Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧದಲ್ಲಿ ಹೋರಾಡಲು ಸಿರಿಯಾ...

ಯುದ್ಧದಲ್ಲಿ ಹೋರಾಡಲು ಸಿರಿಯಾ ಸ್ವಯಂಸೇವಕರ ಬಳಕೆ: ರಶ್ಯ

ವಾರ್ತಾಭಾರತಿವಾರ್ತಾಭಾರತಿ11 March 2022 11:00 PM IST
share
ಯುದ್ಧದಲ್ಲಿ ಹೋರಾಡಲು ಸಿರಿಯಾ ಸ್ವಯಂಸೇವಕರ ಬಳಕೆ: ರಶ್ಯ

ಮಾಸ್ಕೊ, ಮಾ.11: ಸಿರಿಯಾ ಮತ್ತು ಮಧ್ಯಪ್ರಾಚ್ಯದ ಹೋರಾಟಗಾರರಿಗೆ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ರಶ್ಯದ ಅಧ್ಯಕ್ಷರ ಕಚೇರಿಯ ಹೇಳಿಕೆ ತಿಳಿಸಿದೆ. ಉಕ್ರೇನ್ ವಿರುದ್ಧಧ ಹೋರಾಟದಲ್ಲಿ ರಶ್ಯ ಪರ ಪಾಲ್ಗೊಳ್ಳಲು ಬಯಸುವವರು ಮತ್ತು ಪಾಲ್ಗೊಳ್ಳುವುದಾಗಿ ಹೇಳಿದವರಲ್ಲಿ ಹೆಚ್ಚಿನವರು ಮಧ್ಯಪ್ರಾಚ್ಯ ದೇಶ ಹಾಗೂ ಸಿರಿಯಾದ ಪ್ರಜೆಗಳು ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 

ಸಿರಿಯಾದಲ್ಲಿ 2015ರಿಂದ ಬಂಡುಗೋರರ ವಿರುದ್ಧ ಹೋರಾಡುವ ಸರಕಾರಿ ಪಡೆಗಳಿಗೆ ನೆರವಾಗುವ ದೇಶಗಳಲ್ಲಿ ರಶ್ಯ ಪ್ರಮುಖವಾಗಿದೆ. ಸ್ವಯಂ ಸೇವಕ ಹೋರಾಟಗಾರರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ಬಳಸುವ ಪ್ರಸ್ತಾವ ಸ್ವೀಕಾರಾರ್ಹವಾಗಿದೆ. ಅಮೆರಿಕವು ಉಕ್ರೇನ್ ಪರ ಹೋರಾಡಲು ಬಾಡಿಗೆ ಸಿಪಾಯಿಗಳನ್ನು ಕಳುಹಿಸಿದೆ ಎಂದು ಪೆಸ್ಕೋವ್ ಸಮರ್ಥಿಸಿಕೊಂಡಿದ್ದಾರೆ. 

ಪಾಶ್ಚಿಮಾತ್ಯ ದೇಶಗಳು ಬಾಡಿಗೆ ಸಿಪಾಯಿಗಳ ಆಗಮನದ ಬಗ್ಗೆ ಅಷ್ಟೊಂದು ಉತ್ಸುಕರಾಗಿದ್ದರೆ, ನಮ್ಮಲ್ಲೂ ಯುದ್ಧದಲ್ಲಿ ಪಾಲ್ಗೊಳ್ಳಬಯಸುವ ಬಾಡಿಗೆ ಸಿಪಾಯಿಗಳಿದ್ದಾರೆ ಎಂದವರು ಹೇಳಿದ್ದಾರೆ. ವಿದೇಶಿಯರ ಸಹಿತ ಸ್ವಯಂಸೇವಕ ಹೋರಾಟಗಾರರನ್ನು ಉಕ್ರೇನ್ ವಿರುದ್ಧದ ಕದನದಲ್ಲಿ ಬಳಸುವ ಪ್ರಸ್ತಾವನೆಗೆ ಶುಕ್ರವಾರ(ಮಾ.11) ಪುಟಿನ್ ಅನುಮೋದನೆ ನೀಡಿದ್ದಾರೆ. ಸುಮಾರು 16,000 ಸ್ವಯಂಸೇವಕರು (ಇದರಲ್ಲಿ ಹೆಚ್ಚಿನವರು ಮಧ್ಯಪ್ರಾಚ್ಯ ದೇಶಗಳ ಪ್ರಜೆಗಳು) ಯುದ್ಧದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿದ್ದಾರೆ ಎಂದು ರಶ್ಯದ ರಕ್ಷಣಾ ಸಚಿವ ಸೆರ್ಗೈ ಶೊಯಿಗು ಹೇಳಿದ್ದಾರೆ. ರಶ್ಯ ವಿರುದ್ಧದ ಹೋರಾಟಕ್ಕೆ ನೆರವಾಗಬಯಸುವ ವಿದೇಶಿ ಸ್ವಯಂ ಸೇವಕರ ತಂಡವನ್ನು ರಚಿಸುವುದಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಇತ್ತೀಚೆಗೆ ಹೇಳಿದ್ದರು. 

ಸ್ವಯಂ ಸೇವಕ ಪಡೆ ಪ್ರಸ್ತಾವನೆಗೆ ಪುಟಿನ್ ಅನುಮೋದನೆ

ಉಕ್ರೇನ್ ವಿರುದ್ಧ ರಶ್ಯ ಪಡೆ ನಡೆಸುತ್ತಿರುವ ವಿಶೇಷ ಕಾರ್ಯಾಚರಣೆಯಲ್ಲಿ ರಶ್ಯ ಪರ ಹೋರಾಡಲು ಆಸಕ್ತರಾಗಿರುವ ವಿದೇಶಿ ಸ್ವಯಂ ಸೇವಕರಿಗೆ ಎಲ್ಲಾ ವ್ಯವಸ್ಥೆ ಮಾಡುವುದಾಗಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ಟಿವಿ ವಾಹಿನಿಯ ಮೂಲಕ ನಡೆಸಿದ ಭದ್ರತಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪುಟಿನ್ ‘ ಪೂರ್ವ ಉಕ್ರೇನ್ನ ಪ್ರತ್ಯೇಕತಾವಾದಿ ಪಡೆಗಳಿಗೆ ನೆರವಾಗಲು ಸ್ವಯಂಸೇವಕರಾಗಿ ಮುಂದೆ ಬರುವವರನ್ನು ಸ್ವಾಗತಿಸಿ, ಯುದ್ಧವಲಯದತ್ತ ತೆರಳಲು ಅವರಿಗೆ ನೆರವಾಗುವುದು ಈಗಿನ ಅಗತ್ಯವಾಗಿದೆ’ ಎಂದರು. 

ಪಾಶ್ಚಿಮಾತ್ಯ ದೇಶಗಳು ಉಕ್ರೇನ್ಗೆ ರವಾನಿಸಿದ ಶಸ್ತ್ರಾಸ್ತ್ರಗಳು ರಶ್ಯ ಪಡೆಗಳ ಕೈಸೇರಿದ್ದು ಇವನ್ನು ಪೂರ್ವ ಉಕ್ರೇನ್ನಲ್ಲಿ ಹೋರಾಟ ಮುಂದುವರಿಸಿರುವ ಪ್ರತ್ಯೇಕತಾವಾದಿಗಳ ಡಿಎನ್ಆರ್ ಮತ್ತು ಎಲ್ಎನ್ಆರ್ (ಡೊನೆಟ್ಸ್ಕ್ ಮತ್ತು ಲುಗಾಂಸ್ಕ್ ಪ್ರಾಂತದ ಮೇಲೆ ನಿಯಂತ್ರಣ ಹೊಂದಿರುವ ಪಡೆ) ಸೇನಾ ತುಕಡಿಗಳಿಗೆ ಒದಗಿಸಲಾಗುವುದು. ಅಲ್ಲದೆ ರಶ್ಯದ ಪಶ್ಚಿಮ ಗಡಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ನೇಟೊ ದೇಶಗಳು ನಡೆಸುತ್ತಿರುವ ಕ್ರಮಗಳ ಹಿನ್ನೆಲೆಯಲ್ಲಿ, ಪಶ್ಚಿಮದ ಗಡಿಯನ್ನು ಇನ್ನಷ್ಟು ಬಲಗೊಳಿಸುವ ಕುರಿತ ವರದಿ ಸಲ್ಲಿಸುವಂತೆ ರಕ್ಷಣಾ ಸಚಿವ ಸೆರ್ಗೈ ಶೊಯಿಗು ಅವರಿಗೆ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X