Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನೂರನೇ ದಿನಕ್ಕೆ ಕಾಲಿಟ್ಟ...

ಬೆಂಗಳೂರು: ನೂರನೇ ದಿನಕ್ಕೆ ಕಾಲಿಟ್ಟ ಐಟಿಐ ಕಾರ್ಮಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 March 2022 8:25 PM IST
share
ಬೆಂಗಳೂರು: ನೂರನೇ ದಿನಕ್ಕೆ ಕಾಲಿಟ್ಟ ಐಟಿಐ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಮಾ.10: ನಗರದ ಕೆ.ಆರ್.ಪುರಂನ ಬಳಿ ಇರುವ ಐಟಿಐ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 80 ಜನ ಕಾರ್ಮಿಕರನ್ನು ಆಡಳಿತ ಮಂಡಳಿಯು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದಿದೆ. ಕಳೆದ 3 ವರ್ಷಗಳಿಂದ 30 ವರ್ಷದವರೆಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಹಕ್ಕುಗಳನ್ನು ಕೇಳಿದ ಪರಿಣಾಮವಾಗಿ ಕೇಂದ್ರ ಸರಕಾರ ಒಡೆತನದ ಐಟಿಐ ಆಡಳಿತ ಮಂಡಳಿಯು ಡಿ.1ರಂದು ಕಾರ್ಮಿಕರನ್ನು ಕೆಲಸದಿಂದ ತೆಗೆಯಿತು. ಇದನ್ನು ಖಂಡಿಸಿ ಕಳೆದ ನೂರು ದಿನಗಳಿಂದ ಕಾರ್ಖಾನೆಯ ಮುಂಭಾಗ ತಾತ್ಕಾಲಿಕ ಬಿಡಾರವನ್ನು ನಿರ್ಮಿಸಿಕೊಂಡು ಹಗಲು-ರಾತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ. 

ಐಟಿಐ ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಒಂದೇ ಗುತ್ತಿಗೆ ಕಂಪನಿಯ ಅಧೀನದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದರೆ ಕಾಯಂಗೊಳಿಸಬೇಕು ಎಂಬ ನೆಪವೊಡ್ಡಿ, ಮತ್ತೊಂದು ಕಂಪನಿಗೆ ಕಾರ್ಮಿಕರನ್ನು ವರ್ಗಾಯಿಸುವ ತಂತ್ರಗಾರಿಕೆಯನ್ನು ಐಟಿಐ ಆಡಳಿತ ಮಂಡಳಿ ಕಂಡುಕೊಂಡಿದೆ. ಹೀಗೆ ಗುತ್ತಿಗೆ ಕಂಪನಿಯನ್ನು ಬದಲಿಸುವುದರಿಂದ ಕಾರ್ಮಿಕರ ಅನುಭವ ಶೂನ್ಯವಾಗುತ್ತದೆ. ಅಲ್ಲದೆ, ಕಾರ್ಮಿಕರನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ಕಾಲಕಾಲಕ್ಕೆ ಸಂಬಳವನ್ನು ಏರಿಸಲು ಅವಕಾಶ ಇರುವುದಿಲ್ಲ. ಹಾಗಾಗಿ ಇದೊಂದು ಆಧುನಿಕ ಜೀತಪದ್ಧತಿಯಾಗಿದ್ದು, ಇದನ್ನು ವಿರೋಧಿಸಿದ ಕಾರಣ ಕಾರ್ಮಿಕರಿಗೆ ಕೆಲಸವನ್ನು ನಿರಾಕರಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. 

ಐಟಿಐ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸಿ, ವಜಾಗೊಂಡ ಕಾರ್ಮಿಕ ಹೇಮಂತ್ ಮಾತನಾಡಿ, ಕೆಲಸವನ್ನು ನಿರಾಕರಿಸುವ ಮೊದಲು ಕೋವಿಡ್ ಸಂದರ್ಭದಲ್ಲಿ ದುಡಿದ ಸಂಬಳವನ್ನು ಐಟಿಐ ಆಡಳಿತ ಮಂಡಳಿ ನೀಡದಿದ್ದಾಗ, ಪ್ರಾದೇಶಿಕ ಕಾರ್ಮಿಕ ಆಯುಕ್ತರ ಬಳಿ ದೂರು ಸಲ್ಲಿಸಿ, ಸಂಬಳವನ್ನು ಪಡೆದಿದ್ದೆವು. ಬಳಿಕ ಕಾನೂನಿನ ಪ್ರಕಾರ ಸಿಗಬೇಕಾದ ಕೆಲವೊಂದು ಸವಲತ್ತುಗಳನ್ನು ಪಡೆಯಲು ಕಾರ್ಮಿಕರೆಲ್ಲಾ ಒಗ್ಗೂಡಿ ಸಂಘವನ್ನು ಸ್ಥಾಪಿಸಿಕೊಂಡಿದ್ದೆವು. ಹಲವಾರು ಕಾರ್ಮಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಐಟಿಐ ಆಡಳಿತ ಮಂಡಳಿಗೆ ಬಗೆಹರಿಸುವಂತೆ ಮನವಿ ಮಾಡಿಕೊಳ್ಳಲಾಯಿತು. ಆದರೆ, ಆಡಳಿತ ಮಂಡಳಿಯು ಅದನ್ನು ತಿರಸ್ಕರಿಸಿದ ಕಾರಣ ಪ್ರಾದೇಶಿಕ ಕಾರ್ಮಿಕ ಆಯುಕ್ತರ ಬಳಿ ದೂರು ಸಲ್ಲಿಸಿದ್ದೇವೆ. ಆಯುಕ್ತರು ದೂರನ್ನು ಸ್ವೀಕರಿಸಿ, ವಿಚಾರಣೆಗೆ ಕಾಯ್ದಿರಿಸಿದ್ದಾರೆ. ವಿಚಾರಣೆ ನಡೆಯುವವರೆಗೆ ಕಾರ್ಮಿಕರನ್ನು ತೆಗೆಯದಂತೆ ತಿಳಿಸಿದ್ದಾರೆ. ಆದರೆ ಇದ್ಯಾವುದನ್ನು ಲೆಕ್ಕಿಸದೆ, ಆಡಳಿತ ಮಂಡಳಿಯು 80 ಕಾರ್ಮಿಕರನ್ನು ಬೀದಿಪಾಲು ಮಾಡಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. 

ಕಾರ್ಮಿಕರನ್ನು ವಜಾಗೊಳಿಸಿರುವುದು ಕಾನೂನಿನ ಉಲ್ಲಂಘನೆಯಾಗಿದೆ. ಹಾಗಾಗಿ ಮರಳಿ ಕೆಲಸಕ್ಕೆ ಸೇರಿಸಿ, ಕಾನೂನಿನ ಸವಲತ್ತುಗಳನ್ನು ನೀಡಿ, ಗೌರವದಿಂದ ನಡೆಸಿಕೊಳ್ಳಬೇಕು. ರಾಜ್ಯ ಮತ್ತು ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X