Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ರಾಜ್ಯಗಳಲ್ಲಿ ಮತಗಳಿಕೆ...

ನಾಲ್ಕು ರಾಜ್ಯಗಳಲ್ಲಿ ಮತಗಳಿಕೆ ಹೆಚ್ಚಿಸಿಕೊಂಡ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ11 March 2022 8:43 AM IST
share
ನಾಲ್ಕು ರಾಜ್ಯಗಳಲ್ಲಿ ಮತಗಳಿಕೆ ಹೆಚ್ಚಿಸಿಕೊಂಡ ಬಿಜೆಪಿ

ಹೊಸದಿಲ್ಲಿ: ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಮತಗಳಿಕೆ ಪ್ರಮಾಣ ಹೆಚ್ಚಿರುವುದು ಅಂಕಿ ಅಂಶಗಳ ವಿಶ್ಲೇಷಣೆಯಿಂದ ತಿಳಿದು ಬಂದಿದೆ. ಆದರೆ ಉತ್ತರಾಖಂಡದಲ್ಲಿ ಮಾತ್ರ ಬಿಜೆಪಿ ಮತ ಗಳಿಕೆ ಕುಸಿದಿದೆ. ಪಂಜಾಬ್‌ನಲ್ಲಿ ಕೇವಲ ಎರಡು ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೂ, ಮತಗಳಿಕೆ ಅಲ್ಪ ಏರಿಕೆ ಕಂಡಿದೆ.

ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ 38.67ರಷ್ಟು ಇದ್ದ ಬಿಜೆಪಿ ಮತಗಳಿಕೆ ಈ ಬಾರಿ ಶೇಕಡ 2.13ರಷ್ಟು ಹೆಚ್ಚಿ 41.8 ಶೇಕಡ ಆಗಿದೆ. ಆದರೆ ಪಕ್ಷ ಗೆದ್ದ ಸ್ಥಾನಗಳ ಸಂಖ್ಯೆ 312ರಿಂದ 274ಕ್ಕೆ ಇಳಿದಿದೆ. ಸಮಾಜವಾದಿ ಪಕ್ಷದ ಮತ ಪ್ರಮಾಣ 2017ರಲ್ಲಿ ಶೇಕಡ 21.82 ಇದ್ದುದು ಈ ಬಾರಿ 32.02 ಕ್ಕೆ ಏರಿದೆ. 124 ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಿದೆ ಅಥವಾ ಮುನ್ನಡೆಯಲ್ಲಿದೆ. ಹೀಗೆ ವಿರೋಧ ಪಕ್ಷವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಬಹುಜನ ಸಮಾಜ ಪಕ್ಷದ ಮತಗಳಿಕೆ ಕಳೆದ ಬಾರಿ ಶೇಕಡ 22.23 ಇದ್ದುದು ಈ ಬಾರಿ 12.66ಕ್ಕೆ ಕುಸಿದಿದೆ. ಐದು ವರ್ಷಗಳ ಹಿಂದೆ 19 ಸ್ಥಾನ ಗೆದ್ದಿದ್ದ ಬಿಎಸ್ಪಿ ಈ ಬಾರಿ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. 2017ರಲ್ಲಿ ಶೇಕಡ 6.25 ಮತ ಗಳಿಸಿದ್ದ ಕಾಂಗ್ರೆಸ್‌ನ ಗಳಿಕೆ ಈ ಬಾರಿ ಶೇಕಡ 2.4ಕ್ಕೆ ಕುಸಿದಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಮತಗಳಿಕೆ ಶೇಕಡ 10.2ರಷ್ಟು ಹೆಚ್ಚಿದ್ದರೆ, ಬಿಎಸ್ಪಿ ಗಳಿಕೆ ಶೇಕಡ 9.57ರಷ್ಟು ಕಡಿಮೆಯಾಗಿದೆ.

ಆದರೆ ಉತ್ತರಾಖಂಡದಲ್ಲಿ ಬಿಜೆಪಿ ಮತಗಳಿಕೆ 2017ರಲ್ಲಿ ಶೇಕಡ 46.5 ಇದ್ದುದು ಈ ಬಾರಿ ಶೇಕಡ 44.3ಕ್ಕೆ ಇಳಿದಿದೆ. 70 ಸ್ಥಾನಗಳ ಪೈಕಿ ಕಳೆದ ಬಾರಿ 57 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 47ಕ್ಕೆ ತೃಪ್ತಿಪಟ್ಟುಕೊಂಡಿದೆ. ಉತ್ತರಾಖಂಡ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‌ನ ಮತಗಳಿಕೆ ಕುಸಿದಿದೆ. ಉತ್ತರಾಖಂಡದಲ್ಲಿ ಮತಗಳಿಕೆ ಹೆಚ್ಚಿದ್ದರೂ ಅದು ಸೀಟುಗಳಾಗಿ ಪರಿವರ್ತನೆಯಾಗಿಲ್ಲ. ಕಳೆದ ಬಾರಿ 11 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಗೋವಾದಲ್ಲಿ ಬಿಜೆಪಿ ಮತ ಪ್ರಮಾಣ ಶೇಕಡ 32.5ರಿಂದ 33.3ಕ್ಕೇರಿದೆ. ಆದರೆ ಕಳೆದ ಬಾರಿಗಿಂತ ಏಳು ಸ್ಥಾನಗಳನ್ನು ಹೆಚ್ಚಾಗಿ ಗೆದ್ದುಕೊಂಡಿದೆ. ಈ ಕರಾವಳಿ ರಾಜ್ಯದಲ್ಲಿ ಕಾಂಗ್ರೆಸ್ ಮತಗಳಿಕೆ ಶೇಕಡ 28.4ರಿಂದ ಶೇಕಡ 23.5ಕ್ಕೆ ಇಳಿದಿದೆ. ಐದು ವರ್ಷಗಳ ಹಿಂದೆ 17 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 11ಕ್ಕೆ ತೃಪ್ತಿಪಟ್ಟುಕೊಂಡಿದೆ.

ಆಮ್ ಆದ್ಮಿ ಪಕ್ಷದ ಸಾಧನೆ ಪಂಜಾಬ್‌ನಲ್ಲಿ ಅಮೋಘವಾಗಿದ್ದು, ಕಳೆದ ಚುನಾವಣೆಯಲ್ಲಿ 20 ಸ್ಥಾನ ಹೊಂದಿದ್ದ ಪಕ್ಷ ಈ ಬಾರಿ 92ಕ್ಕೇರಿಸಿಕೊಂಡಿದೆ. ಮತ ಗಳಿಕೆ ಕೂಡಾ ಐದು ವರ್ಷಗಳ ಹಿಂದೆ ಶೇಕಡ 23.7 ಇದ್ದುದು ಶೇಕಡ 42ಕ್ಕೇರಿದೆ. ಇಲ್ಲಿ ಕಾಂಗ್ರೆಸ್ ಮತಗಳಿಕೆ ಶೇಕಡ 38.5ರಿಂದ 23ಕ್ಕೆ ಕುಸಿದಿದೆ. ಐದು ವರ್ಷ ಹಿಂದೆ 77 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 18ಕ್ಕೆ ತೃಪ್ತಿಪಟ್ಟಿದೆ. ಬಿಜೆಪಿ ಮತಪ್ರಮಾಣ ಶೇಕಡ 5.4ರಿಂದ 6.6ಕ್ಕೇರಿದೆ.

ಮಣಿಪುರದಲ್ಲಿ ಬಿಜೆಪಿ ಮತ ಗಳಿಕೆ ಶೇಕಡ 36.3ರಿಂದ 37.5ಕ್ಕೇರಿದೆ. ಸ್ಥಾನಗಳ ಸಂಖ್ಯೆ 21ರಿಂದ 32ಕ್ಕೇರಿದೆ. ಕಳೆದ ಬಾರಿ ಶೇಕಡ 35.1ರಷ್ಟು ಮತ ಗಳಿಸಿದ್ದ ಕಾಂಗ್ರೆಸ್ ಈ ಬಾರಿ 16.5 ಶೇಕಡ ಮತ ಮಾತ್ರ ಗಳಿಸಿದೆ. ಕೊನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಮತ ಗಳಿಕೆ ಶೇಕಡ 5.1ರಿಂದ 16.48ಕ್ಕೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X