Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ: ಜೀತದಾಳುಗಳಾಗಿ ಬಂಧಿಯಾಗಿದ್ದ...

ಸಾಗರ: ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢದ 19 ಮಂದಿಯ ರಕ್ಷಣೆ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ10 March 2022 10:38 PM IST
share
ಸಾಗರ: ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢದ 19 ಮಂದಿಯ ರಕ್ಷಣೆ; ಪ್ರಕರಣ ದಾಖಲು

ಸಾಗರ,ಮಾ.10 : ತಾಲೂಕಿನ ಆವಿನಹಳ್ಳಿಯ ಅಟಲ್ ಬಿಹಾರಿ ವಸತಿ ಶಾಲೆ ನಿರ್ಮಾಣದಲ್ಲಿ ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢ ರಾಜ್ಯದ 19 ಜನರನ್ನು ಉಪವಿಭಾಗಾಧಿಕಾರಿ ಡಾ. ನಾಗರಾಜ್ ಎಲ್. ನೇತೃತ್ವದ ತಂಡ ರಕ್ಷಣೆ ಮಾಡಿ ಬುಧವಾರ ರಾತ್ರಿ ಸರ್ಕಾರಿ ಬಸ್‍ನಲ್ಲಿ ಅವರ ರಾಜ್ಯಕ್ಕೆ ವಾಪಾಸ್ ಕಳಿಸಿಕೊಡಲಾಗಿದೆ. 

ಆವಿನಹಳ್ಳಿಯ ಅಟಲ್ ಬಿಹಾರಿ ವಸತಿ ಶಾಲೆ ನಿರ್ಮಾಣ ಕಾರ್ಯಕ್ಕೆ ಛತ್ತಿಸಗಢ ರಾಜ್ಯದ ಸುಖ್ಮಾ ಜಿಲ್ಲೆಯ 19ಜನರನ್ನು ಕೆಲಸಕ್ಕೆ ಕರೆ ತರಲಾಗಿತ್ತು. ಈ ಕಾರ್ಮಿಕರಿಗೆ ಊಟ ವಸತಿ, ಸಂಬಳವನ್ನು ಸಹ ಕೊಡದೇ, ಅವರ ಊರಿಗೂ ಕಳಿಸದೆ ಇಲ್ಲಿ ಬಂಧಿಯಾಗಿರಿಸಿಕೊಂಡು ಕೂಲಿ ಕೆಲಸ ಮಾಡಿಸಿಕೊಳ್ಳಲಾಗುತಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪವಿಭಾಗಾಧಿಕಾರಿಗಳು ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಎಲ್ಲ ಜೀತಾದಾಳುಗಳನ್ನು ಬಂಧಮುಕ್ತಗೊಳಿಸಲಾಗಿದೆ. ಈ ಸಂಬಂಧ ನಾಲ್ಕು ಜನರ ವಿರುದ್ದ ಎಫ್.ಐ.ಆರ್. ದಾಖಲು ಮಾಡಲಾಗಿದ್ದು, ವಿಚಾರಣೆಗೆ ಕರೆಯಲಾಗಿದೆ. 

ಜೀತದಾಳುಗಳ ಪೈಕಿ ಆರು ಜನ ಮಹಿಳೆಯರು, ಐವರು ಬಾಲ ಕಾರ್ಮಿಕರು ಮತ್ತು 8ಜನ ಪುರುಷರು ಇದ್ದಾರೆ. ಸುಖ್ಮಾ ಜಿಲ್ಲೆಯ ಉಪ ತಹಶೀಲ್ದಾರ್ ಮತ್ತು ಕಾರ್ಮಿಕ ನಿರೀಕ್ಷಕರ ನೇತೃತ್ವದಲ್ಲಿ ಜೀತಕಾರ್ಮಿಕರನ್ನು ಹಸ್ತಾಂತರಿಸಿ, ಛತ್ತಿಸಗಢಕ್ಕೆ ಕರೆದುಕೊಂಡು ಹೋಗಲು ತಾಲ್ಲೂಕು ಆಡಳಿತದಿಂದ ಬಸ್ ಸೌಲಭ್ಯ ಒದಗಿಸಲಾಗಿದೆ. 

ಈ ಕುರಿತು ಮಾತನಾಡಿದ ಉಪವಿಭಾಗಾಧಿಕಾರಿ ಡಾ. ನಾಗರಾಜ್ ಎಲ್. ಛತ್ತಿಸಗಢದಿಂದ 19 ಜನ ಕಾರ್ಮಿಕರನ್ನು ಕರೆದುಕೊಂಡು ಬಂದಿರುವ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೆಲಸಕ್ಕಾಗಿ ಕರೆದುಕೊಂಡು ಬಂದ ಕಾರ್ಮಿಕರಿಗೆ ಸಂಬಳ ಕೊಡದೆ, ಹಳಸಿದ ಊಟವನ್ನು ನೀಡಿ, ಊರಿಗೂ ಹೋಗಲು ಬಿಡುತ್ತಿಲ್ಲ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಈ ಸಂಬಂಧ ಮಾ. 5ರಂದು ಛತ್ತಿಸಗಢದ ಸುಖ್ಮಾ ಜಿಲ್ಲೆಯ ಉಪ ತಹಶೀಲ್ದಾರ್ ಮತ್ತು ಕಾರ್ಮಿಕ ನಿರೀಕ್ಷಕರು ಸಾಗರಕ್ಕೆ ಬಂದಿದ್ದಾರೆ ಎಂದರು. 

ಕಾರ್ಮಿಕರನ್ನು ಆವಿನಹಳ್ಳಿಯ ಅಟಲಿ ಬಿಹಾರಿ ವಸತಿ ಶಾಲೆ ನಿರ್ಮಾಣ ಪ್ರದೇಶದಲ್ಲಿ ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತಿತ್ತು. ಇವರನ್ನು ಗುತ್ತಿಗೆ ಕಾರ್ಮಿಕರನ್ನಾಗಿ ಕಳಿಸಿದ್ದು ರಾಮಕಿಶನ್ ಎಂಬ ಬೆಂಗಳೂರಿನ ವ್ಯಕ್ತಿ,  ಮ್ಯಾನ್‍ಪವರ್ ಏಜೆನ್ಸಿಯ ಬಾಬು, ರಾಮಕೃಷ್ಣ ಮತ್ತು ತಿರುಪತಿ ಅವರ ಮೇಲೆ ಬಾಲಕಾರ್ಮಿಕರ ಅಪರಾಧ ಕಾಯ್ದೆ, ಜೀತಪದ್ದತಿ ಅಡಿ ಪ್ರಕರಣ ದಾಖಲಿಸಲಾಗಿದೆ. ಜೀತದಾಳುಗಳಾಗಿ ದುಡಿಯುತ್ತಿದ್ದ 19ಜನರಿಗೆ ಊಟ ವಸತಿ ನೀಡಿ, ಬಿಡುಗಡೆ ಪತ್ರವನ್ನು ಕೊಟ್ಟು ಅಲ್ಲಿನ ಅಧಿಕಾರಿಗಳಿಗೆ ಹಸ್ತಾಂತರಿಸಿ, ಛತ್ತಿಸಗಢಕ್ಕೆ ಸರ್ಕಾರಕ್ಕೆ ಕಳಿಸುತ್ತಿದ್ದೇವೆ. ಜೀತದಾಳುಗಳಿಗೆ ಸಂಬಳ ಕೊಡುವುದು ಬಾಕಿ ಇದ್ದು, ಇದನ್ನು ಸಂಬಂಧಪಟ್ಟ ಗುತ್ತಿಗೆದಾರರಿಂದ ವಸೂಲಿ ಮಾಡಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್,ಚಂದ್ರಶೇಖರ್, ಸುಖ್ಮಾ ಜಿಲ್ಲೆಯ ಉಪ ತಹಶೀಲ್ದಾರ್ ಸತಾನಂದನಾಗ್, ಕಾರ್ಮಿಕ ನಿರೀಕ್ಷಕ ಜೆ.ಎಲ್. ದೇವಾಂಗನ್ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X