ಆಗಿದೆ ಎಂದು ಸಚಿವ ಕತ್ತಿ ಅಂಕಿ ಅಂಶ ಒದಗಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X